AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ಮತ್ತೆ ದಾಖಲೆ ಬರೆದ ಬಿಗ್ ಬಾಸ್; ಸಿಕ್ತು ಡಬಲ್ ಡಿಜಿಟ್ ನಂಬರ್

ಕಿರುತೆರೆ ಲೋಕದಲ್ಲಿ ಡಬಲ್ ಡಿಜಿಟ್ ಟಿಆರ್​ಪಿ ಪಡೆಯಬೇಕು ಎಂದರೆ ಅದು ಅಷ್ಟು ಸುಲಭದ ಮಾತಲ್ಲ. ಆದರೆ, ಕಿಚ್ಚನಿಗೆ ಅದು ನೀರು ಕುಡಿದಷ್ಟೇ ಸುಲಭ ಎಂದರೂ ತಪ್ಪಾಗಲಾರದರು. ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್ ದಿನ ಈ ಶೋಗೆ ಬರೋಬ್ಬರಿ 12.2 ಟಿವಿಆರ್ ಸಿಕ್ಕಿದೆ.

ಟಿಆರ್​ಪಿಯಲ್ಲಿ ಮತ್ತೆ ದಾಖಲೆ ಬರೆದ ಬಿಗ್ ಬಾಸ್; ಸಿಕ್ತು ಡಬಲ್ ಡಿಜಿಟ್ ನಂಬರ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 11, 2025 | 7:57 AM

Share

‘ಬಿಗ್ ಬಾಸ್’ (Bigg Boss) ಆರಂಭ ಆಗುತ್ತದೆ ಎಂದರೆ ವೀಕ್ಷಕರ ವಲಯದಲ್ಲಿ ಹೊಸ ಉತ್ಸಾಹ ಸೃಷ್ಟಿ ಆಗುತ್ತದೆ. ಯಾವೆಲ್ಲ ಸ್ಪರ್ಧಿಗಳು ಬರುತ್ತಾರೆ, ಓಪನಿಂಗ್ ಡೇ ಹೇಗಿರುತ್ತದೆ ಎಂಬಿತ್ಯಾದಿ ಕುತೂಹಲ ಮೂಡುತ್ತದೆ. ಈ ಕಾರಣದಿಂದಲೇ ಓಪನಿಂಗ್ ಡೇ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತದೆ. ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಓಪನಿಂಗ್​​ಗೆ ಉತ್ತಮ ರೇಟಿಂಗ್ ಸಿಕ್ಕಿದೆ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ ಹಂಚಿಕೊಂಡಿದೆ.

ಕಿರುತೆರೆ ಲೋಕದಲ್ಲಿ ಡಬಲ್ ಡಿಜಿಟ್ ಟಿಆರ್​ಪಿ ಪಡೆಯಬೇಕು ಎಂದರೆ ಅದು ಅಷ್ಟು ಸುಲಭದ ಮಾತಲ್ಲ. ಆದರೆ, ಕಿಚ್ಚನಿಗೆ ಅದು ನೀರು ಕುಡಿದಷ್ಟೇ ಸುಲಭ ಎಂದರೂ ತಪ್ಪಾಗಲಾರದರು. ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್ ದಿನ ಈ ಶೋಗೆ ಬರೋಬ್ಬರಿ 12.2 ಟಿವಿಆರ್ ಸಿಕ್ಕಿದೆ. ವಾರದ ದಿನಗಳಲ್ಲಿ 8.2 ಟಿವಿಆರ್ ಸಿಕ್ಕಿದೆ ಎಂದು ಕಲರ್ಸ್ ಕನ್ನಡ ವಾಹಿನಿ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ
Image
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ
Image
‘ಕಾಂತಾರ: ಚಾಪ್ಟರ್ 1’; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ

ಸದ್ಯ ಬಿಗ್ ಬಾಸ್ ಆಟ ಪೂರ್ಣ ಪ್ರಮಾಣದಲ್ಲಿ ಆರಂಭ ಆಗಿಲ್ಲ ಎಂದರೂ ತಪ್ಪಾಗಲಿಕ್ಕಿಲ್ಲ. ಮೂರನೇ ವಾರವೇ ಫಿನಾಲೆಯನ್ನು ನಡೆಸಲು ಪ್ಲ್ಯಾನಿಂಗ್ ಆಗಿದೆ. ಈ ವೇಳೆ ಒಂದಷ್ಟು ಸ್ಪರ್ಧಿಗಳನ್ನು ಎಲಿಮಿನೇಟ್ ಮಾಡುವ ಆಲೋಚನೆ ತಂಡಕ್ಕೆ ಇದೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡುವ ಕುತೂಹಲ ಸ್ಪರ್ಧಿಗಳಿಗೆ ಇದೆ.

ಇನ್ನು, ಬಿಗ್ ಬಾಸ್ ಆಟ ಅರ್ಧಕ್ಕೆ ನಿಂತಿತ್ತು ಕೂಡ. ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿತ್ತು. ನಿಯಮ ಪಾಲನೆ ಆಗುತ್ತಿಲ್ಲ ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿತ್ತು. ಹೀಗಾಗಿ, ಸ್ಪರ್ಧಿಗಳನ್ನು ಒಂದು ದಿನ ಬೇರೆ ಕಡೆಗಳಲ್ಲಿ ಶಿಫ್ಟ್ ಮಾಡಲಾಗಿತ್ತು. ಈಗ ಎಲ್ಲಾ ಸ್ಪರ್ಧಿಗಳು ದೊಡ್ಮನೆಗೆ ಮರಳಿದ್ದಾರೆ. ಅವರು ತಮ್ಮ ಆಟ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ಇದನ್ನೂ ಓದಿ: ಜಾಲಿವುಡ್ ಬಂದ್, ಆದರೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆ ಓಪನ್

ಧಾರಾವಾಹಿಗಳ ಟಿಆರ್​ಪಿ

ಧಾರಾವಾಹಿಗಳ ಟಿಆರ್​ಪಿ ಕೂಡ ಹೊರ ಬಿದ್ದಿದೆ. ‘ಅಮೃತಧಾರೆ’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಕರ್ಣ’ ಧಾರಾವಾಹಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಹಾಗೂ ಐದನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಸ್ಥಾನ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ