AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತೀ ಬಾರಿ ಇದೇ ಡ್ರಾಮಾ’; ಹೊಡೆದಾಟದ ಹಂತಕ್ಕೆ ಹೋಯ್ತು ಬಿಗ್ ಬಾಸ್ ಟಾಸ್ಕ್​

ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಸ್ನೇಹಿತ್ ಅವರು ತುಕಾಲಿ ಸಂತೋಷ್ ಅವರ ಮೈಮೇಲೆ ಬಿದ್ದ ಕಾರಣ ಗಲಾಟೆ ಶುರುವಾಯಿತು.  

‘ಪ್ರತೀ ಬಾರಿ ಇದೇ ಡ್ರಾಮಾ’; ಹೊಡೆದಾಟದ ಹಂತಕ್ಕೆ ಹೋಯ್ತು ಬಿಗ್ ಬಾಸ್ ಟಾಸ್ಕ್​
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Nov 24, 2023 | 7:39 AM

Share

ಬಿಗ್ ಬಾಸ್​ನಲ್ಲಿ (Bigg Boss) ಒಂದು ಟಾಸ್ಕ್ ಕೊಟ್ಟರೆ ಸಾಕು ಸ್ಪರ್ಧಿಗಳ ಮಧ್ಯೆ ಕಿತ್ತಾಟ ಶುರುವಾಗುತ್ತದೆ. ಎರಡೂ ಟೀಂನವರು ಬದ್ಧ ವೈರಿಗಳಂತೆ ಆಟ ಆಡುತ್ತಾರೆ. ನವೆಂಬರ್ 23ರ ಎಪಿಸೋಡ್​ನಲ್ಲಿ ಆಗಿದ್ದೂ ಇದೇ. ಮೈಕೆಲ್ ನೇತೃತ್ವದ ಸಂಪತ್ತಿಗೆ ಸವಾಲ್ ತಂಡ ಹಾಗೂ ಸಂಗೀತಾ ನೇತೃತ್ವದ ಗಜಕೇಸರಿ ತಂಡದ ಮಧ್ಯೆ ಕಿತ್ತಾಟ ನಡೆದಿದೆ. ಒಬ್ಬರ ಹೂವನ್ನು ಮತ್ತೊಬ್ಬರು ಕಿತ್ತುಕೊಳ್ಳುವ ಹಂತಕ್ಕೆ ಫೈಟ್ ಹೋಗಿದೆ.

ಕೃತಕ ಹೂವುಗಳನ್ನು ಬಿಗ್ ಬಾಸ್ ಕಳುಹಿಸಿಕೊಟ್ಟಿದ್ದರು. ಈ ಹೂವನ್ನು ನಿಗದಿ ಪಡಿಸಿದ ಜಾಗದಲ್ಲಿ ನೆಡಬೇಕಿತ್ತು. ಆ ಬಳಿಕ ಎದುರಾಳಿ ತಂಡದವರು ಇದನ್ನು ಕೀಳಬೇಕು. ಕೊನೆಯಲ್ಲಿ ಯಾರು ಹೆಚ್ಚು ಹೂವುಗಳನ್ನು ನೆಟ್ಟಿರುತ್ತಾರೋ ಅವರು ಗೆದ್ದಂತೆ. ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಸ್ನೇಹಿತ್ ಅವರು ತುಕಾಲಿ ಸಂತೋಷ್ ಅವರ ಮೈಮೇಲೆ ಬಿದ್ದ ಕಾರಣ ಗಲಾಟೆ ಶುರುವಾಯಿತು.

ಇದನ್ನೂ ಓದಿ: ಇನ್​ಸ್ಟಾಗ್ರಾಮ್​ನಲ್ಲಿ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡ ಸಂಗೀತಾ ಶೃಂಗೇರಿ

ಮೈಕೆಲ್ ಹೋಗಿ ಎದುರಾಳಿ ತಂಡದ ಹೂವುಗಳನ್ನು ಕಸಿದುಕೊಂಡರು. ಆ ಬಳಿಕ ವಿನಯ್ ಬಂದು ಕಾರ್ತಿಕ್ ಅವರಿಂದ ಹೂವನ್ನು ಕಸಿದುಕೊಂಡರು. ಎರಡೂ ತಂಡಗಳ ಮಧ್ಯೆ ಇದೇ ರೀತಿಯ ಕಿತ್ತಾಟ ಮುಂದುವರಿಯಿತು. ಇದು ವೀಕ್ಷಕರ ಬೇಸರಕ್ಕೆ ಕಾರಣ ಆಗಿದೆ. ‘ಪ್ರತೀ ಬಾರಿ ಇದೇ ಡ್ರಾಮಾ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಅಪಸ್ವರ ತೆಗೆದಿದ್ದಾರೆ.

ಇದನ್ನೂ ಓದಿ: ವಿಕ್ಟಿಮ್ ಕಾರ್ಡ್​ ಪ್ಲೇ ಮಾಡ್ತಿದ್ದಾರೆ ಸಂಗೀತಾ? ನಟಿಯ ನಡೆಯಿಂದ ಅಭಿಮಾನಿಗಳಿಗೆ ಬೇಸರ

ಈ ಮೊದಲು ಕೂಡ ಇದೇ ಮಾದರಿಯ ಟಾಸ್ಕ್ ನೀಡಲಾಗಿತ್ತು. ಆಗಲೂ ಎರಡೂ ತಂಡದವರು ಕಿತ್ತಾಡಿಕೊಂಡಿದ್ದರು. ಟಾಸ್ಕ್ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಈಗಲೂ ಹಾಗೆಯೇ ಆಗಿದೆ. ಒಂದು ಟಾಸ್ಕ್ ಮಾಡಬೇಕಾದರೆ ಅದಕ್ಕೆ ಸಾಕಷ್ಟು ಜನರ ಶ್ರಮ ಇರುತ್ತದೆ. ಸ್ಪರ್ಧಿಗಳು ಆ ಶ್ರಮವನ್ನು ಹಾಳು ಮಾಡಿಬಿಡುತ್ತಾರೆ. ಈ ವಿಚಾರದಲ್ಲಿ ಸುದೀಪ್ ಅವರು ವೀಕೆಂಡ್​ನಲ್ಲಿ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ. ಕರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ‘ಬಿಗ್ ಬಾಸ್’ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?