AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಬೆಡಗಿ ದೀಪಿಕಾ ದಾಸ್​ ಹೊಸ ಸಿನಿಮಾ ‘ಪಾರು ಪಾರ್ವತಿ’

‘ಪಾರು ಪಾರ್ವತಿ’ ಸಿನಿಮಾಗೆ ರೋಹಿತ್ ಕೀರ್ತಿ ನಿರ್ದೇಶನ ಮಾಡುತ್ತಿದ್ದಾರೆ. ಪಿ.ಬಿ. ಪ್ರೇಮನಾಥ್ ಅವರು ಬಂಡವಾಳ ಹೂಡಿದ್ದಾರೆ. ಖ್ಯಾತ ನಟಿ ದೀಪಿಕಾ ದಾಸ್​ ಅವರಿಗೆ ಈ ಚಿತ್ರದಲ್ಲಿ ಡಿಫರೆಂಟ್ ಪಾತ್ರವಿದೆ. ಶೂಟಿಂಗ್​ ಮುಗಿಸಿಕೊಂಡಿರುವ ಚಿತ್ರತಂಡ ಇತ್ತೀಚೆಗೆ ಟೈಟಲ್​ ಲಾಂಚ್​ ಮಾಡಿದೆ. ಬಳಿಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು.

ಬಿಗ್ ಬಾಸ್​ ಬೆಡಗಿ ದೀಪಿಕಾ ದಾಸ್​ ಹೊಸ ಸಿನಿಮಾ ‘ಪಾರು ಪಾರ್ವತಿ’
‘ಪಾರು ಪಾರ್ವತಿ’ ಸಿನಿಮಾದ ಟೈಟಲ್​ ಲಾಂಚ್​
Follow us
ಮದನ್​ ಕುಮಾರ್​
|

Updated on: Sep 03, 2024 | 5:30 PM

ನಟಿ ದೀಪಿಕಾ ದಾಸ್​ ಅವರು ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 7’ ಶೋನಲ್ಲಿ ಸ್ಪರ್ಧಿಸಿಯೂ ಅವರು ಸಖತ್​ ಹೆಸರು ಮಾಡಿದರು. ಅಷ್ಟೇ ಅಲ್ಲದೇ, ಸಿನಿಮಾಗಳಲ್ಲೂ ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ದೀಪಿಕಾ ದಾಸ್​ ಅವರು ಈಗ ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾವನ್ನು ‘EIGHTEEN THIRTY SIX Pictures’ ಸಂಸ್ಥೆಯ ಮೂಲಕ ಪಿ.ಬಿ. ಪ್ರೇಮನಾಥ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಪಾರು ಪಾರ್ವತಿ’ ಎಂದು ಶೀರ್ಷಿಕೆ ಇಡಲಾಗಿದೆ.

‘ಪಾರು ಪಾರ್ವತಿ’ ಸಿನಿಮಾಗೆ ರೋಹಿತ್ ಕೀರ್ತಿ ನಿರ್ದೇಶನ ಮಾಡುತ್ತಿದ್ದಾರೆ. ದೀಪಿಕಾ ದಾಸ್ ಜೊತೆ ಪೂನಂ ಸರ್ ನಾಯಕ್, ಫವಾಜ್ ಅಶ್ರಫ್ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೈಟಲ್​ ಲಾಂಚ್​ ಮಾಡಲಾಯಿತು. ಇದೇ ಸಂದರ್ಭದಲ್ಲಿ ‘EIGHTEEN THIRTY SIX Pictures’ ನಿರ್ಮಾಣ ಸಂಸ್ಥೆಯ ಉದ್ಘಾಟನೆಗೆ ಕೂಡ ನಡೆಯಿತು.

‘ಮೊದಲಿನಿಂದಲೂ ನನಗೆ ಪ್ರವಾಸ ಮತ್ತು ಅಡ್ವೆಂಚರ್​ನಲ್ಲಿ ಆಸಕ್ತಿ. ಈ ಸಿನಿಮಾದಲ್ಲಿ ನಾನು ಏಕಾಂಗಿ ಸಂಚಾರಿ ಆಗಿರುತ್ತೇನೆ. ಪಾಯಲ್ ಎಂಬುದು ನನ್ನ ಪಾತ್ರದ ಹೆಸರು. ಪ್ರಯಾಣದಲ್ಲೇ ಸಿನಿಮಾದ ಕಥೆ ಸಾಗುತ್ತದೆ. ಈ ಸಿನಿಮಾಗಾಗಿ ನಾನು 1 ತಿಂಗಳಲ್ಲಿ 10 ಕೆಜಿ ತೂಕ ಇಳಿಸಿಕೊಂಡಿದ್ದೇನೆ‌. ಉದ್ದವಾದ ಕೂದಲಿಗೆ ಕತ್ತರಿ ಹಾಕಿದ್ದೇನೆ. ಪಾತ್ರ ಬಯಸಿದ್ದನ್ನು ನಾನು ಮಾಡಿದ್ದೇನೆ. ನಾವು ಸಂಚರಿಸಿರುವ ಕಾರು ಕೂಡ ಈ ಸಿನಿಮಾದಲ್ಲಿ ನಮ್ಮಷ್ಟೇ ಮುಖ್ಯ ಪಾತ್ರ ವಹಿಸಿದೆ’ ಎಂದು ದೀಪಿಕಾ ದಾಸ್ ಹೇಳಿದ್ದಾರೆ.

ಕಳೆದ 10 ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿರುವ ರೋಹಿತ್ ಕೀರ್ತಿ ಅವರು ‘ಪಾರು ಪಾರ್ವತಿ’ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ‘ಬೆಂಗಳೂರು, ಗೋವಾ, ರಾಜಸ್ಥಾನ, ಮಹಾರಾಷ್ಟ್ರ, ಉತ್ತರಕಾಂಡ ಮುಂತಾದೆಡೆ ಚಿತ್ರೀಕರಣ ನಡೆದಿದೆ. 3 ಮುಖ್ಯ ಪಾತ್ರಗಳ ಸುತ್ತವೇ ಸಿನಿಮಾದ ಕಥೆ ಸಾಗುತ್ತದೆ. ದೀಪಿಕಾ ದಾಸ್ ಅವರ ಪಾತ್ರ ಈ ಸಿನಿಮಾದಲ್ಲಿ ಡಿಫರೆಂಟ್​ ಆಗಿದೆ. ಚಿತ್ರೀಕರಣ ಮುಗಿದಿದ್ದು, ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದೇವೆ’ ಎಂದಿದ್ದಾರೆ ನಿರ್ದೇಶಕರು.

‘ಪಾರು ಪಾರ್ವತಿ’ ಚಿತ್ರತಂಡ

ನಿರ್ಮಾಪಕ ಪ್ರೇಮನಾಥ್ ಮಾತನಾಡಿ, ‘ನಾನು ಮೂಲತಃ ಐಟಿ ಉದ್ಯೋಗಿ. ಚಿಕ್ಕ ವಯಸ್ಸಿನಿಂದಲೂ ಸಿನಿಮಾ ವೀಕ್ಷಿಸುತ್ತಿದ್ದ ನನಗೆ ಸಿನಿಮಾ ನಿರ್ಮಿಸಬೇಕು ಎಂಬ ಕನಸು ಇತ್ತು. ಅದು ಈ ಸಿನಿಮಾ ಮೂಲಕ ಈಡೇರಿದೆ. ನಾನು ಕೆಲಸದ ಸಲುವಾಗಿ ಅನೇಕ ಊರುಗಳಲ್ಲಿ ವಾಸವಾಗಿದ್ದೆ. ಇದು ಕೂಡ ಒಂದು ಪ್ರವಾಸದ ಕಥೆ ಆಗಿರುವುದರಿಂದ ನನಗೆ ಇಷ್ಟವಾಯ್ತು’ ಎಂದು ಹೇಳಿದರು.

ಇದನ್ನೂ ಓದಿ: ‘ಬಿಗ್​ ಬಾಸ್​ ನಿರೂಪಣೆ ಮಾಡಲ್ಲ’: ಗಟ್ಟಿ ನಿರ್ಧಾರ ತೆಗೆದುಕೊಂಡ ನಟ ಕಮಲ್​ ಹಾಸನ್​

ಚೇತನ್ ಡಿಸೋಜ ಅವರು ಈ ಸಿನಿಮಾಗೆ ಸಾಹಸ ನಿರ್ದೇಶನ ಮಾಡಿದ್ದಾರೆ. ರಾಜಾಕೃಷ್ಣನ್ ಆಡಿಯೋಗ್ರಫಿ ಮಾಡಿದ್ದು, ಡಿಸೈನರ್ ಆಗಿ ಮಹಮ್ಮದ್ ಹಮ್ಜ ಕಾರ್ಯ ನಿರ್ವಹಿಸಿದ್ದಾರೆ. ನಟರಾದ ಪೂನಂ ಸರ್ ನಾಯಕ್, ಫವಾಜ್ ಅಶ್ರಫ್, ಸಂಗೀತ ನಿರ್ದೇಶಕ ಹರಿ, ಛಾಯಾಗ್ರಾಹಕ ಅಬಿನ್ ರಾಜೇಶ್, ಸಂಕಲನಕಾರ ಸಿ‌.ಕೆ. ಕುಮಾರ್, ಕಲಾ ನಿರ್ದೇಶಕ ರಾಘು ಮೈಸೂರು, ಗೀತರಚನಕಾರ ನಾಗಾರ್ಜುನ ಶರ್ಮಾ ಕೂಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!