AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ಬಂದಿದ್ರು ಐಶ್ವರ್ಯಾ ಸಿಂಧೋಗಿ; ಇಲ್ಲಿದೆ ಹಳೆಯ ವಿಡಿಯೋ

ಐಶ್ವರ್ಯಾ ಶಿಂಧೋಗಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ಕಷ್ಟದ ಬಾಲ್ಯ ಮತ್ತು ‘ಸೂಪರ್ ಕ್ವೀನ್’ ರಿಯಾಲಿಟಿ ಶೋನಲ್ಲಿ ಅವರ ಭಾಗವಹಿಸುವಿಕೆ ವೈರಲ್ ಆಗಿದೆ. ಅವರ ತಂದೆ-ತಾಯಿಯ ನಷ್ಟದ ಬಗ್ಗೆ ಮಾತನಾಡುತ್ತಾ ಅವರು ಕಣ್ಣೀರು ಹಾಕಿದ್ದಾರೆ.

ಜೀ ಕನ್ನಡದಲ್ಲಿ ಬಂದಿದ್ರು ಐಶ್ವರ್ಯಾ ಸಿಂಧೋಗಿ; ಇಲ್ಲಿದೆ ಹಳೆಯ ವಿಡಿಯೋ
Aishwarya
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 20, 2024 | 8:47 AM

Share

ಐಶ್ವರ್ಯಾ ಶಿಂಧೋಗಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸ್ಪರ್ಧೆ ಮಾಡಿದ್ದಾರೆ. ಅವರು ಸ್ಪರ್ಧಿಯಾಗಿ ಗಮನ ಸೆಳೆದಿದ್ದಾರೆ. ಅವರು ಕೆಲವು ವಿಚಾರಕ್ಕೆ ಟೀಕೆ ಕೂಡ ಆಗುತ್ತಿದ್ದಾರೆ. ಅಂದಹಾಗೆ, ಐಶ್ವರ್ಯಾ ಅವರಿಗೆ ಇದು ಮೊದಲ ರಿಯಾಲಿಟಿ ಶೋ ಅಲ್ಲ. ಈ ಮೊದಲು ಕೆಲವು ರಿಯಾಲಿಟಿ ಶೋಗಳಲ್ಲಿ ಅವರು ಸ್ಪರ್ಧೆ ಮಾಡಿದ್ದರು. ಅವರು ಜೀ ಕನ್ನಡದ ರಿಯಾಲಿಟಿ ಶೋಗೂ ಬಂದಿದ್ದರು.

ಜೀ ಕನ್ನಡದಲ್ಲಿ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಂಡಿವೆ. ಆ ಪೈಕಿ ‘ಸೂಪರ್​ ಕ್ವೀನ್’ ರಿಯಾಲಿಟಿ ಶೋ ಕೂಡ ಒಂದು. ಈ ರಿಯಾಲಿಟಿ ಶೋಗೆ ಬಂದು ಅವರು ತಮ್ಮ ಕಷ್ಟದ ದಿನದ ಬಗ್ಗೆ ಹೇಳಿಕೊಂಡಿದ್ದರು. ಆ ವಿಡಿಯೋನ ಈಗ ವೈರಲ್ ಮಾಡಲಾಗುತ್ತಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಐಶ್ವರ್ಯಾ ಅವರಿಗೆ ತಂದೆ ತಾಯಿ ಇಬ್ಬರೂ ಇಲ್ಲ. ಅವರು ಕಷ್ಟಪಟ್ಟು ಜೀವನ ಸಾಗಿಸುತ್ತಾ ಇದ್ದಾರೆ. ಅವರು ಕಷ್ಟದ ದಿನಗಳ ಬಗ್ಗೆ ಹೇಳಿಕೊಂಡಿದ್ದರು. ‘ನನ್ನ ತಂದೆ ತಾಯಿ ನಿಧನ ಹೊಂದಿದಾಗ ನನ್ನ ಕುಟುಂಬದ ಯಾರೂ ನನ್ನತ್ತ ತಿರುಗಿ ನೋಡಿಲ್ಲ’ ಎಂದು ಐಶ್ವರ್ಯಾ ಅವರು ಹೇಳಿಕೊಂಡಿದ್ದರು. ‘ನನ್ನ ಸಿಂಬಾ (ಶ್ವಾನ) ನನಗೆ ಎಲ್ಲವೂ. ನನ್ನ ತಂದೆ-ತಾಯಿಯ ಪ್ರೀತಿಯನ್ನು ಅವನಲ್ಲಿ ನೋಡಿದ್ದೇನೆ’ ಎಂದು ಐಶ್ವರ್ಯಾ ಹೇಳಿದ್ದರು. ತಂದೆ ತಾಯಿಯನ್ನು ನೆನಪಿಸಿಕೊಂಡು ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ: ಹೆಂಗ್ ಹೆಂಗೋ ಆಡ್ತಿದ್ದಾರೆ ಬಿಗ್ ಬಾಸ್ ಐಶ್ವರ್ಯಾ 

ಐಶ್ವರ್ಯಾ ಅವರು ಈಗಾಗಲೇ ಬಿಗ್ ಬಾಸ್​ನಲ್ಲಿ ಎಲಿಮಿನೇಟ್ ಆಗಿ ಇರಬೇಕಿತ್ತು ಎಂದು ಅನೇಕರು ಅಭಿಪ್ರಾಯ ಪಟ್ಟಿದ್ದಾರೆ. ಇದಕ್ಕೆ ಕಾರಣವೂ ಇದೆ. ಒಂದು ವಾರದ ಎಲಿಮಿನೇಶನ್​ನಲ್ಲಿ ಶಿಶಿರ್ ಹಾಗೂ ಐಶ್ವರ್ಯ ಕೊನೆಯ ಹಂತದಲ್ಲಿ ಇದ್ದರು. ಆ ವಾರ ಶೋಭಾ ಶೆಟ್ಟಿ ತಾವೇ ಎಲಿಮಿನೇಟ್ ಆಗೋದಾಗಿ ಹೇಳಿಕೊಂಡರು. ಒಂದೊಮ್ಮೆ ಆ ವಾರ ಶೋಭಾ ಎಲಿಮಿನೇಟ್ ಆಗದೇ ಇದ್ದರೆ ಐಶ್ವರ್ಯಾ ಅವರು ಹೊರಹೋಗಬೇಕಿತ್ತು. ಆ ವಾರ ತಾವೇ ಎಲಿಮಿನೇಟ್ ಆಗುತ್ತೇನೆ ಎಂದು ಅವರಿಗೆ ಬಲವಾಗಿ ಅನಿಸಿತ್ತು. ಈ ಕಾರಣದಿಂದಲೇ ಕಣ್ಣೀರು ಹಾಕಿದ್ದರು. ಆದರೆ, ಅದೃಷ್ಟವಶಾತ್ ಅವರು ಬಚಾವ್ ಆದರು. ಈ ವಾರ ಯಾವುದೇ ಎಲಿಮಿನೇಷನ್ ನಡೆಯೋದಿಲ್ಲ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:47 am, Fri, 20 December 24

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ