AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಕನ್ನಡ 12: ಕನ್ನಡಿಗರಿಗೆ ಸಿಕ್ತು ಕಿಚ್ಚನ ಚಪ್ಪಾಳೆ, ಕಾರಣ?

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭವಾಗಿ ಒಂದು ವಾರವಾಗಿದೆ. ಮೊದಲನೇ ಕಿಚ್ಚನ ಪಂಚಾಯಿತಿ ಇಂದು ನಡೆದಿದ್ದು, ಈ ಸೀಸನ್​​ನ ಮೊದಲ ಕಿಚ್ಚನ ಚಪ್ಪಾಳೆಯನ್ನು ಸುದೀಪ್ ಅವರು ಭಿನ್ನ ವ್ಯಕ್ತಿಗೆ ನೀಡಿದ್ದಾರೆ. ಈ ಸೀಸನ್​​ನ ಮೊದಲ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು ಯಾರಿಗೆ?

ಬಿಗ್​​ಬಾಸ್ ಕನ್ನಡ 12: ಕನ್ನಡಿಗರಿಗೆ ಸಿಕ್ತು ಕಿಚ್ಚನ ಚಪ್ಪಾಳೆ, ಕಾರಣ?
Bigg Boss Kannada 12
ಮಂಜುನಾಥ ಸಿ.
|

Updated on: Oct 04, 2025 | 10:07 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada 12) ರ ಮೊದಲ ಕಿಚ್ಚನ ಪಂಚಾಯಿತಿ ಇಂದು (ಅಕ್ಟೋಬರ್ 04) ನಡೆದಿದೆ. ಈ ಸೀಸನ್​​ನಲ್ಲಿ ಮೊದಲ ಬಾರಿಗೆ ಸುದೀಪ್ ಅವರು ಸ್ಪರ್ಧಿಗಳನ್ನು ವೀಕೆಂಡ್​​ನಲ್ಲಿ ಮುಖಾ-ಮುಖಿ ಆದರು. ಎಲ್ಲರ ಕುಶಲ-ಕ್ಷೇಮ ವಿಚಾರಿಸಿದ ಸುದೀಪ್, ಆ ಬಳಿಕ ಗ್ರ್ಯಾಂಡ್ ಓಪನಿಂಗ್ ದಿನ ಕೆಲವರನ್ನು ಒಂಟಿಯಾಗಿ, ಕೆಲವರನ್ನು ಜಂಟಿಯಾಗಿ ಕಳಿಸಲಾಗಿತ್ತು. ಅವರ ನೋವು-ನಲಿವುಗಳ ಬಗ್ಗೆ ವಿಚಾರಿಸಿದರು. ಕೆಲವರ ಕಾಲೆಳೆದರು, ಕೆಲವರ ಮಾತು ಕೇಳಿ ನಕ್ಕರು.

ಆಯಾ ವಾರದಲ್ಲಿ ಯಾರು ಚೆನ್ನಾಗಿ ಆಡಿರುತ್ತಾರೆಯೋ ಯಾರು ಚೆನ್ನಾಗಿ ಕರ್ತವ್ಯ ನಿರ್ವಹಿಸಿರುತ್ತಾರೆಯೋ, ಯಾರು ಒಳ್ಳೆಯ ವ್ಯಕ್ತಿತ್ವ ಪ್ರದರ್ಶಿಸುತ್ತಾರೆಯೋ ಅಂಥಹವರಿಗೆ ಸುದೀಪ್ ಅವರು ಅಭಿನಂದನೆ ಸಲ್ಲಿಸಿ ವಿಶೇಷ ಚಪ್ಪಾಳೆಯನ್ನು ನೀಡಿ ಸ್ಪೂರ್ತಿ ತುಂಬುತ್ತಾರೆ. ಇದನ್ನು ‘ಕಿಚ್ಚನ ಚಪ್ಪಾಳೆ’ ಎನ್ನಲಾಗುತ್ತದೆ. ಕಿಚ್ಚನ ಚಪ್ಪಾಳೆ ಪಡೆದವರ ಫೋಟೊವನ್ನು ಗೋಡೆಯ ಮೇಲೆ ಹಾಕಲಾಗುತ್ತದೆ.

ಪ್ರತಿ ವೀಕೆಂಡ್ ಎಪಿಸೋಡ್​​ನಲ್ಲಿ ಸುದೀಪ್ ಅವರು ಎಲ್ಲ ಸ್ಪರ್ಧಿಗಳೊಟ್ಟಿಗೆ ಮಾತನಾಡಿ, ಎಲ್ಲರ ಆ ವಾರದ ಆಟವನ್ನು ಪರಾಮರ್ಶೆ ಮಾಡಿ ಕೊನೆಯಲ್ಲಿ ಯಾರಾದರೂ ಒಬ್ಬರನ್ನು ಆಯ್ಕೆ ಮಾಡಿ ಅವರಿಗೆ ಕಿಚ್ಚನ ಚಪ್ಪಾಳೆ ನೀಡುತ್ತಾರೆ. ಆದರೆ 12ನೇ ಸೀಸನ್​​ನ ಮೊದಲ ಪಂಚಾಯಿತಿಯ ಆರಂಭದಲ್ಲಿಯೇ ಸುದೀಪ್ ಅವರು ಕಿಚ್ಚನ ಚಪ್ಪಾಳೆ ನೀಡಿದರು. ಆದರೆ ಯಾವುದೇ ಬಿಗ್​​ಬಾಸ್ ಸ್ಪರ್ಧಿಗೆ ಈ ಬಾರಿಯ ಮೊದಲನೇ ಚಪ್ಪಾಳೆ ಸಿಕ್ಕಿಲ್ಲ. ಸಿಕ್ಕಿರುವುದು ಇಡೀ ಕರ್ನಾಟಕಕ್ಕೆ.

ಇದನ್ನೂ ಓದಿ:ತೆಲುಗು ಬಿಗ್​​ಬಾಸ್ ಕನ್ನಡತಿ ತನುಜಾ: ಕೋಪದಲ್ಲೂ ಬಲು ಮುದ್ದು ಈ ನಟಿ

ಹೌದು, ಬಿಗ್​​ಬಾಸ್ ಗ್ರ್ಯಾಂಡ್ ಓಪನಿಂಗ್ ದಿನ ಕಾರ್ಯಕ್ರಮದ ವೀಕ್ಷಣೆಗೆ ರಾಜ್ಯದ ವಿವಿಧ ಮೂಲೆಗಳಿಂದ ಕೆಲವು ಸದಸ್ಯರನ್ನು ಆಯ್ಕೆ ಮಾಡಿ ಕರೆಸಲಾಗಿತ್ತು. ಹೀಗೆ ಆಯ್ಕೆ ಆದ ಸದಸ್ಯರುಗಳು ಯಾವ ಸ್ಪರ್ಧಿ ಒಂಟಿಯಾಗಿ ಹೋಗಬೇಕು, ಯಾರು ಜಂಟಿಯಾಗಿ ಹೋಗಬೇಕು ಎಂದು ಓಟು ಹಾಕಿದ್ದರು. ಅವರು ಪ್ರತಿಯೊಬ್ಬ ಸ್ಪರ್ಧಿಯ ಮಾತು ಕೇಳಿ, ವರ್ತನೆ ನೋಡಿ ಅವರುಗಳು ಒಂಟಿ-ಜಂಟಿ ಎಂದು ಮತ ಹಾಕಿದ್ದರು. ಅಂದು ಓಟು ಹಾಕಿದವರು, ಸರಿಯಾಗಿ ಅಳೆದು-ತೂಗಿ ಮತ ಹಾಕಿದ್ದಾರೆಂದು ಸುದೀಪ್ ಅವರು ಅಂದು ಮತ ಹಾಕಿದವರಿಗೆ ಅಂದರೆ ಕರ್ನಾಟಕವನ್ನು ಪ್ರತಿನಿಧಿಸಿದವರಿಗೆ ಚಪ್ಪಾಳೆ ನೀಡಿದರು.

ಅಂದು ಕರ್ನಾಟಕವನ್ನು ಪ್ರತಿನಿಧಿಸಿ ಬಂದ ವೀಕ್ಷಕರ ಪ್ರತಿಬಿಂಬವಾಗಿ ಕರ್ನಾಟಕದ ಭೂಪಟವನ್ನು ಗೋಡೆಗೆ ಹಾಕಲಾಯಿತು. ಸುದೀಪ್ ಸೇರಿದಂತೆ ಮನೆಯ ಎಲ್ಲ ಸ್ಪರ್ಧಿಗಳೂ ಕರ್ನಾಟಕದ ಭೂಪಟಕ್ಕೆ ಚಪ್ಪಾಳೆ ತಟ್ಟಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ