AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬಲ್ ಎಲಿಮಿನೇಷನ್: ಎಲ್ಲರಿಗೂ ಸರ್ಪ್ರೈಸ್ ಕೊಟ್ಟ ಬಿಗ್​​ಬಾಸ್​​

Bigg Boss Kannada 12: ಬಿಗ್​ಬಾಸ್ ಮನೆಯಲ್ಲಿ ಭಾನುವಾರ ಬಂತೆಂದರೆ ಒಬ್ಬರು ಮನೆಯಿಂದ ಹೊರಗೆ ಬರುವುದು ಖಾತ್ರಿ. ಈ ವಾರವೂ ಸಹ ಅಶ್ವಿನಿ, ಗಿಲ್ಲಿ, ರಜತ್, ಧ್ರುವಂತ್, ರಕ್ಷಿತಾ, ಸ್ಪಂದನಾ ಇನ್ನೂ ಕೆಲವರು ನಾಮಿನೇಟ್ ಆಗಿದ್ದರು. ಹಲವರು ಸೇಫ್ ಆಗಿ ಕೊನೆಗೆ ರಜತ್, ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಅವರುಗಳು ಅಂತಿಮವಾಗಿ ಉಳಿದಿದ್ದರು. ಧ್ರುವಂತ್ ಹಾಗೂ ರಕ್ಷಿತಾರನ್ನು ಸುದೀಪ್ ಹೊರಗೆ ಕರೆದರು. ಆದರೆ ಅವರಿಬ್ಬರೂ ಎವಿಕ್ಟ್ ಆಗಿಲ್ಲ.

ಡಬಲ್ ಎಲಿಮಿನೇಷನ್: ಎಲ್ಲರಿಗೂ ಸರ್ಪ್ರೈಸ್ ಕೊಟ್ಟ ಬಿಗ್​​ಬಾಸ್​​
Bigg Boss Kannada 12
ಮಂಜುನಾಥ ಸಿ.
|

Updated on: Dec 14, 2025 | 10:45 PM

Share

ಬಿಗ್​ಬಾಸ್ (Bigg Boss) ಮನೆಯಲ್ಲಿ ಭಾನುವಾರ ಬಂತೆಂದರೆ ಒಬ್ಬರು ಮನೆಯಿಂದ ಹೊರಗೆ ಬರುವುದು ಖಾತ್ರಿ. ಈ ವಾರವೂ ಸಹ ಅಶ್ವಿನಿ, ಗಿಲ್ಲಿ, ರಜತ್, ಧ್ರುವಂತ್, ರಕ್ಷಿತಾ, ಸ್ಪಂದನಾ ಇನ್ನೂ ಕೆಲವರು ನಾಮಿನೇಟ್ ಆಗಿದ್ದರು. ಹಲವರು ಸೇಫ್ ಆಗಿ ಕೊನೆಗೆ ರಜತ್, ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಅವರುಗಳು ಅಂತಿಮವಾಗಿ ಉಳಿದಿದ್ದರು. ಆಗ ಸುದೀಪ್ ಅವರು ಶಾಕ್ ನೀಡಿದರು. ಈ ಬಾರಿ ಮನೆಯಿಂದ ಒಬ್ಬರಲ್ಲ, ಇಬ್ಬರು ಹೊರಗೆ ಹೋಗುತ್ತಾರೆ ಎಂದರು. ರಜತ್ ಅವರನ್ನು ಮನೆಯಲ್ಲೇ ಉಳಿಸಿ, ಧ್ರುವಂತ್ ಮತ್ತು ರಕ್ಷಿತಾರನ್ನು ಎವಿಕ್ಟ್ ಎಂದು ಘೋಷಿಸಲಾಯ್ತು.

ಬಿಗ್​​ಬಾಸ್ ಅವರ ಈ ನಿರ್ಣಯ ಮನೆ ಮಂದಿಗೆ ದೊಡ್ಡ ಶಾಕ್ ನೀಡಿತು. ಧ್ರುವಂತ್ ಅವರು ಕಳೆದ ಎರಡು ವಾರಗಳಿಂದಲೂ ಮನೆಯಿಂದ ಹೊರ ಹೋಗುವ ಪ್ರಯತ್ನದಲ್ಲೇ ಇದ್ದರು. ಹಾಗಾಗಿ ಯಾರೂ ಸಹ ಅವರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಲಿಲ್ಲ, ಆದರೆ ರಕ್ಷಿತಾ ಶೆಟ್ಟಿ ಎವಿಕ್ಟ್ ಆಗಿದ್ದು ಎಲ್ಲರಿಗೂ ಶಾಕ್ ಆಯ್ತು. ಮಾಳು, ರಘು ಇನ್ನೂ ಕೆಲವರಂತೂ ಕಣ್ಣೀರು ಹಾಕಿಬಿಟ್ಟರು. ಅಶ್ವಿನಿ ಸಹ ಕಣ್ಣೀರು ಹಾಕುತ್ತಾ, ಪದೇ ಪದೇ ರಕ್ಷಿತಾಗೆ ಕ್ಷಮೆ ಕೇಳಿದರು.

ರಕ್ಷಿತಾಗೆ ಸಹ ಬಿಗ್​​ಬಾಸ್ ನಿರ್ಣಯ ಶಾಕ್ ತಂದಿತು. ರಕ್ಷಿತಾಗೆ ಅಳು ತಡೆಯಲೇ ಆಗಲಿಲ್ಲ. ಆದರೂ ಗಟ್ಟಿ ಮನಸ್ಸು ಮಾಡಿ ಮನೆಯಿಂದ ಹೊರಗೆ ಬಂದರು. ರಕ್ಷಿತಾ ಹೊರಗೆ ಬಂದ ಬಳಿಕವೂ ಸಹ ಮನೆ ಸದಸ್ಯರು ರಕ್ಷಿತಾ ಬಗ್ಗೆಯೇ ಮಾತನಾಡುತ್ತಿದ್ದರು. ‘ನಾನು ಯಾರಿಗೂ ಕಣ್ಣೀರು ಹಾಕಿದವನಲ್ಲ, ಆದರೆ ರಕ್ಷಿತಾ ಹೋಗಿದ್ದು ಬೇಸರವಾಯ್ತು, ಆಕೆಯನ್ನು ಬಹಳ ಮಿಸ್ ಮಾಡಿಕೊಳ್ಳಲಿದ್ದೇನೆ’ ಎಂದರು ಗಿಲ್ಲಿ. ರಜತ್ ಸಹ, ‘ನಾನು ಕಳೆದ ಸೀಸನ್​​ನಲ್ಲಿಯೂ ಸಹ ಯಾರನ್ನೂ ಹಚ್ಚಿಕೊಂಡಿರಲಿಲ್ಲ ಆದರೆ ರಕ್ಷಿತಾ ಅನ್ನು ಬಹಳ ಹಚ್ಚಿಕೊಂಡಿದ್ದೆ’ ಎಂದು ಬೇಸರ ಮಾಡಿಕೊಂಡರು. ರಘು ಅಂತೂ ರಕ್ಷಿತಾ ಹೋಗುವಾಗ, ನೆನಪಿಗೆಂದು ಅವರ ಆಭರಣವನ್ನೇ ತೆಗೆದುಕೊಟ್ಟರು.

ಇದನ್ನೂ ಓದಿ:ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ಅಸಲಿ ಸುದ್ದಿ ಏನೆಂದರೆ ಈ ವಾರ ಓಟಿಂಗ್ ಲೈನ್ಸ್ ಓಪನ್ ಆಗಿರಲೇ ಇಲ್ಲ. ಅಂದರೆ ಈ ವಾರ ಯಾರೂ ಎವಿಕ್ಟ್ ಆಗುವಂತೆಯೇ ಇಲ್ಲ. ಆದರೆ ಬಿಗ್​​ಬಾಸ್ ಬೇಕೆಂತಲೆ ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿಯನ್ನು ಹೊರಗೆ ಕರೆಸಿಕೊಂಡಿದ್ದಾರೆ. ಆದರೆ ಅವರನ್ನು ಎಲ್ಲಿ ಇರಿಸಲಿದ್ದಾರೆ. ಮತ್ತೆ ಯಾವಾಗ ಅವರಿಬ್ಬರು ಮನೆಯ ಒಳಗೆ ಹೋಗಲಿದ್ದಾರೆ ಎಂಬುದು ಪ್ರಶ್ನೆ. ಸುದೀಪ್ ಸಹ, ಈ ಬಗ್ಗೆ ಹೇಳಿದ್ದು, ಆ ಇಬ್ಬರೂ ಸಹ ಎಲ್ಲಿರಲಿದ್ದಾರೆ, ಅವರು ಏನೇನೋ ನೋಡಲಿದ್ದಾರೆ? ಎಂಬ ಕುತೂಹಲ ಇದೆ. ಒಳ್ಳೆಯ ಸಮಯದಲ್ಲಿ ಮತ್ತೆ ಅವರನ್ನು ಮನೆಯ ಒಳಗೆ ಕಳಿಸಲಿದ್ದೇವೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು