AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಯಲ್ಲಿ ಮಂಜು ಕಪ್​ ಎತ್ತೋಕೆ ಕಾರಣವಾಯ್ತು ಈ ಐದು ಅಂಶಗಳು

ಸೋಶಿಯಲ್​ ಮೀಡಿಯಾದಲ್ಲಿ ಮಂಜುಗೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹಾಗಾದರೆ, ಮಂಜು ಗೆಲ್ಲೋಕೆ ಕಾರಣವಾದ ಅಂಶಗಳೇನು ಎನ್ನುವುದಕ್ಕೆ ಇಲ್ಲಿದೆ ಉತ್ತರ.

ಬಿಗ್​ ಬಾಸ್​ ಫಿನಾಲೆಯಲ್ಲಿ ಮಂಜು ಕಪ್​ ಎತ್ತೋಕೆ ಕಾರಣವಾಯ್ತು ಈ ಐದು ಅಂಶಗಳು
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Edited By: |

Updated on: Aug 09, 2021 | 9:47 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8 ಅದ್ದೂರಿ ವೇದಿಕೆಯಲ್ಲಿ ಕಿಚ್ಚ ಸುದೀಪ್ ಅವರು ಮಂಜು ಪಾವಗಡ ಅವರ ಕೈಯನ್ನು ಮೇಲೆತ್ತಿದರು. ಈ ಮೂಲಕ ಮಂಜು ವಿನ್ನರ್​ ಅನ್ನೋದನ್ನು ಸುದೀಪ್​ ಘೋಷಿಸಿದರು. ಬಣ್ಣಬಣ್ಣದ ವೇದಿಕೆ ಮೇಲೆ ಸಂಭ್ರಮ ಮುಗಿಲುಮುಟ್ಟಿತ್ತು. ಇತ್ತ ಸೋಶಿಯಲ್​ ಮೀಡಿಯಾದಲ್ಲಿ ಮಂಜುಗೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹಾಗಾದರೆ, ಮಂಜು ಗೆಲ್ಲೋಕೆ ಕಾರಣವಾದ ಅಂಶಗಳೇನು ಎನ್ನುವುದಕ್ಕೆ ಇಲ್ಲಿದೆ ಉತ್ತರ.

ಮನರಂಜನೆ:

ಬಿಗ್​ ಬಾಸ್​ ಶೋಅನ್ನು ವೀಕ್ಷಕರು ನೋಡುವುದೇ ಮನರಂಜನೆಗೆ. ಕೆಲ ಸ್ಪರ್ಧಿಗಳು ಮನೆಯೊಳಗೆ ತೆರಳಿ ತುಂಬಾನೇ ಗಂಭೀರವಾಗಿ ನಡೆದುಕೊಂಡಿದ್ದರು. ಇದು ವೀಕ್ಷಕರಿಗೆ ಇಷ್ಟವಾಗಿರಲಿಲ್ಲ. ಆದರೆ, ಮಂಜು ಸದಾ ಹಾಸ್ಯ ಮಾಡುತ್ತಾ, ಎಲ್ಲರಿಗೂ ಭರಪೂರ ಮನರಂಜನೆ ನೀಡುತ್ತಾ ಬಂದರು. ಜಾಗ ಯಾವುದೇ ಆಗಲಿ, ಎದುರಿಗಿರುವ ವ್ಯಕ್ತಿ ಹೇಗೆ ಇರಲಿ ಮಂಜು ಎಲ್ಲರನ್ನೂ ನಗಿಸುತ್ತಿರುತ್ತಾರೆ. ಈ ಕಾರಣಕ್ಕೆ ಅವರು ವೀಕ್ಷಕರಿಗೆ ಬೇಗ ಕನೆಕ್ಟ್​ ಆಗುತ್ತಾರೆ.

ನಾಯಕತ್ವ:

ಮಂಜು ನಾಯಕತ್ವದಲ್ಲಿ ಎಂದಿಗೂ ಹಿಂದೆ ಬಿದ್ದಿಲ್ಲ. ಯಾವುದೇ ತಂಡದ ನಾಯಕನಾಗಲಿ, ಅವರ ತಂಡದಲ್ಲಿ ಯಾವುದೇ ಸ್ಪರ್ಧಿಗಳಿರಲಿ ತಂಡ ಕೆಳಗೆ ಬೀಳದಂತೆ ನೋಡಿಕೊಂಡಿದ್ದಾರೆ ಮಂಜು. ಅವರ ನಾಯಕತ್ವ ಅನೇಕರಿಗೆ ಇಷ್ಟವಾಗಿದೆ. ಇದು ಅವರಿಗೆ ಪ್ಲಸ್​ ಆಗಬಹುದು.

ಸ್ವತಂತ್ರ ಸ್ಪರ್ಧಿ:

ಬಿಗ್​ ಬಾಸ್​ ಮೊದಲ ಇನ್ನಿಂಗ್ಸ್​ನಲ್ಲಿ ದಿವ್ಯಾ ಸುರೇಶ್​ ಜತೆ ಮಂಜು ಹೆಚ್ಚು ಆಪ್ತವಾಗಿದ್ದರು. ಕೊನೆಯಲ್ಲಿ ಇದು ಅವರಿಗೆ ಮುಳುವಾಗಿತ್ತು. ಅವರು ಕೆಲ ಕಾಲ ಮನರಂಜನೆ ನೀಡುವುದನ್ನೇ ನಿಲ್ಲಿಸಿದ್ದರು. ಆದರೆ, ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಆರೀತಿ ಆಗಿಲ್ಲ. ಮಂಜು ಸಂಪೂರ್ಣವಾಗಿ ಬದಲಾಗಿದ್ದಾರೆ. ಎಲ್ಲ ಕಡೆಗಳಲ್ಲೂ ಸ್ವತಂತ್ರವಾಗಿ ಗುರುತಿಸಿಕೊಂಡಿದ್ದಾರೆ.

ಹೊಂದಾಣಿಕೆ:

ಬಿಗ್​ ಬಾಸ್​ ಮನೆಯಲ್ಲಿ ಹೊಂದಾಣಿಕೆ ಅನ್ನೋದು ತುಂಬಾನೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. ಯಾರ ಜತೆ ಹೇಗೆ ಹೊಂದಿಕೊಳ್ಳುತ್ತಾರೆ ಅನ್ನೋದು ಬಹಳ ಮುಖ್ಯವಹಿಸಲಿದೆ. ಮಂಜು ಇದರಲ್ಲಿ ಮೇಲುಗೈ ಸಾಧಿಸಿದ್ದರು. ಎಲ್ಲರ ಜತೆ ಅವರು ಅದ್ಭುತವಾಗಿ ಹೊಂದಿಕೊಳ್ಳುತ್ತಿದ್ದರು.

ಗಮನ ಸೆಳೆಯುವ ಗುಣ:

ಮಂಜು ಅವರನ್ನು ದ್ವೇಷಿಸೋಕೆ ಯಾರಿಗೂ ಕಾರಣ ಸಿಗುವುದಿಲ್ಲ. ಪ್ರಶಾಂತ್​ ಸಂಬರಗಿ ಅವರು ಮಂಜು ಅವರನ್ನು ದ್ವೇಷಿಸುತ್ತಿದ್ದರು. ಕೊನೆಕೊನೆಗೆ ಅದು ತಪ್ಪು ಅನ್ನೋದು ಅವರಿಗೆ ಅರಿವಾಗಿತ್ತು. ಈ ಕಾರಣಕ್ಕೆ ಮತ್ತೆ ಹೊಂದಿಕೊಂಡರು. ಮಂಜು ಅವರಲ್ಲಿ ಗಮನ ಸೆಳೆಯುವ ಗುಣವಿದೆ. ಅದು ಎಲ್ಲರಿಗೂ ಇಷ್ಟವಾಗುವಂತಹದು.

ಇದನ್ನೂ ಓದಿ:

ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು