AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಪ್ರಶಸ್ತಿ ಮೊತ್ತದಲ್ಲಿ ಏರಿಕೆ; ಟಾಪ್​ 5ನಲ್ಲಿರುವ ಎಲ್ಲರಿಗೂ ಸಿಗುತ್ತಿದೆ ಪ್ರೈಜ್​​​ ಅಮೌಂಟ್​

ಪ್ರತಿ ಬಾರಿ ಗೆದ್ದವರಿಗೆ 50 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ಈ ಬಾರಿ ಈ ಮೊತ್ತದಲ್ಲಿ 3 ಲಕ್ಷ ರೂಪಾಯಿ ಏರಿಕೆ ಮಾಡಲಾಗಿದೆ. ಇನ್ನು, ರನ್ನರ್​ ಅಪ್​ಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿತ್ತು.

ಬಿಗ್​ ಬಾಸ್​ ಪ್ರಶಸ್ತಿ ಮೊತ್ತದಲ್ಲಿ ಏರಿಕೆ; ಟಾಪ್​ 5ನಲ್ಲಿರುವ ಎಲ್ಲರಿಗೂ ಸಿಗುತ್ತಿದೆ ಪ್ರೈಜ್​​​ ಅಮೌಂಟ್​
ಬಿಗ್​ ಬಾಸ್​ ಪ್ರಶಸ್ತಿ ಮೊತ್ತದಲ್ಲಿ ಏರಿಕೆ; ಟಾಪ್​ 5ನಲ್ಲಿರುವ ಎಲ್ಲರಿಗೂ ಸಿಗುತ್ತಿದೆ ಪ್ರೈಜ್​​​ ಅಮೌಂಟ್​
TV9 Web
| Edited By: |

Updated on:Aug 07, 2021 | 8:31 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಕೊನೆಯ ಹಂತಕ್ಕೆ ಬಂದು ನಿಂತಿದೆ. ಇಂದು (ಆಗಸ್ಟ್​​ 7) ಮತ್ತು ನಾಳೆ (ಆಗಸ್ಟ್​ 8) ಫಿನಾಲೆ ಎಪಿಸೋಡ್​ ನಡೆಯುತ್ತಿದೆ. ಅಚ್ಚರಿ ಎಂದರೆ ಬಿಗ್​ ಬಾಸ್​ ಗೆದ್ದವರಿಗೆ ಸಿಗೋ ಸಂಭಾವನೆಯನ್ನು ಏರಿಕೆ ಮಾಡಲಾಗಿದೆ. ಈ ಬಗ್ಗೆ ಸುದೀಪ್​ ಮಾಹಿತಿ ನೀಡಿದ್ದಾರೆ.

ಬಿಗ್​ ಬಾಸ್​ ಗೆದ್ದವರಿಗೆ 53 ಲಕ್ಷ ರೂಪಾಯಿ, ರನ್ನರ್​ ಅಪ್​ಗೆ 11 ಲಕ್ಷ ರೂಪಾಯಿ, ಮೂರನೇ ಸ್ಥಾನ ಪಡೆದವರಿಗೆ 6 ಲಕ್ಷ ರೂಪಾಯಿ,  ನಾಲ್ಕನೇ ಸ್ಥಾನದಲ್ಲಿರುವವರಿಗೆ 3.5 ಲಕ್ಷ ರೂಪಾಯಿ ಹಾಗೂ ಐದನೇ ಸ್ಥಾನದಲ್ಲಿರುವ ಸ್ಪರ್ಧಿಗೆ 2.5 ಲಕ್ಷ ರೂಪಾಯಿ ಸಿಗಲಿದೆ ಎಂದು ಸುದೀಪ್​ ಮಾಹಿತಿ ನೀಡಿದ್ದಾರೆ.

ಪ್ರತಿ ಬಾರಿ ಬಿಗ್​ ಬಾಸ್​ ಗೆದ್ದವರಿಗೆ 50 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ಈ ಬಾರಿ ಪ್ರೈಜ್​ ಮೊತ್ತದಲ್ಲಿ 3 ಲಕ್ಷ ರೂಪಾಯಿ ಏರಿಕೆ ಮಾಡಲಾಗಿದೆ. ಇನ್ನು, ರನ್ನರ್​ ಅಪ್​ಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ಈ ಬಾರಿ ಟಾಪ್​ 5ರಲ್ಲಿರುವ ಎಲ್ಲರಿಗೂ ಪ್ರಶಸ್ತಿ ಮೊತ್ತ ನೀಡಲಾಗುತ್ತಿದೆ.

ಈ ಹಣವನ್ನು ಏನು ಮಾಡುತ್ತೀರಿ ಎಂಬುದನ್ನು ಮನೆಯವರನ್ನು ಕೇಳಿದಾಗ ಅದಕ್ಕೆ ಎಲ್ಲರೂ ಉತ್ತರ ನೀಡಿದರು.

ಮಂಜು ಪಾವಗಡ: 2 ವರ್ಷದಿಂದ ಅಪ್ಪ-ಅಮ್ಮನನ್ನು ನೋಡಿಕೊಳ್ಳುತ್ತಾ ಇದೀನಿ. ನಾನು ಸಾಧನೆ ಮಾಡಬೇಕು ಎಂದು ಮನೆಯವರಿಗೆ ದುಡ್ಡುಕೊಟ್ಟಿಲ್ಲ. ನನ್ನ ಅಪ್ಪ ಅಮ್ಮನ ಸುಖವಾಗಿ ನೋಡಿಕೊಳ್ಳಬೇಕು. ಇದು ತುಂಬಾ ದೊಡ್ಡ ವೇದಿಕೆ. ಇದರಿಂದ ಕೆಲಸ ಸಿಗಬೇಕು. ಈ ವೇದಿಕೆಯಿಂದ ಅನೇಕರ ಜೀವನ ಬದಲಾಗಿದೆ.

ಪ್ರಶಾಂತ್ ಸಂಬರಗಿ: ಬಂದ ಹಣಕ್ಕೆ ನನ್ನ ಹಣವನ್ನು ಸೇರಿಸಿ ಹೆಣ್ಣು ಮಕ್ಕಳ ಶಿಕ್ಷಣದ ಪ್ರೋತ್ಸಾಹಕ್ಕಾಗಿ ಟ್ರಸ್ಟ್ ರಚಿಸುತ್ತೇನೆ.

ದಿವ್ಯಾ ಉರುಡುಗ: ನಾನು ಉದ್ಯಮ ಆರಂಭಿಸಬೇಕು. ನನ್ನ ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕು.

ಅರವಿಂದ್​: ನಾನಿಲ್ಲಿ ಗೆದ್ದರೆ ಇಡೀ ಕರ್ನಾಟಕವೇ ಮೆಚ್ಚಿದೆ ಅಂತ ಅರ್ಥ. ನನ್ನ ವೃತ್ತಿ ಜೀವನಕ್ಕೆ ಇದು ಸಹಕಾರಿ ಆಗಲಿದೆ.

ವೈಷ್ಣವಿ: ಅಪ್ಪ ಅಮ್ಮ ಮನೆ ತೆಗೆದುಕೊಳ್ಳಬೇಕು ಎಂದುಕೊಂಡಿದ್ದಾರೆ. ಈ ಹಣವನ್ನು ಅವರಿಗೆ ನೀಡುತ್ತೇನೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

Published On - 7:49 pm, Sat, 7 August 21

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ