AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲಿಮಿನೇಷನ್ ಬಗ್ಗೆ ಮಾಳು ಹೇಳಿದ ಶಾಕಿಂಗ್ ವಿಷಯ ಬಿಚ್ಚಿಟ್ಟ ಸ್ಪಂದನಾ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸ್ಪಂದನಾ ಎಲಿಮಿನೇಟ್ ಆಗಿದ್ದು, ಇದು ಅವರಿಗೆ ಬೇಸರ ಮೂಡಿಸಿದೆ. ಹೊರಬಂದ ನಂತರ ಮಾಳು ಅವರ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಮಾಳು ಹೊರಹೋಗುವ ಒಂದು ವಾರದ ಮೊದಲೇ ತಾನು ಎಲಿಮಿನೇಟ್ ಆಗುತ್ತೇನೆ ಎಂದು ಹೇಳಿದ್ದರು ಎಂಬ ಶಾಕಿಂಗ್ ವಿಷಯವನ್ನು ಸ್ಪಂದನಾ ಬಹಿರಂಗಪಡಿಸಿದ್ದಾರೆ. ಮಾಳು ಸ್ಟ್ರಾಂಗ್ ಸ್ಪರ್ಧಿಯಾಗಿದ್ದರೂ ತಮ್ಮ ಜನಪ್ರಿಯತೆಯನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ಸ್ಪಂದನಾ ಅಭಿಪ್ರಾಯಪಟ್ಟಿದ್ದಾರೆ.

ಎಲಿಮಿನೇಷನ್ ಬಗ್ಗೆ ಮಾಳು ಹೇಳಿದ ಶಾಕಿಂಗ್ ವಿಷಯ ಬಿಚ್ಚಿಟ್ಟ ಸ್ಪಂದನಾ
ಮಾಳು-ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on: Jan 05, 2026 | 12:19 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) 99 ದಿನ ಪೂರೈಸಿ ಸ್ಪಂದನಾ ಎಲಿಮಿನೇಟ್ ಆಗಿದ್ದಾರೆ. ಈ ಎಲಿಮಿನೇಷನ್ ಅವರಿಗೆ ಬೇಸರ ಮೂಡಿಸಿದೆ. ಎರಡು ವಾರ ಪೂರೈಸಿದ್ದರೆ ಫಿನಾಲೆಯಲ್ಲಿ ಇರಬಹುದಿತ್ತು ಎಂದು ಅವರಿಗೆ ಅನಿಸಿದೆ. ಈ ಮಧ್ಯೆ ಸ್ಪಂದನಾ ಮಾಳು ಅವರು ಆಡಿದ ಒಂದು ಮಾತಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಕಳೆದ ವಾರ ಮಾಳು ಎಲಿಮಿನೇಟ್ ಆದರು. ಅವರು ಹೊರ ಬರುತ್ತಿದ್ದಂತೆ ವಿವಿಧ ರೀತಿಯ ಹೇಳಿಕೆ ನೀಡಿದ್ದರು. ‘ನಾನು ಕಪ್ ಗೆಲ್ಲುತ್ತಿದ್ದೆ. ಆದರೆ, ಅರ್ಧಕ್ಕೆ ಹೊರಕ್ಕೆ ಕರೆಸಿದರು’ ಎಂಬರ್ಥದಲ್ಲಿ ಅವರು ಮಾತನಾಡಿದ್ದರು. ಸ್ಪಂದನಾ ಬಗ್ಗೆಯೂ ಅವರು ಅಸಮಾಧಾನ ಹೊರಹಾಕಿದ್ದರು.

‘ಸ್ಪಂದನಾಗೆ ಟಾಸ್ಕ್ ಆಡೋಕೆ ಬರೋದಿಲ್ಲ. ಫಿಸಿಕಲ್ ಟಾಸ್ಕ್ ಎಂಬುದು ಬಂದರೆ ನಾನು ಅಥವಾ ಸೂರಜ್ ಉತ್ತಮ ಆಯ್ಕೆ ಆಗಿತ್ತು. ಅವರು ಒಳಗೆ ಇದ್ದು, ತಾವು ಹೊರಕ್ಕೆ ಬಂದಿದ್ದು ಸರಿ ಅಲ್ಲ. ನಮ್ಮಿಬ್ಬರಲ್ಲಿ (ಸೂರಜ್ ಅಥವಾ ಮಾಳು) ಒಬ್ಬರು ಒಳಗೆ ಇರಬೇಕಿತ್ತು’ ಎಂದು ಮಾಳು ಹೇಳಿದ್ದರು . ಈ ಹೇಳಿಕೆಗಳು ಸ್ಪಂದನಾಗೆ ಅಚ್ಚರಿ ತರಿಸಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಮಾಳು ಹೀಗೆ ಹೇಳಿದ್ದಾರೆ ಎಂಬುದೇ ನಂಗೆ ಸರ್​​ಪ್ರೈಸ್’ ಎಂದಿರೋ ಸ್ಪಂದನಾ, ಮಾಳುಗೆ ಈ ಮೊದಲೇ ಎಲಿಮಿನೇಷನ್ ಭಯ ಕಾಡಿತ್ತು ಎಂಬ ಶಾಕಿಂಗ್ ವಿಷಯ ರಿವೀಲ್ ಮಾಡಿದ್ದಾರೆ. ‘ಅವರು ಎಲಿಮಿನೇಟ್ ಆಗುವದ್ದಕ್ಕಿಂತ ಒಂದು ವಾರದ ಹಿಂದೆ ಎಲಿಮಿನೇಷನ್ ಬಗ್ಗೆ ಮಾತನಾಡಿದ್ದರು. ‘ಈ ವಾರ ನಾಮಿನೇಟ್ ಆಗಿದ್ದೇನೆ. ನಾನೇ ಹೊರಹೋಗೋದು ಎಂದು ನನಗೆ ಅನಿಸುತ್ತಿದೆ, ಇದಕ್ಕಾಗಿ ಬಟ್ಟೆಗಳು ಬಂದಿಲ್ಲ’ ಎಂದು ಮಾಳು ಅವರು ಸ್ಪಂದನಾ ಬಳಿ ಹೇಳಿದ್ದರಂತೆ.

ಇದನ್ನೂ ಓದಿ: ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಬಿಗ್ ಬಾಸ್ ಬಾಗಿಲು?

ಬಿಗ್ ಬಾಸ್ ಮನೆಯಲ್ಲಿ ತಾವೇ ಎಲಿಮಿನೇಟ್ ಆಗೋದು ಎಂದು ಮಾಳುಗೆ ಅನಿಸಿತ್ತು. ಆದರೆ, ಹೊರಗೆ ಬಂದು ಹೀಗೆ ಏಕೆ ಹೇಳಿದ್ರು ಎಂಬ ಪ್ರಶ್ನೆ ಸ್ಪಂದನಾ ಅವರನ್ನು ಕಾಡಿದೆ. ‘ಮಾಳು ಸ್ಟ್ರಾಂಗ್ ಸ್ಪರ್ಧಿ ಆಗಿದ್ದರು. ಆದರೆ, ತಮ್ಮ ಜನಪ್ರಿಯತೆಯನ್ನು ಅವರು ಸರಿಯಾಗಿ ಬಳಸಿಕೊಂಡಿಲ್ಲ’ ಎಂದು ಸ್ಪಂದನಾ ಅಭಿಪ್ರಾಯ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!