AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಬೆಡಗಿ ದೀಪಿಕಾ ದಾಸ್​ ಹೊಸ ಸಿನಿಮಾ ‘ಪಾರು ಪಾರ್ವತಿ’

‘ಪಾರು ಪಾರ್ವತಿ’ ಸಿನಿಮಾಗೆ ರೋಹಿತ್ ಕೀರ್ತಿ ನಿರ್ದೇಶನ ಮಾಡುತ್ತಿದ್ದಾರೆ. ಪಿ.ಬಿ. ಪ್ರೇಮನಾಥ್ ಅವರು ಬಂಡವಾಳ ಹೂಡಿದ್ದಾರೆ. ಖ್ಯಾತ ನಟಿ ದೀಪಿಕಾ ದಾಸ್​ ಅವರಿಗೆ ಈ ಚಿತ್ರದಲ್ಲಿ ಡಿಫರೆಂಟ್ ಪಾತ್ರವಿದೆ. ಶೂಟಿಂಗ್​ ಮುಗಿಸಿಕೊಂಡಿರುವ ಚಿತ್ರತಂಡ ಇತ್ತೀಚೆಗೆ ಟೈಟಲ್​ ಲಾಂಚ್​ ಮಾಡಿದೆ. ಬಳಿಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು.

ಬಿಗ್ ಬಾಸ್​ ಬೆಡಗಿ ದೀಪಿಕಾ ದಾಸ್​ ಹೊಸ ಸಿನಿಮಾ ‘ಪಾರು ಪಾರ್ವತಿ’
‘ಪಾರು ಪಾರ್ವತಿ’ ಸಿನಿಮಾದ ಟೈಟಲ್​ ಲಾಂಚ್​
ಮದನ್​ ಕುಮಾರ್​
|

Updated on: Sep 03, 2024 | 5:30 PM

Share

ನಟಿ ದೀಪಿಕಾ ದಾಸ್​ ಅವರು ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 7’ ಶೋನಲ್ಲಿ ಸ್ಪರ್ಧಿಸಿಯೂ ಅವರು ಸಖತ್​ ಹೆಸರು ಮಾಡಿದರು. ಅಷ್ಟೇ ಅಲ್ಲದೇ, ಸಿನಿಮಾಗಳಲ್ಲೂ ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ದೀಪಿಕಾ ದಾಸ್​ ಅವರು ಈಗ ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾವನ್ನು ‘EIGHTEEN THIRTY SIX Pictures’ ಸಂಸ್ಥೆಯ ಮೂಲಕ ಪಿ.ಬಿ. ಪ್ರೇಮನಾಥ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಪಾರು ಪಾರ್ವತಿ’ ಎಂದು ಶೀರ್ಷಿಕೆ ಇಡಲಾಗಿದೆ.

‘ಪಾರು ಪಾರ್ವತಿ’ ಸಿನಿಮಾಗೆ ರೋಹಿತ್ ಕೀರ್ತಿ ನಿರ್ದೇಶನ ಮಾಡುತ್ತಿದ್ದಾರೆ. ದೀಪಿಕಾ ದಾಸ್ ಜೊತೆ ಪೂನಂ ಸರ್ ನಾಯಕ್, ಫವಾಜ್ ಅಶ್ರಫ್ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೈಟಲ್​ ಲಾಂಚ್​ ಮಾಡಲಾಯಿತು. ಇದೇ ಸಂದರ್ಭದಲ್ಲಿ ‘EIGHTEEN THIRTY SIX Pictures’ ನಿರ್ಮಾಣ ಸಂಸ್ಥೆಯ ಉದ್ಘಾಟನೆಗೆ ಕೂಡ ನಡೆಯಿತು.

‘ಮೊದಲಿನಿಂದಲೂ ನನಗೆ ಪ್ರವಾಸ ಮತ್ತು ಅಡ್ವೆಂಚರ್​ನಲ್ಲಿ ಆಸಕ್ತಿ. ಈ ಸಿನಿಮಾದಲ್ಲಿ ನಾನು ಏಕಾಂಗಿ ಸಂಚಾರಿ ಆಗಿರುತ್ತೇನೆ. ಪಾಯಲ್ ಎಂಬುದು ನನ್ನ ಪಾತ್ರದ ಹೆಸರು. ಪ್ರಯಾಣದಲ್ಲೇ ಸಿನಿಮಾದ ಕಥೆ ಸಾಗುತ್ತದೆ. ಈ ಸಿನಿಮಾಗಾಗಿ ನಾನು 1 ತಿಂಗಳಲ್ಲಿ 10 ಕೆಜಿ ತೂಕ ಇಳಿಸಿಕೊಂಡಿದ್ದೇನೆ‌. ಉದ್ದವಾದ ಕೂದಲಿಗೆ ಕತ್ತರಿ ಹಾಕಿದ್ದೇನೆ. ಪಾತ್ರ ಬಯಸಿದ್ದನ್ನು ನಾನು ಮಾಡಿದ್ದೇನೆ. ನಾವು ಸಂಚರಿಸಿರುವ ಕಾರು ಕೂಡ ಈ ಸಿನಿಮಾದಲ್ಲಿ ನಮ್ಮಷ್ಟೇ ಮುಖ್ಯ ಪಾತ್ರ ವಹಿಸಿದೆ’ ಎಂದು ದೀಪಿಕಾ ದಾಸ್ ಹೇಳಿದ್ದಾರೆ.

ಕಳೆದ 10 ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿರುವ ರೋಹಿತ್ ಕೀರ್ತಿ ಅವರು ‘ಪಾರು ಪಾರ್ವತಿ’ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ‘ಬೆಂಗಳೂರು, ಗೋವಾ, ರಾಜಸ್ಥಾನ, ಮಹಾರಾಷ್ಟ್ರ, ಉತ್ತರಕಾಂಡ ಮುಂತಾದೆಡೆ ಚಿತ್ರೀಕರಣ ನಡೆದಿದೆ. 3 ಮುಖ್ಯ ಪಾತ್ರಗಳ ಸುತ್ತವೇ ಸಿನಿಮಾದ ಕಥೆ ಸಾಗುತ್ತದೆ. ದೀಪಿಕಾ ದಾಸ್ ಅವರ ಪಾತ್ರ ಈ ಸಿನಿಮಾದಲ್ಲಿ ಡಿಫರೆಂಟ್​ ಆಗಿದೆ. ಚಿತ್ರೀಕರಣ ಮುಗಿದಿದ್ದು, ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದೇವೆ’ ಎಂದಿದ್ದಾರೆ ನಿರ್ದೇಶಕರು.

‘ಪಾರು ಪಾರ್ವತಿ’ ಚಿತ್ರತಂಡ

ನಿರ್ಮಾಪಕ ಪ್ರೇಮನಾಥ್ ಮಾತನಾಡಿ, ‘ನಾನು ಮೂಲತಃ ಐಟಿ ಉದ್ಯೋಗಿ. ಚಿಕ್ಕ ವಯಸ್ಸಿನಿಂದಲೂ ಸಿನಿಮಾ ವೀಕ್ಷಿಸುತ್ತಿದ್ದ ನನಗೆ ಸಿನಿಮಾ ನಿರ್ಮಿಸಬೇಕು ಎಂಬ ಕನಸು ಇತ್ತು. ಅದು ಈ ಸಿನಿಮಾ ಮೂಲಕ ಈಡೇರಿದೆ. ನಾನು ಕೆಲಸದ ಸಲುವಾಗಿ ಅನೇಕ ಊರುಗಳಲ್ಲಿ ವಾಸವಾಗಿದ್ದೆ. ಇದು ಕೂಡ ಒಂದು ಪ್ರವಾಸದ ಕಥೆ ಆಗಿರುವುದರಿಂದ ನನಗೆ ಇಷ್ಟವಾಯ್ತು’ ಎಂದು ಹೇಳಿದರು.

ಇದನ್ನೂ ಓದಿ: ‘ಬಿಗ್​ ಬಾಸ್​ ನಿರೂಪಣೆ ಮಾಡಲ್ಲ’: ಗಟ್ಟಿ ನಿರ್ಧಾರ ತೆಗೆದುಕೊಂಡ ನಟ ಕಮಲ್​ ಹಾಸನ್​

ಚೇತನ್ ಡಿಸೋಜ ಅವರು ಈ ಸಿನಿಮಾಗೆ ಸಾಹಸ ನಿರ್ದೇಶನ ಮಾಡಿದ್ದಾರೆ. ರಾಜಾಕೃಷ್ಣನ್ ಆಡಿಯೋಗ್ರಫಿ ಮಾಡಿದ್ದು, ಡಿಸೈನರ್ ಆಗಿ ಮಹಮ್ಮದ್ ಹಮ್ಜ ಕಾರ್ಯ ನಿರ್ವಹಿಸಿದ್ದಾರೆ. ನಟರಾದ ಪೂನಂ ಸರ್ ನಾಯಕ್, ಫವಾಜ್ ಅಶ್ರಫ್, ಸಂಗೀತ ನಿರ್ದೇಶಕ ಹರಿ, ಛಾಯಾಗ್ರಾಹಕ ಅಬಿನ್ ರಾಜೇಶ್, ಸಂಕಲನಕಾರ ಸಿ‌.ಕೆ. ಕುಮಾರ್, ಕಲಾ ನಿರ್ದೇಶಕ ರಾಘು ಮೈಸೂರು, ಗೀತರಚನಕಾರ ನಾಗಾರ್ಜುನ ಶರ್ಮಾ ಕೂಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ