AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು?

ಇಂಗ್ಲಿಷ್​ನ ಹೆಚ್ಚು ಬಳಕೆ ಮಾಡದಂತೆ ‘ಬಿಗ್ ಬಾಸ್​’ ಅಕ್ಟೋನರ್ 16ರ ಎಪಿಸೋಡ್​ನಲ್ಲಿ ಎಚ್ಚರಿಕೆ ನೀಡಿದ್ದಾರೆ. ಸುದೀಪ್ ಹೇಳಿದ ಬದಲಾವಣೆಯಲ್ಲಿ ಇದು ಕೂಡ ಇತ್ತು ಎನ್ನಲಾಗಿದೆ. ಈಗ ಸುದೀಪ್ ಕೋರಿಕೆ ಈಡೇರಿದೆ ಎನ್ನಬಹುದು.

ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು?
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Oct 17, 2024 | 10:45 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಬಳಿಕ ಬಿಗ್ ಬಾಸ್ ತೊರೆಯೋದಾಗಿ ಸುದೀಪ್ ಅವರು ಘೋಷಣೆ ಮಾಡಿದ್ದರು. ಇದು ಅನೇಕರಿಗೆ ಬೇಸರ ಮೂಡಿಸಿತ್ತು. ಸುದೀಪ್ ಅವರು ಈ ರೀತಿ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿತ್ತು. ಈ ಬಗ್ಗೆ ಮಾತನಾಡಿದ್ದ ಕನ್ನಡ ಪರ ಹೋರಾಟಗಾರ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ರೂಪೇಶ್ ರಾಜಣ್ಣ ಕೆಲವು ವಿಚಾರಗಳನ್ನು ಹೇಳಿದ್ದರು. ಅಲ್ಲದೆ, ಕಲರ್ಸ್ ವಾಹಿನಿ ಮಾಡಿದ ತಪ್ಪನ್ನು ಸರಿಪಡಿಸಿಕೊಂಡಿದೆ ಎಂದಿದ್ದರು. ಅಷ್ಟೇ ಅಲ್ಲ ಸುದೀಪ್ ಹೇಳಿದ್ದ ಬದಲಾವಣೆಗೆ ಕಲರ್ಸ್ ಕನ್ನಡ ಒಪ್ಪಿದೆ. ಇದು ಎಪಿಸೋಡ್​ನಲ್ಲೇ ಗೊತ್ತಾಗಿದೆ.

ಬಿಗ್ ಬಾಸ್​ನಲ್ಲಿ ಇಂಗ್ಲಿಷ್ ವಾಕ್ಯಗಳನ್ನು ಹೆಚ್ಚು ಬಳಕೆ ಮಾಡುವಂತಿಲ್ಲ. ಕನ್ನಡವೇ ಬಳಕೆ ಆಗಬೇಕು. ಒಂದೊಮ್ಮೆ ಇಂಗ್ಲಿಷ್ ಬಳಕೆ ಆದರೆ, ‘ಹುಟ್ಟಿದರೇ ಕನ್ನಡ್​ ನಾಡಲ್ಲಿ ಹುಟ್ಟಬೇಕು’ ಎನ್ನುವ ಹಾಡನ್ನು ಹಾಕುತ್ತಿದ್ದರು. ಆದರೆ, ಈ ಪದ್ಧತಿ ಇತ್ತೀಚೆಗೆ ಮಾಯ ಆಗಿತ್ತು. ಈಗ ಸುದೀಪ್ ಅವರ ಸೂಚನೆಯನ್ನು ಒಪ್ಪಿದ ಬಳಿಕ ಇದನ್ನು ಮತ್ತೆ ಜಾರಿಗೆ ತರಲಾಗಿದೆ.

ಇಂಗ್ಲಿಷ್​ನ ಹೆಚ್ಚು ಬಳಕೆ ಮಾಡದಂತೆ ‘ಬಿಗ್ ಬಾಸ್​’ ಅಕ್ಟೋನರ್ 16ರ ಎಪಿಸೋಡ್​ನಲ್ಲಿ ಎಚ್ಚರಿಕೆ ನೀಡಿದ್ದಾರೆ. ಸುದೀಪ್ ಹೇಳಿದ ಬದಲಾವಣೆಯಲ್ಲಿ ಇದು ಕೂಡ ಇತ್ತು ಎನ್ನಲಾಗಿದೆ. ಈಗ ಸುದೀಪ್ ಕೋರಿಕೆ ಈಡೇರಿದೆ ಎನ್ನಬಹುದು.

ಈ ಮೊದಲು ಟ್ವೀಟ್ ಮಾಡಿದ್ದ ರಾಜಣ್ಣ, ‘ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಬಿಗ್ ಬಾಸ್ ಆಯೋಜಕರು ಒಪ್ಪಿದ್ದಾರೆ. ತಮಗೂ ಹಾಗೂ  ಕನ್ನಡದ ಪರವಾಗಿ ನಿಂತ ಸುದೀಪ್ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು. ಬದಲಾವಣೆ ನೀವೇ ನೋಡುವಿರಿ’ ಎಂದಿದ್ದಾರೆ. ಈಗ ಆ ಬದಲಾವಣೆ ಕಾಣಿಸಿದೆ.

ಇದನ್ನೂ ಓದಿ: ಮೂರೇ ವಾರಕ್ಕೆ ಲಾಯರ್ ಜಗದೀಶ್ ಬಿಗ್ ಬಾಸ್​ನಲ್ಲಿ ಮಾಡಿರುವ ಅವಾಂತರಗಳು ಒಂದೆರಡಲ್ಲ

ಮನೆಯಲ್ಲಿ ನಿದ್ದೆ ಮಾಡುವುದು ಎಷ್ಟು ತಪ್ಪೋ ಇಂಗ್ಲಿಷ್ ಪದಗಳನ್ನು ಹೆಚ್ಚು ಬಳಕೆ ಮಾಡೋದು ಕೂಡ ತಪ್ಪೇ. ಅದನ್ನು ಮೀರಿದರೆ ಶಿಕ್ಷೆ ಖಚಿತ. ಸದ್ಯ ಬಿಗ್ ಬಾಸ್ ಮನೆಯಿಂದ ರಂಜಿತ್ ಹಾಗೂ ಜಗದೀಶ್ ಎಲಿಮಿನೇಟ್ ಆಗಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಒಂಟೆ ಮೇಲೆ ಮಲಗಿ ಎಕ್ಸ್​ಪ್ರೆಸ್​ವೇನಲ್ಲಿ ಸವಾರಿ ಹೊರಟ ಕುಡುಕ
ಒಂಟೆ ಮೇಲೆ ಮಲಗಿ ಎಕ್ಸ್​ಪ್ರೆಸ್​ವೇನಲ್ಲಿ ಸವಾರಿ ಹೊರಟ ಕುಡುಕ