AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮನ್ ಮ್ಯಾನ್ ಆಟಕ್ಕೆ ಬೇಸತ್ತ ಜನಸಾಮಾನ್ಯರು; ಕಿಚ್ಚನ ಎಂಟ್ರಿಗೆ ಕಾದ ವೀಕ್ಷಕರು

ಬಿಗ್ ಬಾಸ್ ಮನೆಯಲ್ಲಿ ಕಾಮನ್ ಮ್ಯಾನ್ ಸ್ಪರ್ಧಿಗಳ ಆಟ ದಿಕ್ಕು ತಪ್ಪಿದ್ದು, ಬೇರೆಯವರ ಆಹಾರ ಕದ್ದು ತಿನ್ನುವ ಮೂಲಕ ಸಹ-ಸ್ಪರ್ಧಿಗಳು ಹಾಗೂ ವೀಕ್ಷಕರ ಆಕ್ರೋಶಕ್ಕೆ ಈಡಾಗಿದ್ದಾರೆ. ಧನುಷ್, ಲಿಖಿತ್, ಮಂಜು ಹಾಗೂ ಕಿರಣ್ ವರ್ತನೆಗೆ ಬೇಸತ್ತ ವೀಕ್ಷಕರು ವಾರಾಂತ್ಯದ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಇವರಿಗೆ ಸರಿಯಾಗಿ ಕ್ಲಾಸ್ ತಗೋಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಕಾಮನ್ ಮ್ಯಾನ್ ಆಟಕ್ಕೆ ಬೇಸತ್ತ ಜನಸಾಮಾನ್ಯರು; ಕಿಚ್ಚನ ಎಂಟ್ರಿಗೆ ಕಾದ ವೀಕ್ಷಕರು
ಬಿಗ್ ಬಾಸ್ Image Credit source: Colors Kannada
ರಾಜೇಶ್ ದುಗ್ಗುಮನೆ
|

Updated on:Sep 18, 2026 | 7:13 AM

Share

ಮುಖ್ಯಾಂಶಗಳು

  • ಬೇರೆಯವರ ಆಹಾರ ಕದ್ದು ತಿಂದು ಉದ್ಧಟತನ
  • ಕಾಮನ್ ಮ್ಯಾನ್ ಸ್ಪರ್ಧಿಗಳ ಅತಿರೇಕದ ವರ್ತನೆ
  • ವೀಕೆಂಡ್ ಸಂಚಿಕೆಯಲ್ಲಿ ಸುದೀಪ್ ಕ್ಲಾಸ್?

ಬಿಗ್ ಬಾಸ್ ಮನೆಯಲ್ಲಿ ಈ ಬಾರಿ ನಾಲ್ವರು ಕಾಮನ್​ ಮ್ಯಾನ್​ಗಳ ಎಂಟ್ರಿ ಆಗಿದೆ. ಸೆಲೆಬ್ರಿಟಿಗಳು ವೈಯಕ್ತಿಕ ಆಟಕ್ಕೆ ಒತ್ತು ನೀಡಿದರೆ, ಕಾಮನ್ ಮ್ಯಾನ್​​ಗಳು ತಮ್ಮದೇ ಒಂದು ಗುಂಪು ಕಟ್ಟಿಕೊಂಡು ಆಟ ಆಡುತ್ತಿದ್ದಾರೆ. ಈಗ ಅವರ ಆಟ ದಿಕ್ಕು ತಪ್ಪಿದೆ. ಮಾತಿಗೆ ಕಡಿವಾಣ ಇಲ್ಲದಂತೆ ಆಗಿದೆ. ಬೇರೆಯವರ ಆಹಾರ ಕದ್ದು ತಿನ್ನುವ ಮೂಲಕ ಎಲ್ಲರಿಗೂ ತೊಂದರೆ ಕೊಡುತ್ತಾ ಇದ್ದಾರೆ. ಈ ವಿಷಯ ಚರ್ಚೆಗೆ ಗ್ರಾಸವಾಗಿದೆ. ಅವರು ನಡೆದುಕೊಳ್ಳುತ್ತಿರುವ ರೀತಿ ಸಹ ಸ್ಪರ್ಧಿಗಳಿಗೆ ಮಾತ್ರವಲ್ಲ ಬಿಗ್ ಬಾಸ್ ವೀಕ್ಷಕರಿಗೂ ಹೇಸಿಗೆ ಹುಟ್ಟುವಂತೆ ಆಗಿದೆ.

ಕಿರಣ್ ಶಾಸ್ತ್ರಿ, ಧನುಷ್, ಲಿಖಿತ್ ಹಾಗೂ ಮಾಡರ್ನ್ ಮಹಾಕವಿ ಮಂಜು ಅವರು ಕಾಮನ್ ಮ್ಯಾನ್ ಕೆಟಗರಿಯಲ್ಲಿ ಬಿಗ್ ಬಾಸ್ ಮನೆ ಸೇರಿದವರು. ಇವರ ಪೈಕಿ ಧನುಷ್ ಅವರಿಗೆ ಮಾತಿನ ಮೇಲೆ ನಿಗಾ ಇದೆ. ಅಷ್ಟೇ ಅಲ್ಲ, ಟಾಸ್ಕ್​​ಗಳನ್ನು ಉತ್ತಮವಾಗಿ ಹೇಗೆ ಆಡಬೇಕು ಎಂಬ ಸ್ಪಷ್ಟ ಅರಿವು ಇದೆ. ಆದರೆ, ಸಹವಾಸದಿಂದ ಸನ್ಯಾಸಿ ಹಾಳಾದ ಎಂಬ ಗಾದೆ ಮಾತಿನಂತೆ ಉಳಿದ ಮೂವರ ಜೊತೆ ಸೇರಿ ಇವರ ಆಟ ಹಾಳು ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಶೋನಿಂದ ಹೊರಗೆ ಬರಲು ನಿರ್ಧರಿಸಿದ ಅವಿನಾಶ್; ಮಂಜನ ವರ್ತನೆಯೇ ಕಾರಣ

ಮಾಡಿದ ತೊಂದರೆ ಏನು?

ಮಾಡರ್ನ್ ಮಹಾಕವಿ ಮಂಜು ಅವರು ಉದ್ದೇಶಪೂರ್ವಕವಾಗಿ ಎಲ್ಲರನ್ನೂ ಟ್ರಿಗರ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಯಾರಾದರೂ ಸ್ವಲ್ಪ ಕೆರಳುತ್ತಾರೆ ಎನಿಸಿದರೆ ಅವರನ್ನು ಮತ್ತಷ್ಟು ಟ್ರಿಗರ್ ಮಾಡುತ್ತಾರೆ. ಈಗ ಆಗಿದ್ದೂ ಅದೇ. ಹಿಂದಿನ ದಿನ ಬೇರೆಯವರಿಗೋಸ್ಕರ ಇಟ್ಟ ಮೊಟ್ಟೆ ಹಾಲನ್ನು ಲಿಖಿತ್, ಮಂಜು ಕದ್ದಿದ್ದೂ ಅಲ್ಲದೆ, ತಮ್ಮ ತಪ್ಪೇ ಇಲ್ಲ ಎಂಬ ರೀತಿಯಲ್ಲಿ ಅವರುಗಳು ನಡೆದುಕೊಂಡಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ತಮ್ಮ ತಪ್ಪೇ ಇಲ್ಲ ಎಂಬ ರೀತಿಯಲ್ಲಿ ಅವರು ನಡೆದುಕೊಂಡಿದ್ದಾರೆ. ಅಲ್ಲದೆ, ಅವಿನಾಶ್ ಹಾಗೂ ಇತರ ಸ್ಪರ್ಧಿಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಕಾಮನ್ ಮ್ಯಾನ್​ಗಳು ನಡೆದುಕೊಳ್ಳುತ್ತಿರುವ ರೀತಿಗೆ ವೀಕ್ಷಕರು ಬೇಸರ ಹೊರಹಾಕಿದ್ದಾರೆ. ‘ಈವರೆಗೆ ಬಿಗ್ ಬಾಸ್ ಮನೆ ಸೇರಿದ ಅತ್ಯಂತ ಕೆಟ್ಟ ಸ್ಪರ್ಧಿಗಳು ಇವರು’ ಎಂದು ಅಸಮಾಧಾನ ಹೊರಹಾಕುತ್ತಾ ಇದ್ದಾರೆ. ವೀಕೆಂಡ್​​ನ ಎರಡೂ ಎಪಿಸೋಡ್​​ಗಳು ಸುದೀಪ್ ಕ್ಲಾಸ್ ತೆಗೆದುಕೊಳ್ಳಬೇಕು ಎಂದು ಕೋರಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:53 am, Fri, 18 September 26

Follow Us
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ