AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಎಪಿಸೋಡ್ ನಡೆಸಿಕೊಡದಿದ್ದರೆ ಸುದೀಪ್ ಕೊನೆಯದಾಗಿ ತಾಯಿ ಜೊತೆ ಮಾತನಾಡುತ್ತಿದ್ದರು’; ಕಣ್ಣೀರಲ್ಲಿ ಮನೆ ಮಂದಿ

ಸುದೀಪ್ ತಾಯಿಯ ನಿಧನದ ನಂತರ ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಯೋಗರಾಜ್ ಭಟ್ ಅವರು ಮಾಡಿದ ಭಾವನಾತ್ಮಕ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಘಟನೆಯು ಬಿಗ್ ಬಾಸ್ ಮನೆಯಲ್ಲಿ ಭಾವನಾತ್ಮಕ ಅಸ್ಥಿರತೆಗೆ ಕಾರಣವಾಗಿದೆ.

‘ಆ ಎಪಿಸೋಡ್ ನಡೆಸಿಕೊಡದಿದ್ದರೆ ಸುದೀಪ್ ಕೊನೆಯದಾಗಿ ತಾಯಿ ಜೊತೆ ಮಾತನಾಡುತ್ತಿದ್ದರು’; ಕಣ್ಣೀರಲ್ಲಿ ಮನೆ ಮಂದಿ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 28, 2024 | 7:24 AM

Share

ಅಕ್ಟೋಬರ್ 19ರಂದು ಸುದೀಪ್ ಅವರು ಬಿಗ್ ಬಾಸ್ ನಿರೂಪಣೆ ಮಾಡಿ ನಡೆದಿದ್ದರು. ಭಾನುವಾರದ ಎಪಿಸೋಡ್ ಶೂಟ್ ಆಗಿರಲಿಲ್ಲ. ಇದಕ್ಕೆ ಕಾರಣ ಆಗಿದ್ದು ಅವರ ತಾಯಿಯ ನಿಧನ. ಸುದೀಪ್ ಭಾವನಾತ್ಮಕ ಜೀವಿ. ಹೀಗಾಗಿ, ತಾಯಿಯನ್ನು ಕಳೆದುಕೊಂಡಿದ್ದು ಅವರಿಗೆ ಸಾಕಷ್ಟು ನೋವು ಕೊಟ್ಟಿದೆ. ಈ ಕಾರಣದಿಂದಲೇ ಅವರು ಕಳೆದ ವಾರ ಬಿಗ್ ಬಾಸ್ ನಿರೂಪಣೆ ಮಾಡಿಲ್ಲ. ಈಗ ಯೋಗರಾಜ್ ಭಟ್ ಅವರು ಹೇಳಿದ ಆ ಒಂದು ಮಾತು ಮನೆ ಮಂದಿಗೆ ಸಾಕಷ್ಟು ನೋವು ತರಿಸಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಶನಿವಾರದ (ಅಕ್ಟೋಬರ್ 26) ಎಪಿಸೋಡ್​ಗೆ ಸುದೀಪ್ ಬದಲು ಯೋಗರಾಜ್ ಭಟ್ ಅವರು ಅತಿಥಿಯಾಗಿ ಬಂದಿದ್ದರು. ಈ ವೇಳೆ ಸುದೀಪ್ ತಾಯಿಯ ನಿಧನ ವಾರ್ತೆ ಬಗ್ಗೆ ಹೇಳಿದರು. ಅಷ್ಟೇ ಅಲ್ಲ, ‘ಅಂದು ನಿಮ್ಮ ಗಲಾಟೆಗಳನ್ನೆಲ್ಲ ಅಟೆಂಡ್​​ ಮಾಡದೇ ಇದ್ದಿದ್ದರೆ ಕೊನೆಯ ಒಂದು ಅಥವಾ ಎರಡು ಗಂಟೆ ಅವರು ತಾಯಿಯ ಜೊತೆ ಇರಬಹುದಿತ್ತು’ ಎಂದು ಯೋಗರಾಜ್ ಭಟ್​ ಹೇಳಿದರು.

ಈ ವಿಚಾರ ಮನೆಯವರನ್ನು ಅತಿಯಾಗಿ ಕಾಡಿದೆ. ನಮ್ಮಿಂದಾಗಿ ಸುದೀಪ್​ಗೆ ತಾಯಿ ಜೊತೆ ಮಾತನಾಡೋಕೆ ಸಾಧ್ಯವಾಗಿಲ್ಲವಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಎಲ್ಲರೂ ಕ್ಯಾಮೆರಾ ಎದುರು ಹೋಗಿ ಕಣ್ಣೀರು ಹಾಕಿದ್ದಾರೆ. ಕೆಲವರಿಗೆ ತಮ್ಮ ಮನೆಯವರಿಗೆ ಏನಾಯಿತೋ ಏನೋ ಎನ್ನುವ ಆತಂಕ ಹೆಚ್ಚಾಗಿದೆ.

ಕಿಚ್ಚ ಸುದೀಪ್ ಅವರು ಶನಿವಾರದ ಎಪಿಸೋಡ್ ನಡೆಸಿಕೊಡುವಾಗಲೇ ತಾಯಿಗೆ ಗಂಭೀರವಾಗಿದೆ ಎನ್ನುವ ವಿಚಾರ ಗೊತ್ತಾಗಿತ್ತು. ಈ ವಿಚಾರ ಗೊತ್ತಿದ್ದೂ ಸುದೀಪ್ ಅವರು ಬಿಗ್ ಬಾಸ್ ನಿರೂಪಣೆ ಮಾಡಿದ್ದರು. ಆ ವಾರ ಜಗದೀಶ್ ಹಾಗೂ ರಂಜಿತ್ ಅರ್ಧಕ್ಕೆ ಹೊರ ನಡೆದಿದ್ದರು. ಜಗದೀಶ್ ಅವಾಚ್ಯ ಶಬ್ದ ಬಳಕೆ ಮಾಡಿ ಎಲಿಮಿನೇಟ್ ಆದರೆ, ರಂಜಿತ್ ಅವರು ಜಗದೀಶ್​ನ ತಳ್ಳಿ ಮನೆಯಿಂದ ಹೊರ ನಡೆದಿದ್ದರು.

Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್