AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಧಿ ಅಸುರಾಧಿಪತಿ ಅಲ್ಲ, ಜೋಕರ್’; ಸುದೀಪ್​ಗೂ ಹೀಗೆಯೇ ಅನಿಸಿತು

ಬಿಗ್ ಬಾಸ್ ಕನ್ನಡ ಮನೆಯಲ್ಲಿ ಕಾಕ್ರೋಚ್ ಸುಧಿ ಅವರಿಗೆ ಅಸುರಾಧಿಪತಿ ಪಾತ್ರ ನೀಡಲಾಗಿತ್ತು. ಆದರೆ, ಅವರು ಜೋಕರ್ ರೀತಿ ನಡೆದುಕೊಂಡಿದ್ದು ಮನೆಯ ಸದಸ್ಯರ ಹಾಗೂ ವೀಕ್ಷಕರ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ ಸೀಸನ್‌ಗಳಲ್ಲಿ ಯಶಸ್ವಿಯಾಗಿ ನಿರ್ವಹಿಸಿದ ಈ ಪಾತ್ರವನ್ನು ಸುಧಿ ನಿರೀಕ್ಷಿತ ಮಟ್ಟದಲ್ಲಿ ನಿರ್ವಹಿಸಲಿಲ್ಲ.

‘ಸುಧಿ ಅಸುರಾಧಿಪತಿ ಅಲ್ಲ, ಜೋಕರ್’; ಸುದೀಪ್​ಗೂ ಹೀಗೆಯೇ ಅನಿಸಿತು
ಸುದೀಪ್-ಸುಧಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 12, 2025 | 9:53 AM

Share

ಬಿಗ್ ಬಾಸ್ ಮನೆಯಲ್ಲಿ ನಡೆಯುವ ಡ್ರಾಮಗಳು ಒಂದೆರಡಲ್ಲ. ಇದೆಲ್ಲವನ್ನು ವೀಕ್ಷಕರು ಸಹಿಸಿಕೊಳ್ಳಲೇಬೇಕು. ಈ ವಾರವೂ ಬಿಗ್ ಬಾಸ್ ಮನೆಯಲ್ಲಿ ಹಲವು ಡ್ರಾಮಾಗಳು ನಡೆದವು ಎಂದರೂ ಅದು ತಪ್ಪಾಗಲಿಕ್ಕಿಲ್ಲ. ಕಾಕ್ರೋಚ್ ಸುಧಿ ಅವರನ್ನು ಅಸುರಾಧಿಪತಿ ಎಂದು ಘೋಷಿಸಲಾಯಿತು ಮತ್ತು ಅವರಿಗೆ ಮನೆಯನ್ನು ನಿಯಂತ್ರಿಸುವ ಅಧಿಕಾರವನ್ನು ನೀಡಲಾಯಿತು. ಆದರೆ, ಅವರು ಕೊನೆಗೆ ಆಗಿದ್ದು ಜೋಕರ್ ಎಂದರೂ ತಪ್ಪಾಗಲಿಕ್ಕಿಲ್ಲ.

ಕಳೆದ ಸೀಸನ್​ನಲ್ಲಿ ಉಗ್ರಂ ಮಂಜುಗೆ ಇದೇ ರೀತಿಯ ಕ್ಯಾರೆಕ್ಟರ್ ನೀಡಲಾಗಿತ್ತು ಮತ್ತು ಅದನ್ನು ಅವರು ಸಮರ್ಥವಾಗಿ ನಿರ್ವಹಿಸಿದರು. ಈ ಹಿಂದಿನ ಸೀಸನ್​ಗಳಲ್ಲಿ ಎಲ್ಲರೂ ಇದನ್ನು ಒಳ್ಳೆಯ ರೀತಿಯಲ್ಲಿ ನಿರ್ವಹಿಸಿಕೊಂಡು ಹೋಗಿದ್ದರು. ಆದರೆ, ಈ ಬಾರಿ ಅದೆಲ್ಲವೂ ತಲೆಕೆಳಗಾಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಎಲ್ಲರೂ ತಮ್ಮ ಮನಸ್ಸಿಗೆ ಬಂದಂತೆ ಆಟ ಆಡುವುದನ್ನು ಕಾಣಬಹುದು.

ಕಾಕ್ರೋಚ್ ಸುಧಿಗೆ ಅಸುರನ ಸ್ಥಾನ ನೀಡಲಾಯಿತು. ಆದರೆ, ಅವರು ಅಕ್ಷರಶಃ ಜೋಕರ್ ರೀತಿ ನಡೆದುಕೊಂಡರು. ಮನೆಯಲ್ಲಿ ಅನೇಕ ಸ್ಪರ್ಧಿಗಳು ಇದೇ ರೀತಿಯ ಅಭಿಪ್ರಾಯ ನೀಡಿದ್ದಾರೆ. ರಾಶಿಕಾ ಅವರು, ‘ಮಂಜು ಅಸುರ ರಾಕ್ಷಸ ಆಗಿರಲಿಲ್ಲ. ಅವರು ಜೋಕರ್​ನಂತೆ ಕಂಡು ಬಂದರು’ ಎಂದು ಹೇಳಿದರು. ಅನೇಕರು ಇದನ್ನು ಒಪ್ಪಿದರು.

ಇದನ್ನೂ ಓದಿ
Image
‘ನಂದ ಗೋಕುಲ’ ಧಾರಾವಾಹಿಯಲ್ಲಿ ವಲ್ಲಭ-ಅಮೂಲ್ಯ ವಿವಾಹ; ದೊಡ್ಡ ಟ್ವಿಸ್ಟ್
Image
ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ
Image
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ

ಸುಧಿ ಅವರು ಯಾವ ರೀತಿ ಇದ್ದರು ಎಂಬುನ್ನು ತೋರಿಸಲು ವಿಡಿಯೋ ಕೂಡ ಪ್ಲೇ ಮಾಡಲಾಯಿತು. ಇದನ್ನು ನೋಡಿದ ಬಳಿಕ ಅನೇಕರಿಗೆ ಈ ವಿಚಾರ ಮತ್ತಷ್ಟು ಮನದಟ್ಟು ಆಯಿತು. ಸುಧಿ ಅವರನ್ನು ಅನೇಕರು ಜೋಕರ್ ಎಂದು ಒಪ್ಪಿಕೊಂಡರು. ಸುದೀಪ್ ಅವರಿಗೂ ಇದೇ ರೀತಿಯ ಅಭಿಪ್ರಾಯ ಬಂತು.

ಇದನ್ನೂ ಓದಿ: ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್ಟ್

ಸುಧಿ ಅವರು ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದವರು. ಅವರು ದೊಡ್ಮನೆಯಲ್ಲಿ ಖಡಕ್ ಆಗಿ ಇರುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ನಿರೀಕ್ಷೆ ಸುಳ್ಳಾಗಿದೆ. ಅವರು ಎಲ್ಲರ ಮನ ಒಲಿಸಿ ಬಿಗ್ ಬಾಸ್ ಮನೆಯಲ್ಲಿ ಸರ್ವೈವ್ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಈ ರೀತಿ ಆಡಿದರೆ ಗೆಲ್ಲಲು ಸಾಧ್ಯವಿಲ್ಲ ಎಂದು ಸುದೀಪ್ ಈಗಾಗಲೇ ಅನೇಕ ಬಾರಿ ಎಚ್ಚರಿಕೆ ನೀಡಿದ್ದಾರೆ. ಆದರೆ, ಯಾರೊಬ್ಬರೂ ಎಚ್ಚೆತ್ತುಕೊಳ್ಳಲಿಲ್ಲ, ಪಾಠವನ್ನೂ ಕಲಿಯಲಿಲ್ಲ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ