AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಉರುಡುಗ-ಅರವಿಂದ್ ಪಾಲಿಗೆ ವಿಶೇಷ ದಿನ; ಕಾರಣ ವಿವರಿಸಿದ ನಟಿ

ಅರವಿಂದ್ ಕೆ.ಪಿ. ಜತೆ ನಿಂತಿರುವ ಫೋಟೋವನ್ನು ದಿವ್ಯಾ ಪೋಸ್ಟ್​ ಮಾಡಿದ್ದಾರೆ. ಈ ಫೋಟೋಗೆ ಅವರು ಅರವಿಂದ ತಮ್ಮ ಜೀವನದಲ್ಲಿ ಎಷ್ಟು ಮುಖ್ಯ ಎಂಬ ಬಗ್ಗೆ ಹೇಳಿಕೊಂಡಿದ್ದಾರೆ.

ದಿವ್ಯಾ ಉರುಡುಗ-ಅರವಿಂದ್ ಪಾಲಿಗೆ ವಿಶೇಷ ದಿನ; ಕಾರಣ ವಿವರಿಸಿದ ನಟಿ
ದಿವ್ಯಾ-ಅರವಿಂದ್ ಕೆಪಿ
TV9 Web
| Edited By: |

Updated on:Jul 13, 2022 | 6:32 PM

Share

ನಟಿ ದಿವ್ಯಾ ಉರುಡುಗ (Divya Uruduga) ಹಾಗೂ ಅರವಿಂದ್ ಕೆ.ಪಿ. (Aravind Kp) ನಡುವೆ ಒಳ್ಳೆಯ ಬಾಂಡಿಂಗ್ ಇದೆ. ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಆರಂಭವಾದ ಇವರ ಪಯಣ ಈಗ ವಿಶೇಷ ಹಂತದಲ್ಲಿದೆ. ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದಾರೆ. ಈ ವಿಚಾರವನ್ನು ದಿವ್ಯಾ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಇಂದು (ಜುಲೈ 13) ದಿವ್ಯಾ ಹಾಗೂ ಅರವಿಂದ್ ಪಾಲಿಗೆ ವಿಶೇಷ ದಿನ. ಈ ಬಗ್ಗೆ ದಿವ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

2021ರ ಆರಂಭದಲ್ಲಿ ‘ಕನ್ನಡ ಬಿಗ್​ ಬಾಸ್ ಸೀಸನ್ 8’ ಆರಂಭವಾಯಿತು. ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದರಿಂದ ಅವರ ಪರಿಚಯ ಅನೇಕರಿಗೆ ಇತ್ತು. ಕ್ರೀಡೆಯಲ್ಲಿ ಗುರುತಿಸಿಕೊಂಡಿರುವ ಅರವಿಂದ್ ಪರಿಚಯ ಅನೇಕರಿಗೆ ಇರಲಿಲ್ಲ. ಟಾಸ್ಕ್​ ಒಂದರಲ್ಲಿ ಇಬ್ಬರೂ ಒಂದಾದರು. ಅಲ್ಲಿಂದ ಇವರ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಈ ಫ್ರೆಂಡ್​ಶಿಪ್ ಪ್ರೀತಿಗೆ ತಿರುಗಿತು. ಇವರಿಬ್ಬರ ಭೇಟಿಗೆ ಈಗ 500 ದಿನ ತುಂಬಿದೆ. ಈ ವಿಶೇಷ ದಿನಕ್ಕೆ ದಿವ್ಯಾ ಅವರು ಫೋಟೋ ಒಂದನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಇದನ್ನೂ ಓದಿ
Image
ಒಂದೇ ಸಿನಿಮಾದಲ್ಲಿ ದಿವ್ಯಾ ಉರುಡುಗ-ಅರವಿಂದ್ ಕೆಪಿ; ನಗುವಿನ ಮೂಲಕವೇ ರಿವೀಲ್ ಮಾಡಿದ್ರು ನಟಿ
Image
 ‘ರಾ ರಾ ರಕ್ಕಮ್ಮಾ..’ ಹಾಡಿಗೆ ಮಸ್ತ್​ ಆಗಿ ಹೆಜ್ಜೆ ಹಾಕಿದ ಅರವಿಂದ್ ಕೆಪಿ-ದಿವ್ಯಾ ಉರುಡುಗ
Image
ಯೋಗರಾಜ್​ ಭಟ್​ ಸಿನಿಮಾದಲ್ಲಿ ನಟಿಸೋ ಆಫರ್​ ಗಿಟ್ಟಿಸಿಕೊಂಡ ‘ಬಿಗ್​ ಬಾಸ್’​ ದಿವ್ಯಾ ಉರುಡುಗ
Image
‘ಮದುವೆ ಯಾವಾಗ’ ಎನ್ನುವ ಪ್ರಶ್ನೆಗೆ ದಿವ್ಯಾ ಉರುಡುಗ ಪಕ್ಕದಲ್ಲೇ ನಿಂತು ಉತ್ತರಿಸಿದ ಅರವಿಂದ್​ ಕೆಪಿ

ಅರವಿಂದ್ ಕೆ.ಪಿ. ಜತೆ ನಿಂತಿರುವ ಫೋಟೋವನ್ನು ದಿವ್ಯಾ ಪೋಸ್ಟ್​ ಮಾಡಿದ್ದಾರೆ. ಈ ಫೋಟೋಗೆ ಅವರು ಅರವಿಂದ ತಮ್ಮ ಜೀವನದಲ್ಲಿ ಎಷ್ಟು ಮುಖ್ಯ ಎಂಬ ಬಗ್ಗೆ ಹೇಳಿಕೊಂಡಿದ್ದಾರೆ. ಜತೆಗೆ ಅರವಿಂದ್ ಅವರನ್ನು ಭೇಟಿ ಮಾಡಿ 500 ದಿನ ಕಳೆಯಿತು ಎಂದು ಅವರು ಖುಷಿಯಿಂದ ಹೇಳಿಕೊಂಡಿದ್ದಾರೆ. ಈ ಫೋಟೋ ನೋಡಿ ದಿವ್ಯಾ ಹಾಗೂ ಅರವಿಂದ್ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

View this post on Instagram

A post shared by DU✨ (@divya_uruduga)

ಇದನ್ನೂ ಓದಿ: ಒಂದೇ ಸಿನಿಮಾದಲ್ಲಿ ದಿವ್ಯಾ ಉರುಡುಗ-ಅರವಿಂದ್ ಕೆಪಿ; ನಗುವಿನ ಮೂಲಕವೇ ರಿವೀಲ್ ಮಾಡಿದ್ರು ನಟಿ

ಸದ್ಯ, ‘ಕನ್ನಡ ಬಿಗ್ ಬಾಸ್ 9’ ಬಗ್ಗೆ ಚರ್ಚೆ ಶುರುವಾಗಿದೆ. ‘ವಿಕ್ರಾಂತ್ ರೋಣ’ ಚಿತ್ರದ ಪ್ರಚಾರದ ಮಧ್ಯೆ ಸುದೀಪ್ ಅವರು ‘ಕನ್ನಡ ಬಿಗ್ ಬಾಸ್​ 9’ರ ಪ್ರೋಮೋಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಕಲರ್ಸ್ ಕನ್ನಡ ಬಿಸ್ನೆಸ್​ ಹೆಡ್ ಪರಮೇಶ್ವರ್​ ಗುಂಡ್ಕಲ್ ಅವರು ಈ ಬಗ್ಗೆ ಪೋಸ್ಟ್ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಹೊಸ ಸೀಸನ್ ಯಾವಾಗ ಆರಂಭ ಆಗಲಿದೆ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

Published On - 5:42 pm, Wed, 13 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್