AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತೀ ಬಾರಿ ಇದೇ ಡ್ರಾಮಾ’; ಹೊಡೆದಾಟದ ಹಂತಕ್ಕೆ ಹೋಯ್ತು ಬಿಗ್ ಬಾಸ್ ಟಾಸ್ಕ್​

ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಸ್ನೇಹಿತ್ ಅವರು ತುಕಾಲಿ ಸಂತೋಷ್ ಅವರ ಮೈಮೇಲೆ ಬಿದ್ದ ಕಾರಣ ಗಲಾಟೆ ಶುರುವಾಯಿತು.  

‘ಪ್ರತೀ ಬಾರಿ ಇದೇ ಡ್ರಾಮಾ’; ಹೊಡೆದಾಟದ ಹಂತಕ್ಕೆ ಹೋಯ್ತು ಬಿಗ್ ಬಾಸ್ ಟಾಸ್ಕ್​
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Nov 24, 2023 | 7:39 AM

Share

ಬಿಗ್ ಬಾಸ್​ನಲ್ಲಿ (Bigg Boss) ಒಂದು ಟಾಸ್ಕ್ ಕೊಟ್ಟರೆ ಸಾಕು ಸ್ಪರ್ಧಿಗಳ ಮಧ್ಯೆ ಕಿತ್ತಾಟ ಶುರುವಾಗುತ್ತದೆ. ಎರಡೂ ಟೀಂನವರು ಬದ್ಧ ವೈರಿಗಳಂತೆ ಆಟ ಆಡುತ್ತಾರೆ. ನವೆಂಬರ್ 23ರ ಎಪಿಸೋಡ್​ನಲ್ಲಿ ಆಗಿದ್ದೂ ಇದೇ. ಮೈಕೆಲ್ ನೇತೃತ್ವದ ಸಂಪತ್ತಿಗೆ ಸವಾಲ್ ತಂಡ ಹಾಗೂ ಸಂಗೀತಾ ನೇತೃತ್ವದ ಗಜಕೇಸರಿ ತಂಡದ ಮಧ್ಯೆ ಕಿತ್ತಾಟ ನಡೆದಿದೆ. ಒಬ್ಬರ ಹೂವನ್ನು ಮತ್ತೊಬ್ಬರು ಕಿತ್ತುಕೊಳ್ಳುವ ಹಂತಕ್ಕೆ ಫೈಟ್ ಹೋಗಿದೆ.

ಕೃತಕ ಹೂವುಗಳನ್ನು ಬಿಗ್ ಬಾಸ್ ಕಳುಹಿಸಿಕೊಟ್ಟಿದ್ದರು. ಈ ಹೂವನ್ನು ನಿಗದಿ ಪಡಿಸಿದ ಜಾಗದಲ್ಲಿ ನೆಡಬೇಕಿತ್ತು. ಆ ಬಳಿಕ ಎದುರಾಳಿ ತಂಡದವರು ಇದನ್ನು ಕೀಳಬೇಕು. ಕೊನೆಯಲ್ಲಿ ಯಾರು ಹೆಚ್ಚು ಹೂವುಗಳನ್ನು ನೆಟ್ಟಿರುತ್ತಾರೋ ಅವರು ಗೆದ್ದಂತೆ. ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಸ್ನೇಹಿತ್ ಅವರು ತುಕಾಲಿ ಸಂತೋಷ್ ಅವರ ಮೈಮೇಲೆ ಬಿದ್ದ ಕಾರಣ ಗಲಾಟೆ ಶುರುವಾಯಿತು.

ಇದನ್ನೂ ಓದಿ: ಇನ್​ಸ್ಟಾಗ್ರಾಮ್​ನಲ್ಲಿ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡ ಸಂಗೀತಾ ಶೃಂಗೇರಿ

ಮೈಕೆಲ್ ಹೋಗಿ ಎದುರಾಳಿ ತಂಡದ ಹೂವುಗಳನ್ನು ಕಸಿದುಕೊಂಡರು. ಆ ಬಳಿಕ ವಿನಯ್ ಬಂದು ಕಾರ್ತಿಕ್ ಅವರಿಂದ ಹೂವನ್ನು ಕಸಿದುಕೊಂಡರು. ಎರಡೂ ತಂಡಗಳ ಮಧ್ಯೆ ಇದೇ ರೀತಿಯ ಕಿತ್ತಾಟ ಮುಂದುವರಿಯಿತು. ಇದು ವೀಕ್ಷಕರ ಬೇಸರಕ್ಕೆ ಕಾರಣ ಆಗಿದೆ. ‘ಪ್ರತೀ ಬಾರಿ ಇದೇ ಡ್ರಾಮಾ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಅಪಸ್ವರ ತೆಗೆದಿದ್ದಾರೆ.

ಇದನ್ನೂ ಓದಿ: ವಿಕ್ಟಿಮ್ ಕಾರ್ಡ್​ ಪ್ಲೇ ಮಾಡ್ತಿದ್ದಾರೆ ಸಂಗೀತಾ? ನಟಿಯ ನಡೆಯಿಂದ ಅಭಿಮಾನಿಗಳಿಗೆ ಬೇಸರ

ಈ ಮೊದಲು ಕೂಡ ಇದೇ ಮಾದರಿಯ ಟಾಸ್ಕ್ ನೀಡಲಾಗಿತ್ತು. ಆಗಲೂ ಎರಡೂ ತಂಡದವರು ಕಿತ್ತಾಡಿಕೊಂಡಿದ್ದರು. ಟಾಸ್ಕ್ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಈಗಲೂ ಹಾಗೆಯೇ ಆಗಿದೆ. ಒಂದು ಟಾಸ್ಕ್ ಮಾಡಬೇಕಾದರೆ ಅದಕ್ಕೆ ಸಾಕಷ್ಟು ಜನರ ಶ್ರಮ ಇರುತ್ತದೆ. ಸ್ಪರ್ಧಿಗಳು ಆ ಶ್ರಮವನ್ನು ಹಾಳು ಮಾಡಿಬಿಡುತ್ತಾರೆ. ಈ ವಿಚಾರದಲ್ಲಿ ಸುದೀಪ್ ಅವರು ವೀಕೆಂಡ್​ನಲ್ಲಿ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ. ಕರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ‘ಬಿಗ್ ಬಾಸ್’ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?