AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಕನ್ನಡ ಎಲಿಮಿನೇಷನ್: ಅಣ್ಣ-ತಂಗಿ ಜಿಂಕೆ ಇದನ್ನು ಊಹಿಸಿರಲಿಲ್ಲ

ಧನರಾಜ್ ಮತ್ತು ಭವ್ಯಾ ಅವರು ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿಯಾಗಿ ಆಪ್ತತೆ ಬೆಳೆಸಿಕೊಂಡಿದ್ದಾರೆ. ಈ ವಾರದ ಎಲಿಮಿನೇಷನ್​ನಲ್ಲಿ ಈ ರೀತಿ ಆಗುತ್ತದೆ ಎಂದು ಅವರಿಬ್ಬರೂ ಊಹಿಸಿರಲಿಲ್ಲ. ಒಟ್ಟು ಏಳು ಜನರು ಈ ವಾರ ನಾಮಿನೇಟ್ ಆಗಿದ್ದರು. ಅಂತಿಮವಾಗಿ ಧನರಾಜ್ ಮತ್ತು ಭವ್ಯಾ ಅವರು ಡೇಂಜರ್ ಝೋನ್​ಗೆ ಬಂದರು. ಆದರೆ ನಂತರ ಆಗಿದ್ದೇ ಬೇರೆ.

ಬಿಗ್ ಬಾಸ್ ಕನ್ನಡ ಎಲಿಮಿನೇಷನ್: ಅಣ್ಣ-ತಂಗಿ ಜಿಂಕೆ ಇದನ್ನು ಊಹಿಸಿರಲಿಲ್ಲ
ಧನರಾಜ್, ಭವ್ಯಾ
ಮದನ್​ ಕುಮಾರ್​
|

Updated on: Nov 10, 2024 | 11:12 PM

Share

ಭಾನುವಾರ ಬಂದರೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಎಲಿಮಿನೇಷನ್​ನ ಟೆನ್ಷನ್​ ಹೆಚ್ಚಾಗುತ್ತದೆ. ಯಾರು ಈ ವಾರ ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುತ್ತಾರೆ ಎಂಬ ಪ್ರಶ್ನೆ ಎಲ್ಲರ ಮನಸ್ಸಿನಲ್ಲೂ ಕಾಡುತ್ತದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಈ ವಾರ ಒಟ್ಟು 7 ಮಂದಿ ನಾಮಿನೇಟ್​​ ಆಗಿದ್ದರು. ಅವರಲ್ಲಿ ಯಾರ ಆಟ ಅಂತ್ಯ ಆಗಲಿದೆ ಎಂಬ ಕೌತುಕ ಇತ್ತು. ಅಂತಿಮವಾಗಿ ಎಲ್ಲರೂ ಸೇಫ್ ಆಗಿದ್ದರು. ಆದರೆ ಕೊನೆಯಲ್ಲಿ ಉಳಿದುಕೊಂಡಿದ್ದು ಭವ್ಯಾ ಮತ್ತು ಧನರಾಜ್. ಅವರಿಗೂ ಒಂದು ಸರ್ಪೈಸ್ ಕಾದಿತ್ತು.

ಡೇಂಜರ್ ಝೋನ್​ನಲ್ಲಿ ಇದ್ದ ಧನರಾಜ್ ಮತ್ತು ಭವ್ಯಾ ಅವರ ಪೈಕಿ ಧನರಾಜ್ ಸೇಫ್ ಆದರು. ಭವ್ಯಾ ಅವರು ಲಗೇಜ್ ಪ್ಯಾಕ್ ಮಾಡಿಕೊಂಡು ಮುಖ್ಯದ್ವಾರದ ಕಡೆಗೆ ಬರಬೇಕಾಯಿತು. ಎಲಿಮಿನೇಷನ್​ನಲ್ಲಿ ಭವ್ಯಾ ಹೆಸರು ಬರುತ್ತದೆ ಎಂದು ಬಹುತೇಕರು ಊಹಿರಲಿಲ್ಲ. ಹಾಗಾಗಿ ಐಶ್ವರ್ಯಾ, ಶಿಶಿರ್, ತ್ರಿವಿಕ್ರಮ್ ಮುಂತಾದವರು ಸಿಕ್ಕಾಪಟ್ಟೆ ಎಮೋಷನಲ್ ಆದರು.

ಇನ್ನೇನು ಭವ್ಯಾ ಅವರು ಬಿಗ್ ಬಾಸ್​ ಮನೆಯಿಂದ ಹೊರಗೆ ಬರಬೇಕು ಎಂಬಷ್ಟರಲ್ಲಿ ಒಂದು ಟ್ವಿಸ್ಟ್​ ನೀಡಲಾಯಿತು. ದೊಡ್ಮನೆಯ ಬಾಗಿಲು ಓಪನ್ ಆಗಲೇ ಇಲ್ಲ. ‘ಭವ್ಯ ಅವರೇ.. ಈ ವಾರ ಈ ಮನೆಯಲ್ಲಿ ನಿಮ್ಮ ಪಯಣ ಮುಂದುವರಿಯುತ್ತದೆ’ ಎಂದು ಬಿಗ್ ಬಾಸ್ ಘೋಷಿಸಿದರು. ಇನ್ನೇನು ಹೊರಗೆ ಹೋಗಿ ಫ್ಯಾಮಿಲಿಯವರನ್ನು ನೋಡಬೇಕು ಎಂದುಕೊಂಡಿದ್ದ ಭವ್ಯಾ ಅವರಿಗೆ ಈ ಟ್ವಿಸ್ಟ್​ ನೋಡಿ ಅಚ್ಚರಿ ಆಯಿತು.

ಇದನ್ನೂ ಓದಿ: ಧನರಾಜ್, ಹನುಮಂತ ಫ್ರೇಮ್​ನಲ್ಲಿ ಇದ್ದರೆ ಬಿಗ್ ಬಾಸ್ ಪ್ರೇಕ್ಷಕರಿಗೆ ಡಬಲ್ ಕಾಮಿಡಿ

ಭವ್ಯಾ ಎಲಿಮಿನೇಟ್ ಆಗಿಲ್ಲ ಎಂಬುದು ಗೊತ್ತಾದ ಬಳಿಕ ಇನ್ನುಳಿದ ಸ್ಪರ್ಧಿಗಳು ಬಂದು ವಿಶ್ ಮಾಡಿದರು. ಈ ವಾರ ಓಟಿಂಗ್ ಲೈನ್ಸ್ ಇರುವುದಿಲ್ಲ ಎಂದು ವೀಕ್ಷಕರಿಗೆ ಮೊದಲೇ ತಿಳಿಸಲಾಗಿತ್ತು. ಆದರೆ ಬಿಗ್ ಬಾಸ್ ಮನೆಯ ಒಳಗೆ ಇರುವ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿರಲಿಲ್ಲ. ಹಾಗಾಗಿ ಅವರಿಗೆ ಎಂದಿನಂತೆ ಟೆನ್ಷನ್ ಇತ್ತು. ಅಣ್ಣ-ತಂಗಿ ಜಿಂಕೆ ಎಂದೇ ಫೇಮಸ್ ಆಗಿರುವ ಭವ್ಯಾ ಮತ್ತು ಧನರಾಜ್ ಅವರಿಗೆ ಜಾಸ್ತಿ ಆತಂಕ ಆಗಿತ್ತು. ಆದರೆ ಈ ವಾರ ಎಲಿಮಿನೇಷನ್​ ಇಲ್ಲ ಎಂದು ತಿಳಿದ ಬಳಿಕ ಎಲ್ಲರೂ ನಿಟ್ಟುಸಿರು ಬಿಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ