AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ಬಿಗ್​ ಬಾಸ್​ ಸೀಸನ್​ 8 ಸೆಲೆಬ್ರಿಟಿಗಳಿಗೆ ಮೀಸಲು; ಪ್ರತಿದಿನ ರಾತ್ರಿ 9:30ಕ್ಕೆ ಶೋ

ಬಿಗ್​ ಬಾಸ್​ 9 ಸಣ್ಣ ಗ್ಯಾಪ್​ ನಂತರ ಬರುವ ಸಾಧ್ಯತೆ ಇದೆ. ಬಿಗ್​ ಬಾಸ್​ 9 ನವೆಂಬರ್​​ನ ಲ್ಲಿ ಬರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು ಪರಮೇಶ್ವರ್​ ಗುಂಡ್ಕಲ್​.

Bigg Boss Kannada 8: ಬಿಗ್​ ಬಾಸ್​ ಸೀಸನ್​ 8 ಸೆಲೆಬ್ರಿಟಿಗಳಿಗೆ ಮೀಸಲು; ಪ್ರತಿದಿನ ರಾತ್ರಿ 9:30ಕ್ಕೆ ಶೋ
ಬಿಗ್ ಬಾಸ್ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on:Feb 25, 2021 | 5:20 PM

Share

ಇದೇ ಭಾನುವಾರದಿಂದ ಕನ್ನಡ ಬಿಗ್​ ಬಾಸ್​ 8 ಆರಂಭವಾಗುತ್ತಿದೆ. ಬಿಗ್​ ಬಾಸ್​ ಆರಂಭವಾಗುವುದಕ್ಕೂ ಮೊದಲು ಈ ಕುರಿತು ನಟ ಸುದೀಪ್​ ಹಾಗೂ ಕಲರ್ಸ್​ ಕನ್ನಡ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಬಿಗ್​ ಬಾಸ್​ 8 ಬಗ್ಗೆ ಒಂದಷ್ಟು ಮಾಹಿತಿ ನೀಡಿದ್ದಾರೆ. ಮೊದಲು ಮಾತು ಆರಂಭಿಸಿದ ಪರಮೇಶ್ವರ್​ ಗುಂಡ್ಕಲ್​, ಇದು 8ನೇ ಸೀಸನ್​. ಬೇರೇ ಬೇರೆ ವ್ಯಕ್ತಿಗಳ ನಡುವಳಿಕೆಗಳನ್ನು ತೋರಿಸೋ ಶೋ. ಈ ಶೋ ಮುಖ್ಯವಾಗಿ ಆ್ಯಕ್ಷನ್​-ರಿಯಾಕ್ಷನ್​ಗಳನ್ನು ಒಳಗೊಂಡಿರುತ್ತದೆ. ಭಾನುವಾರ ಸಂಜೆ 6 ಗಂಟೆಗೆ ಬಿಗ್​ ಬಾಸ್​ ಶುರು ಆಗಲಿದೆ. ನಿತ್ಯ 9:30ಕ್ಕೆ ಬಿಗ್​ ಬಾಸ್​ ಪ್ರಸಾರವಾಗಲಿದೆ ಎಂದರು.

ಈ ಬಾರಿ ಎಷ್ಟು ಸ್ಪರ್ಧಿಗಳು ಇರುತ್ತಾರೆ ಎನ್ನುವ ಪ್ರಶ್ನೆಗೆ ಪರಮೇಶ್ವರ್ ಗುಂಡ್ಕಲ್​ ಉತ್ತರಿಸಿದ್ದಾರೆ. ಈ ಬಾರಿ 17 ಸ್ಪರ್ಧಿಗಳನ್ನು ಮನೆಗೆ ಕಳುಹಿಸಬೇಕು ಎನ್ನುವ ಉದ್ದೇಶ ಇದೆ. ಇವರನ್ನು ಈಗಾಗಲೇ ಕ್ವಾರಂಟೈನ್​ನಲ್ಲಿ ಇಡಲಾಗಿದೆ. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನೆಗೆಟಿವ್​ ಬಂದಿದೆ. ಯಾರಾದರೂ ಒಬ್ಬರಿಗೆ ಪಾಸಿಟಿವ್​ ಬಂದರೂ ಅವರನ್ನು ಮನೆ ಒಳಗೆ ಕಳುಹಿಸೋಕೆ ಆಗಲ್ಲ. ಹೀಗಾಗಿ ಈಗಲೇ ಸ್ಪರ್ಧಿಗಳ ಲೆಕ್ಕ ನೀಡೋಕೆ ಆಗಲ್ಲ ಎಂದಿದ್ದಾರೆ ಅವರು. ​

ಈ ಬಾರಿಯದ್ದು ಸೆಲೆಬ್ರಿಟಿ ಸೀಸನ್​. ಹೀಗಾಗಿ, ಜನಸಾಮಾನ್ಯರು ಮನೆ ಒಳಗೆ ಹೋಗಲ್ಲ. ಸ್ಪರ್ಧಿಗಳಿಗೆ ಬಯೋಬಬಲ್​ ಕ್ರಿಯೇಟ್​ ಮಾಡೋಕೆ ತುಂಬಾನೇ ಒದ್ದಾಡುತ್ತಿದ್ದೇವೆ. ಕೊರೊನಾ ಇರುವುದರಿಂದ ತುಂಬಾನೇ ಎಚ್ಚರಿಕೆ ವಹಿಸಿ ಈ ಬಾರಿಯ ಸ್ಪರ್ಧಿಗಳನ್ನು ಕಳುಹಿಸುತ್ತಿದ್ದೇನೆ. ಬಿಗ್​ ಬಾಸ್​ ಮನೆ ತುಂಬಾನೇ ಭಿನ್ನವಾಗಿದೆ. ಗಾರ್ಡನ್​ ಏರಿಯಾ ಬದಲಾಯಿಸಲಾಗಿದೆ. ಈ ಬಾರಿ ಬಿಗ್​ ಬಾಸ್​ ವೂಟ್​ನಲ್ಲಿ ಲೈವ್​​ ಮೂಲಕ 24 ಗಂಟೆಗಳ ಕಾಲ ಪ್ರಸಾರವಾಗಲಿದೆ ಎಂದು ಮಾಹಿತಿ ನೀಡಿದರು.

ಬಿಗ್​ ಬಾಸ್​ ಸೀಸನ್​ 9ರ ಬಗ್ಗೆ ಮಾಹಿತಿ ನೀಡಿದ ಪರಮೇಶ್ವರ್​, ಬಿಗ್​ ಬಾಸ್​ 8, 100 ದಿನಗಳ ನಂತರ ಪೂರ್ಣಗೊಳ್ಳುತ್ತಿದೆ. ಐಪಿಎಲ್​ ಮಾದರಿಯಲ್ಲೇ ಈ ಬಾರಿಯ ಬಿಗ್​ ಬಾಸ್​ ವೇಳಾಪಟ್ಟಿ ಕೂಡ ಸ್ವಲ್ಪ ಆಚೀಚೆ ಆಗಿದೆ. ಹೀಗಾಗಿ, ಬಿಗ್​ ಬಾಸ್​ 9 ಸಣ್ಣ ಗ್ಯಾಪ್​ ನಂತರ ಬರುವ ಸಾಧ್ಯತೆ ಇದೆ. ಬಿಗ್​ ಬಾಸ್​ 9 ನವೆಂಬರ್​​ನ ಲ್ಲಿ ಬರುವ ಸಾಧ್ಯತೆ ಇದೆ ಎಂದಿದ್ದಾರೆ.

ಸುದೀಪ್​ ಏನಂದ್ರು?

ಪ್ರೋಮೋ ಮಾಡೋದು ತುಂಬಾನೇ ಮಜಾ ಇತ್ತು. ಈ ಬಾರಿಯ ಪ್ರೋಮೋಗಳು ತುಂಬಾನೇ ಇಷ್ಟವಾಗಿವೆ. ಈ ಬಾರಿ ಬಂದಿದ್ದು ಜನಸಾಮಾನ್ಯರ ಪ್ರೋಮೋ . ಬಿಗ್​ ಬಾಸ್​​ ಅನ್ನು ನಾನು ಯಾವಾಗಲೂ ಎಂಜಾಯ್​ ಮಾಡುತ್ತೇನೆ ಎಂದು ಸುದೀಪ್​ ಮಾತು ಆರಂಭಿಸಿದರು.

ಇವರು ಸ್ಪರ್ಧಿಗಳನ್ನು ತಂದು ಮನೆ ಒಳಗೆ ಇಡುತ್ತಾರೆ. ಆದರೆ, ನಂತರ ಅವರನ್ನು ನಾನು ಹ್ಯಾಂಡಲ್​ ಮಾಡಬೇಕು. ಮನೆ ಒಳಗೆ ಹೋದವರು ಹೀಗೆ ಆಡ್ತಾರೆ, ಹಾಗೆ ಆಡ್ತಾರೆ ಎಂದು ಹೇಳೋದು ಕಷ್ಟ. ಏನೋ ಮಾಡಲು ಹೋಗಿ ಏನೋ ಮಾಡಿದವರನ್ನ ನೋಡಿದ್ದೇನೆ. ಶೂಟಿಂಗ್​ಗೆ ಹೋಗುವಾಗ ಏನು ನಡೆಯುತ್ತೆ ಎನ್ನುವುದು ಖಾತ್ರಿ ಇರುತ್ತದೆ. ಆದರೆ, ಇಲ್ಲಿ ಹಾಗೆ ಆಗುವುದಿಲ್ಲ. ಸ್ಪರ್ಧಿಗಳು ಏನು ಮಾತನಾಡುತ್ತಾರೋ ಅದೇ ರೀತಿಯಲ್ಲಿ ಪ್ರತಿಕ್ರಿಯಿಸಬೇಕಾಗುತ್ತದೆ ಎಂದಿದ್ದಾರೆ.

ಬಿಗ್​ ಬಾಸ್​ ಮನೆ ಒಳಗೆ ನೀವು ಹೋಗೋದು ಯಾವಾಗ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸುದೀಪ್​, ನಾನು ಕೇಳಿದಷ್ಟು ಸಂಭಾವನೆಯನ್ನು ಕೊಡುತ್ತಾರೆ ಎಂದರೆ ಮನೆಯ ಒಳಗೆ ಹೋಗೋಕೆ ಸಿದ್ಧನಿದ್ದೇನೆ. ಸೆಲೆಬ್ರಿಟಿಗಳೇ ಮನೆಯ ಒಳಗೆ ಹೋದರೆ ಆಮೇಲೆ ಇಲ್ಲಿ ನಿರೂಪಣೆ ಮಾಡೋದು ಯಾರು ಎನ್ನುವ ಪ್ರಶ್ನೆ ಬರುತ್ತದೆ ಎಂದು ನಕ್ಕರು ಸುದೀಪ್​.

ಇದನ್ನೂ ಓದಿ: Bigg Boss Kannada 8: ಕನ್ನಡ ಬಿಗ್​ ಬಾಸ್​-8ಕ್ಕೆ ಆಯ್ಕೆಯಾದ ಸ್ಪರ್ಧಿಗಳು ಸ್ಟಾರ್​ ಹೋಟೆಲ್​ಗಳಲ್ಲಿ ಕ್ವಾರಂಟೈನ್?

Published On - 4:44 pm, Thu, 25 February 21

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?