AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಕನ್ನಡ ಎಲಿಮಿನೇಷನ್: ಅಣ್ಣ-ತಂಗಿ ಜಿಂಕೆ ಇದನ್ನು ಊಹಿಸಿರಲಿಲ್ಲ

ಧನರಾಜ್ ಮತ್ತು ಭವ್ಯಾ ಅವರು ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿಯಾಗಿ ಆಪ್ತತೆ ಬೆಳೆಸಿಕೊಂಡಿದ್ದಾರೆ. ಈ ವಾರದ ಎಲಿಮಿನೇಷನ್​ನಲ್ಲಿ ಈ ರೀತಿ ಆಗುತ್ತದೆ ಎಂದು ಅವರಿಬ್ಬರೂ ಊಹಿಸಿರಲಿಲ್ಲ. ಒಟ್ಟು ಏಳು ಜನರು ಈ ವಾರ ನಾಮಿನೇಟ್ ಆಗಿದ್ದರು. ಅಂತಿಮವಾಗಿ ಧನರಾಜ್ ಮತ್ತು ಭವ್ಯಾ ಅವರು ಡೇಂಜರ್ ಝೋನ್​ಗೆ ಬಂದರು. ಆದರೆ ನಂತರ ಆಗಿದ್ದೇ ಬೇರೆ.

ಬಿಗ್ ಬಾಸ್ ಕನ್ನಡ ಎಲಿಮಿನೇಷನ್: ಅಣ್ಣ-ತಂಗಿ ಜಿಂಕೆ ಇದನ್ನು ಊಹಿಸಿರಲಿಲ್ಲ
ಧನರಾಜ್, ಭವ್ಯಾ
ಮದನ್​ ಕುಮಾರ್​
|

Updated on: Nov 10, 2024 | 11:12 PM

Share

ಭಾನುವಾರ ಬಂದರೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಎಲಿಮಿನೇಷನ್​ನ ಟೆನ್ಷನ್​ ಹೆಚ್ಚಾಗುತ್ತದೆ. ಯಾರು ಈ ವಾರ ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುತ್ತಾರೆ ಎಂಬ ಪ್ರಶ್ನೆ ಎಲ್ಲರ ಮನಸ್ಸಿನಲ್ಲೂ ಕಾಡುತ್ತದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಈ ವಾರ ಒಟ್ಟು 7 ಮಂದಿ ನಾಮಿನೇಟ್​​ ಆಗಿದ್ದರು. ಅವರಲ್ಲಿ ಯಾರ ಆಟ ಅಂತ್ಯ ಆಗಲಿದೆ ಎಂಬ ಕೌತುಕ ಇತ್ತು. ಅಂತಿಮವಾಗಿ ಎಲ್ಲರೂ ಸೇಫ್ ಆಗಿದ್ದರು. ಆದರೆ ಕೊನೆಯಲ್ಲಿ ಉಳಿದುಕೊಂಡಿದ್ದು ಭವ್ಯಾ ಮತ್ತು ಧನರಾಜ್. ಅವರಿಗೂ ಒಂದು ಸರ್ಪೈಸ್ ಕಾದಿತ್ತು.

ಡೇಂಜರ್ ಝೋನ್​ನಲ್ಲಿ ಇದ್ದ ಧನರಾಜ್ ಮತ್ತು ಭವ್ಯಾ ಅವರ ಪೈಕಿ ಧನರಾಜ್ ಸೇಫ್ ಆದರು. ಭವ್ಯಾ ಅವರು ಲಗೇಜ್ ಪ್ಯಾಕ್ ಮಾಡಿಕೊಂಡು ಮುಖ್ಯದ್ವಾರದ ಕಡೆಗೆ ಬರಬೇಕಾಯಿತು. ಎಲಿಮಿನೇಷನ್​ನಲ್ಲಿ ಭವ್ಯಾ ಹೆಸರು ಬರುತ್ತದೆ ಎಂದು ಬಹುತೇಕರು ಊಹಿರಲಿಲ್ಲ. ಹಾಗಾಗಿ ಐಶ್ವರ್ಯಾ, ಶಿಶಿರ್, ತ್ರಿವಿಕ್ರಮ್ ಮುಂತಾದವರು ಸಿಕ್ಕಾಪಟ್ಟೆ ಎಮೋಷನಲ್ ಆದರು.

ಇನ್ನೇನು ಭವ್ಯಾ ಅವರು ಬಿಗ್ ಬಾಸ್​ ಮನೆಯಿಂದ ಹೊರಗೆ ಬರಬೇಕು ಎಂಬಷ್ಟರಲ್ಲಿ ಒಂದು ಟ್ವಿಸ್ಟ್​ ನೀಡಲಾಯಿತು. ದೊಡ್ಮನೆಯ ಬಾಗಿಲು ಓಪನ್ ಆಗಲೇ ಇಲ್ಲ. ‘ಭವ್ಯ ಅವರೇ.. ಈ ವಾರ ಈ ಮನೆಯಲ್ಲಿ ನಿಮ್ಮ ಪಯಣ ಮುಂದುವರಿಯುತ್ತದೆ’ ಎಂದು ಬಿಗ್ ಬಾಸ್ ಘೋಷಿಸಿದರು. ಇನ್ನೇನು ಹೊರಗೆ ಹೋಗಿ ಫ್ಯಾಮಿಲಿಯವರನ್ನು ನೋಡಬೇಕು ಎಂದುಕೊಂಡಿದ್ದ ಭವ್ಯಾ ಅವರಿಗೆ ಈ ಟ್ವಿಸ್ಟ್​ ನೋಡಿ ಅಚ್ಚರಿ ಆಯಿತು.

ಇದನ್ನೂ ಓದಿ: ಧನರಾಜ್, ಹನುಮಂತ ಫ್ರೇಮ್​ನಲ್ಲಿ ಇದ್ದರೆ ಬಿಗ್ ಬಾಸ್ ಪ್ರೇಕ್ಷಕರಿಗೆ ಡಬಲ್ ಕಾಮಿಡಿ

ಭವ್ಯಾ ಎಲಿಮಿನೇಟ್ ಆಗಿಲ್ಲ ಎಂಬುದು ಗೊತ್ತಾದ ಬಳಿಕ ಇನ್ನುಳಿದ ಸ್ಪರ್ಧಿಗಳು ಬಂದು ವಿಶ್ ಮಾಡಿದರು. ಈ ವಾರ ಓಟಿಂಗ್ ಲೈನ್ಸ್ ಇರುವುದಿಲ್ಲ ಎಂದು ವೀಕ್ಷಕರಿಗೆ ಮೊದಲೇ ತಿಳಿಸಲಾಗಿತ್ತು. ಆದರೆ ಬಿಗ್ ಬಾಸ್ ಮನೆಯ ಒಳಗೆ ಇರುವ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿರಲಿಲ್ಲ. ಹಾಗಾಗಿ ಅವರಿಗೆ ಎಂದಿನಂತೆ ಟೆನ್ಷನ್ ಇತ್ತು. ಅಣ್ಣ-ತಂಗಿ ಜಿಂಕೆ ಎಂದೇ ಫೇಮಸ್ ಆಗಿರುವ ಭವ್ಯಾ ಮತ್ತು ಧನರಾಜ್ ಅವರಿಗೆ ಜಾಸ್ತಿ ಆತಂಕ ಆಗಿತ್ತು. ಆದರೆ ಈ ವಾರ ಎಲಿಮಿನೇಷನ್​ ಇಲ್ಲ ಎಂದು ತಿಳಿದ ಬಳಿಕ ಎಲ್ಲರೂ ನಿಟ್ಟುಸಿರು ಬಿಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್