AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಮುರಿದ ಆರ್ಯವರ್ಧನ್ ಗುರೂಜಿ; ಮನೆ ಮಂದಿಗೆ ಕಠಿಣ ಶಿಕ್ಷೆ ಕೊಟ್ಟ ಬಿಗ್ ಬಾಸ್

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ಮಧ್ಯೆ ಫೈಟ್ ನಡೆಯೋದು ಕಾಮನ್. ಈಗಲೂ ಅದೇ ರೀತಿ ಆಗಿದೆ. ಕಳೆದ ವಾರ ಅನುಪಮಾ ಗೌಡ ಅವರು ಕಳಪೆ ಪಟ್ಟ ಪಡೆದು ಜೈಲಿನಲ್ಲಿದ್ದರು. ಆಗ ಎಡವಟ್ಟು ಸಂಭವಿಸಿದೆ.

ನಿಯಮ ಮುರಿದ ಆರ್ಯವರ್ಧನ್ ಗುರೂಜಿ; ಮನೆ ಮಂದಿಗೆ ಕಠಿಣ ಶಿಕ್ಷೆ ಕೊಟ್ಟ ಬಿಗ್ ಬಾಸ್
ಆರ್ಯವರ್ಧನ್-ರೂಪೇಶ್
TV9 Web
| Edited By: |

Updated on: Nov 07, 2022 | 3:38 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಈಗಾಗಲೇ ಹಲವು ಸ್ಪರ್ಧಿಗಳು ಎಲಿಮಿನೇಟ್ ಆಗಿ ಹೋಗಿದ್ದಾರೆ. ನವೆಂಬರ್ 6ರ ಎಪಿಸೋಡ್​ನಲ್ಲಿ ಸಾನ್ಯಾ ಐಯ್ಯರ್ ಅವರು ಮನೆಯಿಂದ ಔಟ್ ಆದರು. ಇದರಿಂದ ರೂಪೇಶ್ ಶೆಟ್ಟಿಗೆ (Roopesh Shetty) ಒಂಟಿತನ ಕಾಡುತ್ತಿದೆ. ಸಾನ್ಯಾ ಐಯ್ಯರ್ ಔಟ್ ಆದ ಎಪಿಸೋಡ್​ ಮುಗಿಯುತ್ತಿದಂತೆ ಬಿಗ್ ಬಾಸ್ ಮನೆ ರಣರಂಗವಾಗಿದೆ. ಮನೆ ಮಂದಿ ಕಿತ್ತಾಟ ಆರಂಭಿಸಿದ್ದಾರೆ. ಇದಕ್ಕೆ ಕಾರಣವಾಗಿದ್ದು ಆರ್ಯವರ್ಧನ್ ಅವರು ನಿಯಮ ಮುರಿದಿದ್ದು. ಈ ಕಾರಣಕ್ಕೆ ಬಿಗ್ ಬಾಸ್ ಮನೆ ಮಂದಿಗೆ ಕಠಿಣ ಶಿಕ್ಷೆ ಒಂದನ್ನು ನೀಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ಮಧ್ಯೆ ಫೈಟ್ ನಡೆಯೋದು ಕಾಮನ್. ಈಗಲೂ ಅದೇ ರೀತಿ ಆಗಿದೆ. ಕಳೆದ ವಾರ ಅನುಪಮಾ ಗೌಡ ಅವರು ಕಳಪೆ ಪಟ್ಟ ಪಡೆದು ಜೈಲಿನಲ್ಲಿದ್ದರು. ಬಿಗ್ ಬಾಸ್ ನಿಯಮಗಳ ಪ್ರಕಾರ ಜೈಲಿನಲ್ಲಿರುವ ವ್ಯಕ್ತಿಗಳೇ ಮನೆಯಲ್ಲಿ ತರಕಾರಿ ಕತ್ತರಿಸಬೇಕು. ಒಂದೊಮ್ಮೆ ನಿಯಮ ಮುರಿದು ಮನೆ ಮಂದಿ ತರಕಾರಿ ಕತ್ತರಿಸಿದರೆ ಅದಕ್ಕೆ ಶಿಕ್ಷೆ ನೀಡಲಾಗುತ್ತದೆ. ಅನುಪಮಾಗೆ ಈರುಳ್ಳಿ ಕತ್ತರಿಸಲು ಕೊಡದೆ ಆರ್ಯವರ್ಧನ್​ ಅವರೇ ಈ ಕೆಲಸ ಮಾಡಿದ್ದಾರೆ.

ಆರ್ಯವರ್ಧನ್ ಈರುಳ್ಳಿ ಕತ್ತರಿಸುವುದನ್ನು ಬಿಗ್ ಬಾಸ್ ಗಮನಿಸಿದ್ದಾರೆ. ಹೀಗಾಗಿ, ಈರುಳ್ಳಿ, ಕೊತ್ತುಂಬರಿ ಸೊಪ್ಪು ಮೊದಲಾದ ತರಕಾರಿಗಳನ್ನು ಸ್ಟೋರೂಂಗೆ ಮರಳಿಸುವಂತೆ ಆದೇಶ ಬಂದಿದೆ. ಇದರಿಂದ ಮನೆ ಮಂದಿ ಕಂಗಾಲಾಗಿದ್ದಾರೆ. ‘ರೂಪೇಶ್ ರಾಜಣ್ಣ ಅವರು ಆಮ್ಲೆಟ್​ಗೆ ಈರುಳ್ಳಿ ಬೇಕೆ ಬೇಕು ಎಂದು ಪಟ್ಟು ಹಿಡಿದರು. ಅದಕ್ಕಾಗಿ ನಾನು ಈರುಳ್ಳಿ ಕತ್ತರಿಸಿದೆ. ಹಾಗಾಗಿ ಈ ರೀತಿ ಆಯಿತು. ನೀವು ಮಾಡಿದ ತಪ್ಪಿಗೆ ನಾನು ಶಿಕ್ಷೆ ಅನುಭವಿಸುತ್ತಿದ್ದೇನೆ’ ಎಂದು ಆರ್ಯವರ್ಧನ್ ಸಿಟ್ಟಾದರು.

ಇದನ್ನೂ ಓದಿ: Sanya Iyer: ಬಿಗ್​ ಬಾಸ್​ ಮನೆಯಿಂದ ಸಾನ್ಯಾ ಐಯ್ಯರ್​ ಔಟ್​: ಬಿಕ್ಕಿ ಬಿಕ್ಕಿ ಅತ್ತ ರೂಪೇಶ್​ ಶೆಟ್ಟಿ

ಆಗ ಮಧ್ಯದಲ್ಲಿ ಬಂದ ರೂಪೇಶ್ ರಾಜಣ್ಣ ಅವರು ಸಿಟ್ಟಾಗಿದ್ದಾರೆ. ‘ನಾನು ಇಲ್ಲಿಗೆ ಹೊಸಬ. ನನಗೆ ಇಲ್ಲಿನ ನಿಯಮ ಗೊತ್ತಿರಲಿಲ್ಲ’ ಎಂದು ಸಮಜಾಯಿಶಿ’ ನೀಡಲು ಬಂದರು. ಇದಕ್ಕೆ ಅರುಣ್ ಸಾಗರ್ ಅವರು ಸಿಟ್ಟಾದರು. ‘ಆರು ವಾರ ಕಳೆದ ಮೇಲೆ ಇಲ್ಲಿರುವ ಸ್ಪರ್ಧಿಗಳಿಗೆ ಯಾರೂ ಹೊಸಬ ಅಂತ ಹೇಳಲ್ಲ’ ಎಂದು ಸಿಟ್ಟಾದರು.

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ