AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದೃಷ್ಟದ ಸ್ಪರ್ಧಿಯ ಅದೃಷ್ಟ ಖೋತಾ: ಅಚ್ಚರಿಯ ಎವಿಕ್ಷನ್ ಏನಲ್ಲ

Bigg Boss Kannada 12: ಕಳೆದ ವಾರ ಇಬ್ಬರು ಪ್ರಮುಖ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಿದ್ದರು. ಮಾಳು ಮತ್ತು ಸೂರಜ್ ಅವರು ಎವಿಕ್ಟ್ ಆಗಿದ್ದರು. ಅದು ನಿಜಕ್ಕೂ ಅಚ್ಚರಿಯ ಎವಿಕ್ಷನ್ ಎನಿಸಿಕೊಂಡಿತ್ತು. ಆದರೆ ಈ ವಾರ ತೀರ ಅಚ್ಚರಿಯ ಎವಿಕ್ಷನ್ ಎನಿಸಲಿಲ್ಲ, ಬದಲಿಗೆ ನಿರೀಕ್ಷಿತ ಎಂದೇ ಎನಿಸಿತು. ಹಾಗಿದ್ದಾರೆ ಭಾನುವಾರದ ಎಪಿಸೋಡ್​​ನಲ್ಲಿ ಬಿಗ್​​ಬಾಸ್ ಮನೆಯಿಂದ ಹೊರಗೆ ಹೋಗಿದ್ದು ಯಾರು?

ಅದೃಷ್ಟದ ಸ್ಪರ್ಧಿಯ ಅದೃಷ್ಟ ಖೋತಾ: ಅಚ್ಚರಿಯ ಎವಿಕ್ಷನ್ ಏನಲ್ಲ
Spandana Eviction
ಮಂಜುನಾಥ ಸಿ.
|

Updated on: Jan 04, 2026 | 10:52 PM

Share

ಬಿಗ್​​ಬಾಸ್ (Bigg Boss) ಮನೆಯಿಂದ ಮತ್ತೊಬ್ಬರು ಸ್ಪರ್ಧಿ ಹೊರಗೆ ಹೋಗಿದ್ದಾರೆ. ಕಳೆದ ವಾರ ಇಬ್ಬರು ಪ್ರಮುಖ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಿದ್ದರು. ಮಾಳು ಮತ್ತು ಸೂರಜ್ ಅವರು ಎವಿಕ್ಟ್ ಆಗಿದ್ದರು. ಅದು ನಿಜಕ್ಕೂ ಅಚ್ಚರಿಯ ಎವಿಕ್ಷನ್ ಎನಿಸಿಕೊಂಡಿತ್ತು. ಆದರೆ ಈ ವಾರ ತೀರ ಅಚ್ಚರಿಯ ಎವಿಕ್ಷನ್ ಎನಿಸಲಿಲ್ಲ, ಬದಲಿಗೆ ನಿರೀಕ್ಷಿತ ಎಂದೇ ಎನಿಸಿತು. ಮನೆಯ ಇತರೆ ಸ್ಪರ್ಧಿಗಳಿಂದ ಅದೃಷ್ಟದ ಸ್ಪರ್ಧಿ ಎಂದೇ ಕರೆಸಿಕೊಳ್ಳುತ್ತಿದ್ದ ಸ್ಪಂದನಾ ಅವರು ಈ ವಾರ ಎವಿಕ್ಟ್ ಆಗಿ ಮನೆಯಿಂದ ಹೊರಗೆ ಹೋಗಿದ್ದಾರೆ.

ಸ್ಪಂದನಾ ಅವರು ಅಸಲಿಗೆ ಕಳೆದ ವಾರವೇ ಎವಿಕ್ಷನ್​​ ಆಗುವ ಹಂತಕ್ಕೆ ಹೋಗಿ ವಾಪಸ್ಸಾಗಿದ್ದರು. ಮಾಳು ಮತ್ತು ಸ್ಪಂದನಾ ಅವರು ಕೊನೆಯ ಸ್ಪರ್ಧಿಗಳಾಗಿ ಉಳಿದುಕೊಂಡಿದ್ದರು. ಇಬ್ಬರಲ್ಲಿ ಮಾಳು ಮನೆಯಿಂದ ಹೊರಗೆ ಹೋಗಿ ಸ್ಪಂದನಾ ಉಳಿದುಕೊಂಡಿದ್ದರು. ಆಗಲೂ ಸಹ ಕೆಲವರು ಸ್ಪಂದನಾರ ಅದೃಷ್ಟದ ಬಗ್ಗೆ ಮಾತನಾಡಿದ್ದರು. ಆದರೆ ಈ ವಾರ ಸ್ಪಂದನಾ ಅವರಿಗೆ ಅದೃಷ್ಟ ಕೈ ಹಿಡಿಯಲಿಲ್ಲ. ಈ ವಾರ ಸ್ಪಂದನಾ ಅವರು ಮನೆಯಿಂದ ಹೊರಗೆ ಬಂದಿದ್ದಾರೆ.

ಸುದೀಪ್ ಅವರು ಸಹ ಈ ವಾರದ ಎಲಿಮಿನೇಷನ್ ಅನ್ನು ಸರಳವಾಗಿಯೇ ಮುಗಿಸಿದರು. ಈ ಹಿಂದಿನ ಕೆಲ ವಾರ ಬೇರೆ ಬೇರೆ ರೀತಿಯಲ್ಲಿ ಎವಿಕ್ಷನ್ ಅನ್ನು ಕೆಲ ಆಕ್ಟಿವಿಟಿಗಳ ಮೂಲಕ ಮಾಡಲಾಗಿತ್ತು. ನಾಮಿನೇಷನ್​​ನಿಂದ ಸೇಫ್ ಆಗುವುದಕ್ಕೂ ಆಕ್ಟಿವಿಟಿ ನೀಡಲಾಗಿತ್ತು. ಆದರೆ ಈ ವಾರ ಅದೇನೂ ಇಲ್ಲದೆ, ಬಹಳ ಸರಳವಾಗಿ ಸ್ಪಂದನಾರ ಹೆಸರು ಹೇಳುವ ಮೂಲಕ ಎವಿಕ್ಷನ್ ಪ್ರಕ್ರಿಯೆ ಪೂರ್ಣ ಮಾಡಲಾಯ್ತು. ಅಂದಹಾಗೆ ಎವಿಕ್ಷನ್​​ನ ಕೊನೆಯಲ್ಲಿ ರಾಶಿಕಾ ಮತ್ತು ಸ್ಪಂದನಾ ಉಳಿದಿದ್ದರು. ಇಬ್ಬರಲ್ಲಿ ಸ್ಪಂದನಾ ಹೊರಗೆ ಬಂದರು.

ಇದನ್ನೂ ಓದಿ:ಇಲ್ಲಿದ್ರೆ ಆನಂದ, ಮನೆಗೋದ್ರೆ ಗೋವಿಂದ: ಗಿಲ್ಲಿಯ ಬಿಗ್​ಬಾಸ್ ರ್ಯಾಪ್ ಸಾಂಗ್

ಸ್ಪಂದನಾ ಅವರು ಇಷ್ಟ ದಿನ ಚೆನ್ನಾಗಿಯೇ ಆಡಿದರು. ಯಾರೊಟ್ಟಿಗೂ ವೈರತ್ವ ಕಟ್ಟಿಕೊಳ್ಳದೆ ಎಲ್ಲರೊಟ್ಟಿಗೂ ಬಾಂಧವ್ಯ ಇರಿಸಿಕೊಂಡು, ಸ್ನೇಹದೊಂದಿಗೆ ಆಟ ಆಡಿದರು. ಧನುಶ್, ಕಾವ್ಯಾ ಜೊತೆಗೆ ವಿಶೇಷ ಬಂಧ ಇರಿಸಿಕೊಂಡಿದ್ದ ಸ್ಪಂದನಾ, ರಘು, ಗಿಲ್ಲಿ ಅವರಿಗೂ ಗೆಳೆಯರಾಗಿದ್ದರು. ಆದರೆ ರಕ್ಷಿತಾ ಜೊತೆಗೆ ಕಳೆದ ಕೆಲ ವಾರಗಳಿಂದಲೂ ವೈರತ್ವ ಬೆಳೆಸಿಕೊಂಡಿದ್ದರು. ಮನೆಯಿಂದ ಹೊರ ಹೋದ ಬಳಿಕ ‘ಈಗಷ್ಟೆ ಮನೆಯಿಂದ ಹೊರ ಬಂದಿದ್ದೀನಿ ಆದರೆ ಈಗಲೆ ನಾನು ಬಿಗ್​​ಬಾಸ್ ಮನೆಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೀನಿ’ ಎಂದರು ಸ್ಪಂದನಾ. ಸುದೀಪ್ ಅವರು ಸ್ಪಂದನಾ ಅವರಿಗೆ ಒಳ್ಳೆಯ ಭವಿಷ್ಯವನ್ನು ಹಾರೈಸಿ ಬೀಳ್ಕೊಟ್ಟರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ