AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಎಪಿಸೋಡ್ ನಡೆಸಿಕೊಡದಿದ್ದರೆ ಸುದೀಪ್ ಕೊನೆಯದಾಗಿ ತಾಯಿ ಜೊತೆ ಮಾತನಾಡುತ್ತಿದ್ದರು’; ಕಣ್ಣೀರಲ್ಲಿ ಮನೆ ಮಂದಿ

ಸುದೀಪ್ ತಾಯಿಯ ನಿಧನದ ನಂತರ ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಯೋಗರಾಜ್ ಭಟ್ ಅವರು ಮಾಡಿದ ಭಾವನಾತ್ಮಕ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಘಟನೆಯು ಬಿಗ್ ಬಾಸ್ ಮನೆಯಲ್ಲಿ ಭಾವನಾತ್ಮಕ ಅಸ್ಥಿರತೆಗೆ ಕಾರಣವಾಗಿದೆ.

‘ಆ ಎಪಿಸೋಡ್ ನಡೆಸಿಕೊಡದಿದ್ದರೆ ಸುದೀಪ್ ಕೊನೆಯದಾಗಿ ತಾಯಿ ಜೊತೆ ಮಾತನಾಡುತ್ತಿದ್ದರು’; ಕಣ್ಣೀರಲ್ಲಿ ಮನೆ ಮಂದಿ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 28, 2024 | 7:24 AM

Share

ಅಕ್ಟೋಬರ್ 19ರಂದು ಸುದೀಪ್ ಅವರು ಬಿಗ್ ಬಾಸ್ ನಿರೂಪಣೆ ಮಾಡಿ ನಡೆದಿದ್ದರು. ಭಾನುವಾರದ ಎಪಿಸೋಡ್ ಶೂಟ್ ಆಗಿರಲಿಲ್ಲ. ಇದಕ್ಕೆ ಕಾರಣ ಆಗಿದ್ದು ಅವರ ತಾಯಿಯ ನಿಧನ. ಸುದೀಪ್ ಭಾವನಾತ್ಮಕ ಜೀವಿ. ಹೀಗಾಗಿ, ತಾಯಿಯನ್ನು ಕಳೆದುಕೊಂಡಿದ್ದು ಅವರಿಗೆ ಸಾಕಷ್ಟು ನೋವು ಕೊಟ್ಟಿದೆ. ಈ ಕಾರಣದಿಂದಲೇ ಅವರು ಕಳೆದ ವಾರ ಬಿಗ್ ಬಾಸ್ ನಿರೂಪಣೆ ಮಾಡಿಲ್ಲ. ಈಗ ಯೋಗರಾಜ್ ಭಟ್ ಅವರು ಹೇಳಿದ ಆ ಒಂದು ಮಾತು ಮನೆ ಮಂದಿಗೆ ಸಾಕಷ್ಟು ನೋವು ತರಿಸಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಶನಿವಾರದ (ಅಕ್ಟೋಬರ್ 26) ಎಪಿಸೋಡ್​ಗೆ ಸುದೀಪ್ ಬದಲು ಯೋಗರಾಜ್ ಭಟ್ ಅವರು ಅತಿಥಿಯಾಗಿ ಬಂದಿದ್ದರು. ಈ ವೇಳೆ ಸುದೀಪ್ ತಾಯಿಯ ನಿಧನ ವಾರ್ತೆ ಬಗ್ಗೆ ಹೇಳಿದರು. ಅಷ್ಟೇ ಅಲ್ಲ, ‘ಅಂದು ನಿಮ್ಮ ಗಲಾಟೆಗಳನ್ನೆಲ್ಲ ಅಟೆಂಡ್​​ ಮಾಡದೇ ಇದ್ದಿದ್ದರೆ ಕೊನೆಯ ಒಂದು ಅಥವಾ ಎರಡು ಗಂಟೆ ಅವರು ತಾಯಿಯ ಜೊತೆ ಇರಬಹುದಿತ್ತು’ ಎಂದು ಯೋಗರಾಜ್ ಭಟ್​ ಹೇಳಿದರು.

ಈ ವಿಚಾರ ಮನೆಯವರನ್ನು ಅತಿಯಾಗಿ ಕಾಡಿದೆ. ನಮ್ಮಿಂದಾಗಿ ಸುದೀಪ್​ಗೆ ತಾಯಿ ಜೊತೆ ಮಾತನಾಡೋಕೆ ಸಾಧ್ಯವಾಗಿಲ್ಲವಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಎಲ್ಲರೂ ಕ್ಯಾಮೆರಾ ಎದುರು ಹೋಗಿ ಕಣ್ಣೀರು ಹಾಕಿದ್ದಾರೆ. ಕೆಲವರಿಗೆ ತಮ್ಮ ಮನೆಯವರಿಗೆ ಏನಾಯಿತೋ ಏನೋ ಎನ್ನುವ ಆತಂಕ ಹೆಚ್ಚಾಗಿದೆ.

ಕಿಚ್ಚ ಸುದೀಪ್ ಅವರು ಶನಿವಾರದ ಎಪಿಸೋಡ್ ನಡೆಸಿಕೊಡುವಾಗಲೇ ತಾಯಿಗೆ ಗಂಭೀರವಾಗಿದೆ ಎನ್ನುವ ವಿಚಾರ ಗೊತ್ತಾಗಿತ್ತು. ಈ ವಿಚಾರ ಗೊತ್ತಿದ್ದೂ ಸುದೀಪ್ ಅವರು ಬಿಗ್ ಬಾಸ್ ನಿರೂಪಣೆ ಮಾಡಿದ್ದರು. ಆ ವಾರ ಜಗದೀಶ್ ಹಾಗೂ ರಂಜಿತ್ ಅರ್ಧಕ್ಕೆ ಹೊರ ನಡೆದಿದ್ದರು. ಜಗದೀಶ್ ಅವಾಚ್ಯ ಶಬ್ದ ಬಳಕೆ ಮಾಡಿ ಎಲಿಮಿನೇಟ್ ಆದರೆ, ರಂಜಿತ್ ಅವರು ಜಗದೀಶ್​ನ ತಳ್ಳಿ ಮನೆಯಿಂದ ಹೊರ ನಡೆದಿದ್ದರು.

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?