AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಟಿಆರ್​ಪಿ: ವಾರಾಂತ್ಯದಲ್ಲಿ ಬೊಂಬಾಟ್, ವಾರದ ದಿನದಲ್ಲಿ..

'ಬಿಗ್ ಬಾಸ್ ಕನ್ನಡ ಸೀಸನ್ 12'ರ TRP ವಿಶ್ಲೇಷಣೆ ಇಲ್ಲಿದೆ. ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ಕಾರಣದಿಂದ ಬೊಂಬಾಟ್ ರೇಟಿಂಗ್ ಪಡೆದರೂ, ವಾರದ ದಿನಗಳಲ್ಲಿ TRP ಕುಸಿತ ಕಂಡಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೊದಲ ಫಿನಾಲೆ ಈ ವಾರ ನಡೆಯಲಿದೆ. ವೀಕೆಂಡ್ ಎಪಿಸೋಡ್ನಲ್ಲಿ ಒಳ್ಳೆಯ TRP ನಿರೀಕ್ಷಿಸಬಹುದಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಟಿಆರ್​ಪಿ: ವಾರಾಂತ್ಯದಲ್ಲಿ ಬೊಂಬಾಟ್, ವಾರದ ದಿನದಲ್ಲಿ..
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 16, 2025 | 2:40 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಶೋ ‘ಎಕ್ಸ್​ಪೆಕ್ಟ್​ ದಿ ಅನ್​ಎಕ್ಸ್​ಪೆಕ್ಟ್’ ಎಂಬ ಥೀಮ್ ಅಡಿಯಲ್ಲಿ ಮೂಡಿ ಬಂದಿದೆ. ಯಾರೂ ನಿರೀಕ್ಷಿಸದೇ ಇರುವದೇ ನಡೆಯುತ್ತದೆ ಎಂಬುದು ಇದರ ಅರ್ಥ. ಟಿಆರ್​ಪಿ ವಿಚಾರದಲ್ಲಿಯೂ ಹೀಗೆಯೇ ಆಯಿತೇ ಎಂಬ ಪ್ರಶ್ನೆ ಮೂಡಿದೆ. ಏಕೆಂದರೆ ವಾರಾಂತ್ಯದಲ್ಲಿ ಒಳ್ಳೆಯ ಟಿಆರ್​ಪಿ ಪಡೆಯುತ್ತಿರುವ ಶೋ, ವಾರದ ದಿನಗಳಲ್ಲಿ ಡಲ್ ಹೊಡೆದಿದೆ.

ಕಿಚ್ಚ ಸುದೀಪ್ ಅವರನ್ನು ನೋಡುವ ಕಾರಣದಿಂದಲೇ ಅನೇಕರು ಬಿಗ್ ಬಾಸ್ ನೋಡುತ್ತಾರೆ. ಶನಿವಾರ ಹಾಗೂ ಭಾನುವಾರ ‘ಬಿಗ್ ಬಾಸ್’ ಪ್ರಸಾರ ಕಾಣುತ್ತದೆ. ಶನಿವಾರದ ಎಪಿಸೋಡ್​ಗೆ ನಗರ ಭಾಗದಲ್ಲಿ 9.1 ಟಿಆರ್​ಪಿ ಸಿಕ್ಕಿದೆ. ನಗರ ಹಾಗೂ ಗ್ರಾಮಾಂತರ ಸೇರಿದರೆ 8.3 ಟಿವಿಆರ್ ಸಿಕ್ಕಿದೆ. ಭಾನುವಾರ ನಗರ + ಗ್ರಾಮಾಂತರ 7.8 ಹಾಗೂ ನಗರ ಭಾಗದಲ್ಲಿ 8.9 ಟಿವಿಆರ್ ದೊರೆತಿದೆ.

ಆದರೆ, ವಾರದ ದಿನಗಳಲ್ಲಿ ಶೋಗೆ ಟಿಆರ್​ಪಿ ಸ್ವಲ್ಪ ಕಡಿಮೆಯೇ ಇದೆ ಎಂಬ ಅಭಿಪ್ರಾಯ ವೀಕ್ಷಕರ ವಲಯದಲ್ಲಿ ವ್ಯಕ್ತವಾಗಿದೆ. ಏಕೆಂದರೆ ಕರ್ನಾಟಕದಲ್ಲಿ 5.8 ಟಿವಿಆರ್ ಹಾಗೂ ನಗರ ಭಾಗದಲ್ಲಿ 6.2 ಟಿವಿಆರ್ ಸಿಕ್ಕಿದೆ. ಆರಂಭದ ವಾರ ಆಗಿರುವುದರಿಂದ ಕಡಿಮೆ ಟಿಆರ್​ಪಿ ಸಿಕ್ಕಿರಬಹುದು ಎಂಬ ಅಭಿಪ್ರಾಯ ಕೂಡ ಕೇಳಿ ಬಂದಿದೆ.

ಇದನ್ನೂ ಓದಿ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ
Image
ಸಪ್ತಪದಿ ತುಳಿಯುವಾಗಲೇ ಕರ್ಣನಿಗೆ ಗೊತ್ತಾಯ್ತು ನಿಧಿ ಪ್ರೆಗ್ನೆನ್ಸಿ ವಿಚಾರ
Image
ಬಕ್ರಾ ಮಾಡಲು ಬಂದ ಜಾನ್ವಿ-ಅಶ್ವಿನಿಗೆ ಮಣ್ಣು ಮುಕ್ಕಿಸಿದ ರಕ್ಷಿತಾ ಶೆಟ್ಟಿ
Image
ಬಿಗ್ ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್; ಆ ಇಬ್ಬರು ಔಟ್?

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್; ಆ ಇಬ್ಬರು ಔಟ್?

ಧಾರಾವಾಹಿ ಟಿಆರ್​ಪಿ

ಧಾರಾವಾಹಿ ಟಿಆರ್​ಪಿ ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ. ಮೊದಲ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಎರಡನೇ ಸ್ಥಾನದಲ್ಲಿ ‘ಕರ್ಣ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಎಲ್ಲಾ ಧಾರಾವಾಹಿಗಳು 8+ ಟಿಆರ್​ಪಿ ಪಡೆದುಕೊಂಡಿವೆ. ನಾಲ್ಕನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಹಾಗೂ ಐದನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ.

ಈ ವಾರವೇ ಫಿನಾಲೆ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೊದಲ ಫಿನಾಲೆ ಈ ವಾರ ನಡೆಯಲಿದೆ. ಈ ವೇಳೆ ಕೆಲವರು ಔಟ್ ಆಗುವ ಸಾಧ್ಯತೆ ಇದೆ. ಹೀಗಾಗಿ, ವೀಕೆಂಡ್ ಎಪಿಸೋಡ್​ನಲ್ಲಿ ಒಳ್ಳೆಯ ಟಿಆರ್​ಪಿ ನಿರೀಕ್ಷಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!