AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 10: ‘ಬಿಗ್ ಬಾಸ್ ಕನ್ನಡ’ ಫಿನಾಲೆಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ಸಂಪೂರ್ಣ

Kannada Serials TRP: ಫಿನಾಲೆ ವೀಕ್​​ನ ಶನಿವಾರದ ಎಪಿಸೋಡ್​ನಲ್ಲಿ ಆರು ಮಂದಿಯಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಯಿತು. ಈ ಎಪಿಸೋಡ್​ನಲ್ಲಿ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಕೂಡ ಇದ್ದವು. ಈ ಎಪಿಸೋಡ್​ಗೆ 10.3 ಟಿವಿಆರ್ ಸಿಕ್ಕಿದೆ. ಭಾನುವಾರ 12.6 ಟಿಆರ್​ಪಿ ಸಿಕ್ಕಿದೆ. ಎರಡೂ ದಿನಗಳ ಟಿಆರ್​ಪಿ ಸರಾಸರಿ ತೆಗೆದಾಗ 11.4 ಟಿವಿಆರ್ ಆಗಲಿದೆ.

BBK 10: ‘ಬಿಗ್ ಬಾಸ್ ಕನ್ನಡ’ ಫಿನಾಲೆಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ಸಂಪೂರ್ಣ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Feb 09, 2024 | 11:26 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಪೂರ್ಣಗೊಂಡು ಕೆಲವು ವಾರ ಕಳೆದರೂ ಇನ್ನೂ ಆ ಬಗ್ಗೆ ಶುರುವಾಗಿರೋ ಚರ್ಚೆ ನಿಂತಿಲ್ಲ. ಈ ರಿಯಾಲಿಟಿ ಶೋ ಫಿನಾಲೆ ಸಂದರ್ಭದಲ್ಲಿ ಭರ್ಜರಿ ಟಿಆರ್​ಪಿ ಪಡೆದುಕೊಂಡಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಇದು ಅತಿ ಹೆಚ್ಚು ಟಿಆರ್​ಪಿ ಸಿಕ್ಕ ಫಿನಾಲೆ ಎನ್ನಲಾಗಿದೆ. ಶನಿವಾರ (ಜನವರಿ 27) ಹಾಗೂ ಭಾನುವಾರ (ಜನವರಿ 28) ಎರಡೂ ದಿನ ಉತ್ತಮ ಟಿಆರ್​ಪಿ ಸಿಕ್ಕಿದೆ. ಈ ಬಾರಿಯ ಶೋಗೆ ಅಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿತ್ತು. ಆ ಬಗ್ಗೆ ಇಲ್ಲಿದೆ ವಿವರ.

ಜನವರಿ 27ರ ಎಪಿಸೋಡ್​ನಲ್ಲಿ ಆರು ಮಂದಿಯಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಯಿತು. ಈ ಎಪಿಸೋಡ್​ನಲ್ಲಿ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಇದ್ದವು. ಶನಿವಾರದ ಎಪಿಸೋಡ್​ಗೆ 10.3 ಟಿವಿಆರ್ ಸಿಕ್ಕಿದೆ. ಭಾನುವಾರ 12.6 ಟಿವಿಆರ್ ಸಿಕ್ಕಿದೆ. ಎರಡೂ ದಿನಗಳ ಟಿಆರ್​ಪಿ ಸರಾಸರಿ ತೆಗೆದಾಗ 11.4 ಟಿವಿಆರ್ ಆಗಲಿದೆ. ಈ ಮೂಲಕ ಒಳ್ಳೆಯ ಟಿಆರ್​ಪಿಯೊಂದಿಗೆ ಬಿಗ್ ಬಾಸ್ ಕೊನೆಗೊಂಡಂತೆ ಆಗಿದೆ.

ನಗರ ಭಾಗದ ಟಿಆರ್​ಪಿ ಪರಿಗಣಿಸಿದರೆ ಮೊದಲ ಸ್ಥಾನದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಇದೆ. ಇದು ಧಾರಾವಾಹಿ ತಂಡದ ಖುಷಿ ಹೆಚ್ಚಿಸಿದೆ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಸಂಪೂರ್ಣ ಕರ್ನಾಟಕ ಪರಿಗಣಿಸಿದರೆ ಈ ಧಾರಾವಾಹಿಗೆ ಮೊದಲ ಸ್ಥಾನ ಹಾಗೂ ‘ಲಕ್ಷ್ಮಿ ನಿವಾಸ’ ಎರಡನೇ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ಸಿನಿಮಾ ಮಾಡ್ತಾರೆ ವರ್ತೂರು ಸಂತೋಷ್; ಸೂಚನೆ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಕೂಡ ಸಮಾನ ಟಿಆರ್​ಪಿ ಪಡೆದು ಎರಡನೇ ಸ್ಥಾನದಲ್ಲಿ ಇದೆ. ಸುಧಾರಾಣಿ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಸಂದರ್ಭದಲ್ಲೇ ‘ಬಿಗ್ ಬಾಸ್’ ಪ್ರಸಾರ ಕಾಣುತ್ತಿತ್ತು. ಈ ಕಾರಣಕ್ಕೆ ‘ಸಿತಾ ರಾಮ’ ಧಾರಾವಾಹಿಗೆ ಟಿಆರ್​ಪಿ ಕಡಿಮೆ ಆಗಿತ್ತು. ಈಗ ವೀಕ್ಷಕರು ಮರಳಿದ್ದಾರೆ. ಈ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ‘ಸತ್ಯ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಹಾಗೂ ‘ಭಾಗ್ಯಲಕ್ಷ್ಮಿ’ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ