AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನಿ ಆಟಕ್ಕೆ ದಂಗಾದ ಇಡೀ ಮನೆ; ಭೇಷ್ ಎಂದ ಎದುರಾಳಿ ರಘು, ರಕ್ಷಿತಾ

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಫಿನಾಲೆ ಸಮೀಪಿಸುತ್ತಿದ್ದಂತೆ ಟಾಸ್ಕ್‌ಗಳಲ್ಲಿ ಮಿಂಚಿದ್ದಾರೆ. ‘ಟಾಪ್ 6’ ರೇಸ್‌ಗಾಗಿ ನಡೆದ ಕಠಿಣ ಟಾಸ್ಕ್‌ನಲ್ಲಿ ಧ್ರುವಂತ್ ಜೊತೆ ಸೇರಿ ದಾಖಲೆ ಮುರಿದು ಗೆದ್ದಿದ್ದಾರೆ. ಎದುರಾಳಿಗಳಾದ ರಘು ಮತ್ತು ರಾಶಿಕಾ ನೀರು ಎರಚಿದರೂ ಸ್ಥಿರವಾಗಿ ನಿಂತು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು. ಅವರ ಅದ್ಭುತ ಆಟಕ್ಕೆ ರಕ್ಷಿತಾ ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಶ್ವಿನಿ ಆಟಕ್ಕೆ ದಂಗಾದ ಇಡೀ ಮನೆ; ಭೇಷ್ ಎಂದ ಎದುರಾಳಿ ರಘು, ರಕ್ಷಿತಾ
ಅಶ್ವಿನಿ-ರಾಶಿಕಾ
ರಾಜೇಶ್ ದುಗ್ಗುಮನೆ
|

Updated on: Jan 08, 2026 | 12:19 PM

Share

ಬಿಗ್ ಬಾಸ್ ಮನೆಯಲ್ಲಿ ವ್ಯಕ್ತಿತ್ವ ಎಷ್ಟು ಮುಖ್ಯವಾಗುತ್ತದೆಯೋ ಟಾಸ್ಕ್ ಆಡೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಟಾಸ್ಕ್​​​ ಉತ್ತಮವಾಗಿ ಆಡುತ್ತಾರೆ ಎಂದರೆ ಅವರಿಗೆ ಹೆಚ್ಚು ಸ್ಕೋಪ್ ಸಿಗುತ್ತದೆ. ಈ ಬಾರಿ ಎಲ್ಲರೂ ನಿಯಮಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಆಟವನ್ನು ಹಲವು ಬಾರಿ ಹಾಳು ಮಾಡಿದ್ದಾರೆ. ಅಶ್ವಿನಿ ಅವರು ಈವರೆಗೆ ಟಾಸ್ಕ್ ವಿನ್ ಆಗಿ ಕ್ಯಾಪ್ಟನ್ ಆಗಿಲ್ಲ. ಆದರೆ, ಫಿನಾಲೆ ಸಮೀಪಿಸುವಾಗ ಅವರು ಆಡಿದ ರೀತಿ ಗಮನ ಸೆಳೆದಿದೆ. ಎದುರಾಳಿಗಳು ಕೂಡ ಭೇಷ್ ಎಂದಿದ್ದಾರೆ.

ಅಶ್ವಿನಿ ಗೌಡ ಅವರು ತಮ್ಮ ಮಾತುಗಳಿಂದ ಈ ಮೊದಲಿನಿಂದಲೂ ಚರ್ಚೆ ಆಗುತ್ತಾ ಬರುತ್ತಿದ್ದಾರೆ. ಅವರು ಕೆಟ್ಟ ಪದ ಬಳಕೆ ಮಾಡಿ ಚರ್ಚೆ ಹುಟ್ಟುಹಾಕಿದ್ದು ಇದೆ. ಅವರು ಕೆಲವು ಟಾಸ್ಕ್​​ಗಳಲ್ಲಿ ಉತ್ತಮವಾಗಿ ಆಡಿದ್ದು ಇದೆ. ಆದರೆ, ಕ್ಯಾಪ್ಟನ್ಸಿ ಟಾಸ್ಕ್ ವಿನ್ ಆಗೋಕೆ ಅವರಿಂದ ಸಾಧ್ಯವಾಗಿಲ್ಲ. ಈಗ ಜನವರಿ 7ರ ಎಪಿಸೋಡ್​​​ನಲ್ಲಿ ಅವರು ಉತ್ತಮವಾಗಿ ಟಾಸ್ಕ್ ಆಡಿದ್ದಾರೆ.

‘ಟಾಪ್ 6’ ರೇಸ್​ಗೆ ಸ್ಪರ್ಧಿಗಳಾಗಲು ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಇದರ ಅನುಸಾರ ಸ್ಪರ್ಧಿಗಳು ಒಂದು ಕಂಬದ ಮಾದರಿಯ ವಸ್ತುವನ್ನು ಹಿಡಿದು ನಿಲ್ಲಬೇಕು. ಹಿಂಭಾಗದಲ್ಲಿ ಅವರಿಗೆ ತೂಕವನ್ನು ಹೊರಿಸಲಾಗಿತ್ತದೆ. ಇದರ ಜೊತೆಗೆ ಎದುರಿದ್ದವರು ನೀರನ್ನು ಎರಚುತ್ತಾರೆ. ರಘು ಹಾಗೂ ರಾಶಿಕಾ ಒಂದು ತಂಡವಾದರೆ, ಧ್ರುವಂತ್ ಹಾಗೂ ಅಶ್ವಿನಿ ಮತ್ತೊಂದು ಟೀಂನಲ್ಲಿ ಇದ್ದರು.

ಇದನ್ನೂ ಓದಿ: ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ್

ರಾಶಿಕಾ 29.51 ನಿಮಿಷ ಹಾಗೂ ರಘು ಅವರು 70.10 ನಿಮಿಷ ನಿಂತಿದ್ದರು. ಅಶ್ವಿನಿ ಗೌಡ ಹಾಗೂ ಧ್ರುವಂತ್ ಅವರು 70 ನಿಮಿಷದ ದಾಖಲೆಯನ್ನು ಮುರಿದು ಗೆಲುವು ಕಂಡಿದ್ದಾರೆ. ಅಶ್ವಿನಿ ಹಾಗೂ ಧ್ರುವಂತ್ ಅವರು ಅಷ್ಟಾಗಿ ನೀರೆರಚಲು ಹೋಗಿರಲಿಲ್ಲ. ಅಶ್ವಿನಿ-ಧ್ರುವಂತ್ ನಿಂತಾಗ ರಘು ಹಾಗೂ ರಾಶಿಕಾ ಜೋರಾಗಿಯೇ ನೀರು ಎರಚಿದ್ದರು. ಆದರೆ, ಇದೆಲ್ಲವನ್ನೂ ಎದುರಿಸಿ ಅವರು ನಿಂತರು. ಅವರ ಆಟ ನೋಡಿ ರಕ್ಷಿತಾ ಹಾಗೂ ರಘು ಮೆಚ್ಚಿಕೊಂಡರು. ‘ನಿಮ್ಮ ಬಗ್ಗೆ ಹೆಮ್ಮೆ ಆಗುತ್ತಿದೆ’ ಎಂದು ರಕ್ಷಿತಾ ಅವರು ಅಶ್ವಿನಿಗೆ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ