AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್ ಮಾಡಿದ್ದು ತಪ್ಪು ಅನ್ನೋದಾದ್ರೆ ಮನೆಯಲ್ಲಿರುವ ಆ ಸ್ಪರ್ಧಿಗಳು ಮಾಡಿದ್ದು ಸರಿಯಾ?

ಬಿಗ್​ಬಾಸ್ ಕನ್ನಡ ಸೀಸನ್ 11 ರಿಂದ ಲಾಯರ್ ಜಗದೀಶ್ ಮತ್ತು ರಂಜಿತ್ ಅನ್ನು ಹೊರಗೆ ಹಾಕಲಾಗಿದೆ. ಇಬ್ಬರೂ ತಪ್ಪು ಮಾಡಿದ್ದಾರೆಂಬ ಕಾರಣಕ್ಕೆ ಹೊರಗೆ ಹಾಕಲಾಗಿದೆ. ಆದರೆ ತಪ್ಪು ಮಾಡಿದ್ದು ಅವರಿಬ್ಬರೇನಾ? ಮಾನಸ, ಚೈತ್ರಾ, ಉಗ್ರಂ ಮಂಜು, ಹಂಸಾ ಅವರುಗಳು ಮಾಡಿದ್ದೇನು?

ಜಗದೀಶ್ ಮಾಡಿದ್ದು ತಪ್ಪು ಅನ್ನೋದಾದ್ರೆ ಮನೆಯಲ್ಲಿರುವ ಆ ಸ್ಪರ್ಧಿಗಳು ಮಾಡಿದ್ದು ಸರಿಯಾ?
ಮಂಜುನಾಥ ಸಿ.
|

Updated on: Oct 19, 2024 | 4:51 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಕೇವಲ ಮೂರೇ ವಾರದಲ್ಲಿ ರಣ ರೋಚಕ ರಣಾಂಗಣವಾಗಿದೆ. ಮನೆಯಲ್ಲಿ ಜಗಳ, ಮುನಿಸು, ರಾಜಕೀಯ, ಹೊಡೆದಾಟ ಎಲ್ಲವೂ ಆಗಿ ಹೋಗಿವೆ. ಮಹಿಳೆಯರ ಬಗ್ಗೆ ಅಗೌರವವಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಲಾಯರ್ ಜಗದೀಶ್ ಅವರನ್ನು ಮನೆಯಿಂದ ಹೊರಗೆ ಹಾಕಲಾಗಿದೆ. ಜಗದೀಶ್​ ಮೇಲೆ ಕೈ ಮಾಡಿದರು ಎಂಬ ಕಾರಣಕ್ಕೆ ರಂಜಿತ್ ಅನ್ನು ಹೊರಗೆ ಕಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಹಜವಾಗಿಯೇ ಚರ್ಚೆ ನಡೆಯುತ್ತಿದ್ದು, ಜಗದೀಶ್-ರಂಜಿತ್​ದು ತಪ್ಪು ಎನ್ನುವುದಾದರೆ ಮನೆಯಲ್ಲಿರುವ ಕೆಲವು ಸ್ಪರ್ಧಿಗಳು ಮಾಡಿರುವುದು, ಮಾಡುತ್ತಿರುವುದು ಸರಿಯಾ? ಎಂದು ಪ್ರಶ್ನೆ ಮಾಡಿದ್ದಾರೆ.

ಲಾಯರ್ ಜಗದೀಶ್​ ಮಹಿಳೆಯರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದಾರೆ ಸರಿ, ಆದರೆ ಅವರು ಸಿಟ್ಟಿಗೇಳಲು ಕಾರಣವಾಗಿದ್ದು ಯಾರು ಮತ್ತು ಏಕೆ? ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. ಮಾನಸ ತಮ್ಮ ಮೊನಚಾದ ಮಾತುಗಳಿಂದ ಜಗದೀಶ್ ಅನ್ನು ರೊಚ್ಚಿಗೇಳಿಸಿದರು. ಚಪ್ಪಲಿಗೆ ಜಗದೀಶ್ ಅನ್ನು ಹೋಲಿಸಿದರು, ಗಂಡಸ್ತನಕ್ಕೆ ಸವಾಲು ಎಂಬರ್ಥದಲ್ಲಿ ಮಾತನಾಡಿದರು. ಏಕವಚನ ಬಳಸಿದರು. ಕುಟುಂಬದ ಬಗ್ಗೆಯೂ ಮಾತುಗಳು ಬಂದವು ಎಂಬುದನ್ನು ಕೆಲ ನೆಟ್ಟಿಗರು ಎತ್ತಿ ತೋರಿಸಿದ್ದಾರೆ.

ಇನ್ನು ಚೈತ್ರಾ ಕುಂದಾಪುರ ಸಹ ಜಗದೀಶ್​ ಜೊತೆ ಸಾಕಷ್ಟು ಹೊತ್ತು ಜಗಳ ಮಾಡಿದರು. ಅಸಲಿಗೆ ಜಗದೀಶ್ ಹಾಗೂ ಚೈತ್ರಾ ನಡುವೆ ಕೆಲ ದಿನದ ಹಿಂದೆಯೂ ಜಗಳವಾಗಿತ್ತು. ಚೈತ್ರಾ ಮೇಲೆ ಸಾಕಷ್ಟು ಕೇಸಿದೆ ಎಂದು ಜಗದೀಶ್ ಹೇಳಿದಾಗ, ರೋಲ್​ ಕಾಲ್ ಮಾಡುವ ಲಾಯರ್ ಎಂದು ಚೈತ್ರಾ ಹೇಳಿದ್ದರು. ಜಗಳವಾಗಿ ಕೈ-ಕೈ ಮಿಲಾಯಿಸಿದ ದಿನವೂ ಸಹ ಚೈತ್ರಾ ಕುಂದಾಪುರ ‘ನೀನು ಒಬ್ಬ ಅಪ್ಪನಿಗೆ ಹುಟ್ಟಿದ್ದೇ ಆದಲ್ಲಿ?’ ಎನ್ನುತ್ತಾ ಜಗದೀಶ್​ ವಿರುದ್ಧ ಕೀಳು ಮಾತುಗಳನ್ನು ಬಳಸಿದ್ದರು. ಇದೇ ವಿಷಯ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದ್ದು, ಹೆಣ್ಣು ಕೀಳಾಗಿ ಮಾತನಾಡಿದರೆ ತಪ್ಪಿಲ್ಲ, ಗಂಡು ಮಾತನಾಡಿದರೆ ತಪ್ಪಾ? ಎಂಬ ಚರ್ಚೆ ನಡೆಯುತ್ತಿದೆ. ಅಲ್ಲದೆ, ಉಗ್ರಂ ಮಂಜು, ಚಪ್ಪಲಿ ಎಸೆದು ಸ್ಪರ್ಧಿಯ ಮೇಲೆ ಎಸೆಯಲು ಮುಂದಾಗಿದ್ದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ:ಬಿಗ್​ಬಾಸ್ ನಿಲ್ಲಿಸಿ, ಕೋರ್ಟ್ ಮೆಟ್ಟಿಲೇರಿದ ವೀಕ್ಷಕ, ನೊಟೀಸ್ ನೀಡಿದ ನ್ಯಾಯಾಲಯ

ತಪ್ಪು ಮಾಡಿದವರನ್ನು ಹೊರಗೆ ಹಾಕುವುದು ನಿಯಮವಾದರೆ, ಮಾನಸ, ಚೈತ್ರಾ ಕುಂದಾಪುರ, ಉಗ್ರಂ ಮಂಜು, ಹಂಸಾ ಅವರನ್ನೂ ಸಹ ಮನೆಯಿಂದ ಹೊರಗೆ ಹಾಕಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಇಂದು ವೀಕೆಂಡ್ ಪಮಚಾಯಿತಿ ನಡೆಯಲಿದೆ. ಜಗದೀಶ್, ರಂಜಿತ್ ಹೊರ ಹಾಕಲ್ಪಟ್ಟ ಬಳಿಕ ನಡೆಯುತ್ತಿರುವ ಮೊದಲ ಪಂಚಾಯಿತಿ ಇದಾಗಿದ್ದು ಕಿಚ್ಚ ಸುದೀಪ್, ಈ ವಿಷಯಗಳನ್ನು ಚರ್ಚೆಗೆ ಎತ್ತಿಕೊಳ್ಳುತ್ತಾರೆಯೇ? ಅಥವಾ ಜಗದೀಶ್-ರಂಜಿತ್ ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಿದೆ ಎಂದು ಸುಮ್ಮನಾಗುತ್ತಾರೆಯೇ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ