AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಹೊಸ ಎರಡು ಪಾತ್ರಕ್ಕೆ ಬಿಗ್ ಬಾಸ್​​ನಲ್ಲಿ ಆಡಿಷನ್

ಬಿಗ್ ಬಾಸ್ ಕನ್ನಡ ಮನೆಗೆ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ತಂಡ ಭೇಟಿ ನೀಡಿ ಹೊಸ ಎರಡು ಪಾತ್ರಗಳಿಗೆ ಆಡಿಷನ್ ನಡೆಸಿತು. ಸುಷ್ಮಾ ರಾವ್, ಸುದರ್ಶನ್ ರಂಗಪ್ರಸಾದ್ ಅವರು ಬಿಗ್ ಬಾಸ್ ಸ್ಪರ್ಧಿಗಳಾದ ರಕ್ಷಿತಾ ಮತ್ತು ರಘು ಅವರನ್ನು ಆಡಿಷನ್‌ಗೆ ಆಯ್ಕೆ ಮಾಡಿದರು. ಬಿಗ್ ಬಾಸ್‌ನಲ್ಲಿ ಧಾರಾವಾಹಿಯ ಆಡಿಷನ್ ನಡೆದಿರುವುದು ವೀಕ್ಷಕರ ಗಮನ ಸೆಳೆದಿದೆ.

‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಹೊಸ ಎರಡು ಪಾತ್ರಕ್ಕೆ ಬಿಗ್ ಬಾಸ್​​ನಲ್ಲಿ ಆಡಿಷನ್
ಬಿಗ್ ಬಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 29, 2025 | 7:43 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಕಳೆದ ವಾರ ಸುದೀಪ್ ಅವರು ಆಗಮಿಸಿರಲಿಲ್ಲ ಎಂಬುದು ಗೊತ್ತೇ ಇದೆ. ಅವರು ‘ಮಾರ್ಕ್’ ಚಿತ್ರದ ಪ್ರಚಾರದಲ್ಲಿ ಬ್ಯುಸಿ ಇದ್ದರು. ತಮ್ಮ ಸಿನಿಮಾನ ರಕ್ಷಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಅವರಿಗೆ ಇದೆ. ಹೀಗಾಗಿ, ಬಿಗ್ ಬಾಸ್​​ಗೆ ಅವರು ಬರಲಿಲ್ಲ. ಬದಲಿಗೆ ಸೆಲೆಬ್ರಿಟಿಗಳ ದಂಡು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಬಂದರು. ಈ ಪೈಕಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ತಂಡ ಗಮನ ಸೆಳೆಯಿತು. ಹೊಸ ಎರಡು ಪಾತ್ರಕ್ಕೆ ಅವರು ಆಡಿಷನ್ ಕೂಡ ಮಾಡಿದರು ಎಂದರೆ ನೀವು ನಂಬಲೇಬೇಕು.

ಕಳೆದ ಸೀಸನ್​​ ಅಲ್ಲಿ ‘ಬಾಯ್ಸ್ vs ಗರ್ಲ್ಸ್’ ಶೋ ನಡೆಯಿತು. ಅದಕ್ಕೂ ಮೊದಲು ಬಿಗ್ ಬಾಸ್ ಮನೆಗೆ ಬಂದ ಈ ಶೋನ ಸ್ಪರ್ಧಿಗಳು ಭರ್ಜರಿಯಾಗಿ ಆಡಿಷನ್ ಮಾಡಿದರು. ಚೈತ್ರಾ ಕುಂದಾಪುರ, ರಜತ್, ಧನರಾಜ್​, ಹನುಮಂತ ಮೊದಲಾದವರನ್ನು ಬಿಗ್​ ಬಾಸ್​​ನಲ್ಲೇ ಆಡಿಷನ್ ಮಾಡಿ ಕರೆದುಕೊಂಡು ಹೋಗಲಾಯಿತು. ಈ ಬಾರಿಯೂ ಅದೇ ರೀತಿ ಮಾಡುವ ಸೂಚನೆಯನ್ನು ಬಿಗ್ ಬಾಸ್ ಅಲ್ಲಿ ನೀಡಲಾಯಿತು.

‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಮುಖ್ಯಪಾತ್ರಧಾರಿಗಳಾದ ಸುಷ್ಮಾ ರಾವ್ ಹಾಗೂ ಸುದರ್ಶನ್ ರಂಗಪ್ರಸಾದ್ ಅವರು ಬಿಗ್ ಬಾಸ್​ ಮನೆಗೆ ಬಂದರು. ಬರುತ್ತಿದ್ದಂತೆ ಅವರು ಒಂದು ವಿಷಯ ತಿಳಿಸಿದರು. ‘ನಮ್ಮ ಧಾರಾವಾಹಿಯಲ್ಲಿ ಎರಡು ಹೊಸ ಪಾತ್ರಧಾರಿಗಳು ಬರುತ್ತಿದ್ದಾರೆ. ಇದಕ್ಕಾಗಿ ನಾವು ಆಡಿಷನ್ ಮಾಡುತ್ತಿದ್ದೇವೆ’ ಎಂದರು. ಆಗ ಸ್ಪಂದನಾ ಅವರು, ‘ಮುಗಿಯದ ಕಥೆ’ ಎಂದರು.

‘ನಾವು ಆಡಿಷನ್​​ಗೆ ಕೇವಲ ಕಲಾವಿದರನ್ನು ಮಾತ್ರ ಆಯ್ಕೆ ಮಾಡುತ್ತಾ ಇಲ್ಲ. ಕಲಾವಿದರು ಅಲ್ಲದವರನ್ನೂ ಆಯ್ಕೆ ಮಾಡುತ್ತಿದ್ದೇವೆ’ ಎಂದರು ಸುಷ್ಮಾ. ಆಗ ಎಲ್ಲರೂ ಅಚ್ಚರಿ ಹೊರಹಾಕಿದರು. ‘ರಕ್ಷಿತಾ ಹಾಗೂ ರಘು ಅವರನ್ನು ನಾವು ಆಯ್ಕೆ ಮಾಡಿದ್ದೇವೆ. ಅವರಿಗೆ ಆಡಿಷನ್ ಮಾಡುತ್ತೇವೆ’ ಎಂದರು ಸುಷ್ಮಾ. ರಘು ಅವರು ನಾವು ನಟಿಸೋಲ್ಲ ಎಂದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ರಘು, ಅಶ್ವಿನಿ ಗೌಡ ಸ್ವಯಂವರ? ಗಿಲ್ಲಿ ನಟ ಶಾಕ್

ನಂತರ ರಕ್ಷಿತಾ ಹಾಗೂ ಆಡಿಷನ್ ಮಾಡಿದರು. ಆದರೆ, ಆಡಿಷನ್ ಬಳಿಕ ಇದು ಗಂಭೀರವಾಗಿ ಹೇಳಿದ್ದು ಅಲ್ಲ ಎಂಬುದು ಗೊತ್ತಾಗಿದೆ. ಆದರೆ, ಈ ವಿಷಯವನ್ನು ಅವರು ಎಲ್ಲಿಯೂ ಉಲ್ಲೇಖಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು