AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊತ್ತಿದ್ದೂ ತಪ್ಪು ಮಾಡಿದ ಆರ್ಯವರ್ಧನ್ ಗುರೂಜಿ; ಮನೆ ಮಂದಿಗೆ ಕಠಿಣ ಶಿಕ್ಷೆ

ಆರ್ಯವರ್ಧನ್ ಗುರೂಜಿ ಅವರು ಯಾವಾಗಲೂ ತಮ್ಮ ವಾದವೇ ಸರಿ ಎನ್ನುತ್ತಾ ಬಂದವರು. ಅವರು ನಡೆದುಕೊಳ್ಳುವ ರೀತಿ ಅನೇಕರಿಗೆ ಇಷ್ಟವಾಗುತ್ತಿಲ್ಲ. ಕೆಲವೊಮ್ಮೆ ತಪ್ಪು ಮಾಡಿದರೂ ಅದನ್ನು ಒಪ್ಪಿಕೊಳ್ಳುವುದಿಲ್ಲ.

ಗೊತ್ತಿದ್ದೂ ತಪ್ಪು ಮಾಡಿದ ಆರ್ಯವರ್ಧನ್ ಗುರೂಜಿ; ಮನೆ ಮಂದಿಗೆ ಕಠಿಣ ಶಿಕ್ಷೆ
ಆರ್ಯವರ್ಧನ್
TV9 Web
| Edited By: |

Updated on: Nov 23, 2022 | 10:35 AM

Share

ದಿನ ಕಳೆದಂತೆ ಬಿಗ್ ಬಾಸ್ ಮನೆಯಲ್ಲಿ ಆಟ ಕಠಿಣ ಆಗುತ್ತಿದೆ. ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಪ್ರತಿ ವಾರ ಬೇರೆ ಬೇರೆ ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಒಂದು ವಿಚಿತ್ರ ಟಾಸ್ಕ್ ನೀಡಲಾಗಿದೆ. ಅದುವೇ ಕಾಡಿನ ಟಾಸ್ಕ್. ಬಿಗ್ ಬಾಸ್ ಮನೆಯನ್ನು ಕಾಡಿನ ರೀತಿ ಬದಲಾಯಿಸಲಾಗಿದೆ. ಸ್ಪರ್ಧಿಗಳು ಕೂಡ ಕಾಡು ಮನುಷ್ಯರ ರೀತಿ ಬಟ್ಟೆ ಧರಿಸಿದ್ದಾರೆ. ಈಗ ಬಿಗ್ ಬಾಸ್ ನೀಡಿದ ಒಂದು ಟಾಸ್ಕ್ ವೇಳೆ ಆರ್ಯವರ್ಧನ್ ಗುರೂಜಿ (Aryavardhan Guruji) ಅವರು ಆಡಿದ ರೀತಿಗೆ ಬಿಗ್ ಬಾಸ್ (Bigg Boss) ಕಠಿಣ ಶಿಕ್ಷೆ ನೀಡಿದ್ದಾರೆ.

ಆರ್ಯವರ್ಧನ್ ಗುರೂಜಿ ಅವರು ಯಾವಾಗಲೂ ತಮ್ಮ ವಾದವೇ ಸರಿ ಎನ್ನುತ್ತಾ ಬಂದವರು. ಅವರು ನಡೆದುಕೊಳ್ಳುವ ರೀತಿ ಅನೇಕರಿಗೆ ಇಷ್ಟವಾಗುತ್ತಿಲ್ಲ. ಕೆಲವೊಮ್ಮೆ ತಪ್ಪು ಮಾಡಿದರೂ ಅದನ್ನು ಒಪ್ಪಿಕೊಳ್ಳುವುದಿಲ್ಲ. ಈಗ ಆರ್ಯವರ್ಧನ್ ಅವರು ಒಂದು ದೊಡ್ಡ ತಪ್ಪು ಮಾಡಿದ್ದಾರೆ. ಇದರಿಂದ ಮನೆ ಮಂದಿಗೆ ದೊಡ್ಡ ನಷ್ಟ ಉಂಟಾಗಿದೆ.

ಬಿಗ್ ಬಾಸ್​ನಲ್ಲಿ ಈ ವಾರ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ ನೀರಿನಲ್ಲಿ ಮರದ ಪಂಜರ ಒಂದನ್ನು ಇಡಲಾಗಿತ್ತು. ಇದಕ್ಕೆ 12 ನಟ್​ಗಳನ್ನು ಜೋಡಿಸಲಾಗಿತ್ತು. ಇದನ್ನು ಆಟ ಆಡುವ ಸ್ಪರ್ಧಿಗಳು ಬರಿಗೈನಲ್ಲಿ ಬಿಚ್ಚಬೇಕಿತ್ತು. ಈ ಆದೇಶ ಬಂದ ಹೊರತಾಗಿಯೂ ಆರ್ಯವರ್ಧನ್​ ಬಟ್ಟೆ ಸಹಾಯದಿಂದ ನಟ್ ಬಿಚ್ಚಿದ್ದರು.

ಬಿಗ್ ಬಾಸ್ ನೀಡಿದ ಆದೇಶದಲ್ಲಿ ಬಟ್ಟೆಯನ್ನು ಬಳಕೆ ಮಾಡಬಾರದು ಎಂಬುದನ್ನು ಸ್ಪಷ್ಟವಾಗಿ ಸೂಚಿಸಲಾಗಿತ್ತು. ಆದಾಗ್ಯೂ ಆರ್ಯವರ್ಧನ್ ಅವರು ಬಟ್ಟೆ ಬಳಕೆ ಮಾಡಿದ್ದರು. ಅನುಪಮಾ ಗೌಡ ಮೊದಲಾದವರು ಇಲ್ಲಿ ಎಚ್ಚರಿಕೆ ನೀಡುವ ಕೆಲಸ ಮಾಡಿದರು. ಆದರೆ, ಅದನ್ನು ಆರ್ಯವರ್ಧನ್ ಗಂಭೀರವಾಗಿ ಪರಿಗಣಿಸಿಲ್ಲ. ಆಟ ಮುಗಿದ ಬಳಿಕ ಬಿಗ್ ಬಾಸ್ ಶಿಕ್ಷೆ ಘೋಷಿಸಿದರು.

ಇದನ್ನೂ ಓದಿ: ತಲೆ ಬೋಳಿಸಿಕೊಂಡು ಅಲ್ಲಿ ಕಿಚ್ಚ ಸುದೀಪ್ ಹೆಸರು ಬರೆದುಕೊಳ್ಳಲು ಮುಂದಾದ ಆರ್ಯವರ್ಧನ್

‘ಬಟ್ಟೆ ಬಳಕೆ ಮಾಡಿ ನಟ್ ಬಿಚ್ಚಿದ್ದರಿಂದ ಈ ಆಟವನ್ನು ರದ್ದು ಮಾಡುತ್ತಿದ್ದೇವೆ. ಜತೆಗೆ ಈ ಆಟಕ್ಕೆ ಬಳಕೆ ಮಾಡಿಕೊಂಡಿದ್ದ ಸೌಕರ್ಯ ರದ್ದಾಗುತ್ತಿದೆ’ ಎಂದು ಬಿಗ್ ಬಾಸ್ ಘೋಷಿಸಿದರು. ಇದರಿಂದ ಮನೆ ಮಂದಿ ಆರ್ಯವರ್ಧನ್ ವಿರುದ್ಧ ಕೂಗಾಡಿದರು.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್