AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲ ಕೆರಳಿಸಿದ ನಾಮಿನೇಷನ್ಸ್, ಉಳಿದುಕೊಂಡಿದ್ದು ಇಬ್ಬರೇ

Bigg Boss Kannada: ಬಿಗ್​ಬಾಸ್ ಕನ್ನಡ ಮುಗಿಯಲು ಕೆಲವು ವಾರಗಳು ಮಾತ್ರವೇ ಬಾಕಿ ಇವೆ. ಸ್ಪರ್ಧಿಗಳ ನಡುವೆ ಪೈಪೋಟಿ ಹೆಚ್ಚಾಗಿದೆ. ಪರಸ್ಪರರನ್ನು ಮನೆಯಿಂದ ಹೊರಗೆ ಕಳಿಸುವ ಹುನ್ನಾರದಲ್ಲಿದ್ದಾರೆ. ಅದರಂತೆ ಈ ವಾರ ಮನೆಯಲ್ಲಿರುವ 10 ಸದಸ್ಯರಲ್ಲಿ ಬರೋಬ್ಬರಿ ಎಂಟು ಮಂದಿ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಯಾರು ಹೊರಗೆ ಹೋಗುತ್ತಾರೆಯೋ ಕಾದು ನೋಡಬೇಕಿದೆ.

ಕುತೂಹಲ ಕೆರಳಿಸಿದ ನಾಮಿನೇಷನ್ಸ್, ಉಳಿದುಕೊಂಡಿದ್ದು ಇಬ್ಬರೇ
Bigg Boss Kannada11
ಮಂಜುನಾಥ ಸಿ.
|

Updated on: Dec 27, 2024 | 7:42 AM

Share

ಫಿನಾಲೆ ವಾರ ಹತ್ತಿರವಾಗುತ್ತಾ ಬರುತ್ತಿದೆ. ಬಿಗ್​ಬಾಸ್ ಮನೆಯಲ್ಲಿ ಉಳಿದುಕೊಳ್ಳಬೇಕೆಂಬ ಕಸರತ್ತು ಸಹ ಸ್ಪರ್ಧಿಗಳಿಂದ ಹೆಚ್ಚಾಗುತ್ತಿದೆ. ಎಲ್ಲ ಸ್ಪರ್ಧಿಗಳು ತಮ್ಮ ಪ್ರತಿಸ್ಪರ್ಧಿಗಳನ್ನು ಮನೆಯಿಂದ ಹೊರಗೆ ಹಾಕಬೇಕೆಂಬ ತವಕದಲ್ಲಿದ್ದಾರೆ. ಈ ವಾರ ಬಿಗ್​ಬಾಸ್ ಮನೆಯಲ್ಲಿ ರೆಸಾರ್ಟ್ ಟಾಸ್ಕ್ ಮಾಡಿಸಲಾಗಿದ್ದು, ಎದುರಾಳಿಗಳನ್ನು ಕುಗ್ಗಿಸಲು, ಸಂಕಷ್ಟಕ್ಕೆ ದೂಡಲು ಎರಡೂ ತಂಡಗಳು ಶಕ್ತಿಮೀರಿ ದುಷ್ಟತನ ಪ್ರದರ್ಶಿಸಿವೆ. ನಿನ್ನೆಯ ಎಪಿಸೋಡ್​ನಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದ್ದು, ಈ ವಾರ ಇರುವ ಹತ್ತು ಜನರಲ್ಲಿ ಎಂಟು ಮಂದಿ ನಾಮಿನೇಟ್ ಆಗಿದ್ದಾರೆ.

ಯಾವ ಸ್ಪರ್ಧಿ ಯಾರನ್ನು ನಾಮಿನೇಟ್ ಮಾಡುತ್ತಾರೋ ಅವರ ತಲೆ ಮೇಲೆ ಬಾಟಲಿ ಒಡೆಯುವಂತೆ ಬಿಗ್​ಬಾಸ್ ಸೂಚಿಸಿದ್ದರು. ಈ ಬಾಟಲಿ ನಕಲಿ ಬಾಟಲಿ ಆಗಿತ್ತು. ಅಂತೆಯೇ ಪ್ರತಿಯೊಬ್ಬ ಸ್ಪರ್ಧಿಯು ತಾನು ನಾಮಿನೇಟ್ ಮಾಡಲು ಇಚ್ಛಿಸಿದ ಸ್ಪರ್ಧಿಯನ್ನು ಕರೆದು ಮುಂದೆ ಕೂರಿಸಿಕೊಂಡು ನಾಮಿನೇಟ್ ಮಾಡಲು ಕಾರಣ ನೀಡಿ ತಲೆ ಮೇಲೆ ಬಾಟಲಿ ಒಡೆದರು.

ಬಿಗ್​ಬಾಸ್ ಮನೆಯಲ್ಲಿ ಇರುವ ಹತ್ತು ಜನರಲ್ಲಿ ಈ ವಾರ ಬರೋಬ್ಬರಿ ಎಂಟು ಮಂದಿ ನಾಮಿನೇಟ್ ಆಗಿದ್ದಾರೆ. ಇಬ್ಬರು ಮಾತ್ರವೇ ನಾಮಿನೇಷನ್​ನಿಂದ ಉಳಿದುಕೊಂಡಿದ್ದಾರೆ. ಅದರಲ್ಲಿ ಒಬ್ಬರನ್ನು ನಾಮಿನೇಟ್ ಮಾಡುವಂತಿರಲಿಲ್ಲವಾದ್ದರಿಂದ ಅವರು ಉಳಿದುಕೊಂಡರೆ, ಯಾರಿಂದಲೂ ನಾಮಿನೇಟ್ ಆಗದೆ ಉಳಿದುಕೊಂಡವರು ಕೇವಲ ಒಬ್ಬರು ಮಾತ್ರವೇ.

ಇದನ್ನೂ ಓದಿ:ಎದುರಾಳಿಗಳ ಕಾಟಕ್ಕೆ ಬಿಗ್​ಬಾಸ್ ​ಮುಂದೆ ಕಣ್ಣೀರು ಹಾಕಿದ ಭವ್ಯಾ

ತ್ರಿವಿಕ್ರಮ್, ಉಗ್ರಂ ಮಂಜು, ಗೌತಮಿ, ಧನರಾಜ್, ಹನುಮಂತು ಅವರುಗಳು ನಾಮಿನೇಟ್ ಆಗಿದ್ದಾರೆ. ಪ್ರತಿ ವಾರ ನಾಮಿನೇಟ್ ಆಗುವ ಮೋಕ್ಷಿತಾ ಮತ್ತು ಚೈತ್ರಾ ಕುಂದಾಪುರ ಈ ವಾರವೂ ನಾಮಿನೇಟ್ ಆಗಿದ್ದಾರೆ. ಇನ್ನು ಐಶ್ವರ್ಯಾ ಅವರು ಹಾಗೋ ಹೀಗೋ ನಾಮಿನೇಷನ್​ನಿಂದ ಉಳಿದುಕೊಂಡಿದ್ದರು ಆದರೆ ಕ್ಯಾಪ್ಟನ್ ಭವ್ಯಾ ಗೌಡ, ಐಶ್ವರ್ಯಾ ಅವರನ್ನು ನೇರವಾಗಿ ನಾಮಿನೇಟ್ ಮಾಡಿರುವ ಕಾರಣ ಅವರು ಸಹ ಪಟ್ಟಿ ಸೇರಿಕೊಂಡಿದ್ದಾರೆ. ಇನ್ನು ಭವ್ಯಾ ಗೌಡ ಕ್ಯಾಪ್ಟನ್ ಆಗಿರುವ ಕಾರಣ ಅವರನ್ನು ನಾಮಿನೇಟ್ ಮಾಡುವಂತಿರಲಿಲ್ಲ. ಇನ್ನು ರಜತ್ ಅವರನ್ನು ಮನೆಯ ಯಾವ ಸದಸ್ಯರೂ ಸಹ ನಾಮಿನೇಟ್ ಮಾಡಲಿಲ್ಲ.

ಈ ಸೀಸನ್​ನಲ್ಲಿ ಈವರೆಗೆ ಡಬಲ್ ಎಲಿಮಿನೇಷನ್ ಆಗಿಲ್ಲ, ಈ ವಾರ ಎಂಟು ಮಂದಿ ನಾಮಿನೇಟ್ ಆಗಿದ್ದು, ಈ ವಾರ ಡಬಲ್ ಎಲಿಮಿನೇಷನ್ ಆಗಬಹುದಾ ಎಂಬ ಅನುಮಾನವೂ ಇದೆ. ಈ ವಾರವೂ ಸಹ ಮನೆಯ ಸದಸ್ಯರು ಹಲವು ತಪ್ಪುಗಳನ್ನು ಮಾಡಿದ್ದು, ಈ ವಾರವೂ ಸಹ ಸುದೀಪ್​ರಿಂದ ಬುದ್ಧಿಮಾತು ಕೇಳಲು ಅಣಿಯಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!