AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 10: ‘ಬಿಗ್ ಬಾಸ್ ಕನ್ನಡ’ ಫಿನಾಲೆಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ಸಂಪೂರ್ಣ

Kannada Serials TRP: ಫಿನಾಲೆ ವೀಕ್​​ನ ಶನಿವಾರದ ಎಪಿಸೋಡ್​ನಲ್ಲಿ ಆರು ಮಂದಿಯಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಯಿತು. ಈ ಎಪಿಸೋಡ್​ನಲ್ಲಿ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಕೂಡ ಇದ್ದವು. ಈ ಎಪಿಸೋಡ್​ಗೆ 10.3 ಟಿವಿಆರ್ ಸಿಕ್ಕಿದೆ. ಭಾನುವಾರ 12.6 ಟಿಆರ್​ಪಿ ಸಿಕ್ಕಿದೆ. ಎರಡೂ ದಿನಗಳ ಟಿಆರ್​ಪಿ ಸರಾಸರಿ ತೆಗೆದಾಗ 11.4 ಟಿವಿಆರ್ ಆಗಲಿದೆ.

BBK 10: ‘ಬಿಗ್ ಬಾಸ್ ಕನ್ನಡ’ ಫಿನಾಲೆಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ಸಂಪೂರ್ಣ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Feb 09, 2024 | 11:26 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಪೂರ್ಣಗೊಂಡು ಕೆಲವು ವಾರ ಕಳೆದರೂ ಇನ್ನೂ ಆ ಬಗ್ಗೆ ಶುರುವಾಗಿರೋ ಚರ್ಚೆ ನಿಂತಿಲ್ಲ. ಈ ರಿಯಾಲಿಟಿ ಶೋ ಫಿನಾಲೆ ಸಂದರ್ಭದಲ್ಲಿ ಭರ್ಜರಿ ಟಿಆರ್​ಪಿ ಪಡೆದುಕೊಂಡಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಇದು ಅತಿ ಹೆಚ್ಚು ಟಿಆರ್​ಪಿ ಸಿಕ್ಕ ಫಿನಾಲೆ ಎನ್ನಲಾಗಿದೆ. ಶನಿವಾರ (ಜನವರಿ 27) ಹಾಗೂ ಭಾನುವಾರ (ಜನವರಿ 28) ಎರಡೂ ದಿನ ಉತ್ತಮ ಟಿಆರ್​ಪಿ ಸಿಕ್ಕಿದೆ. ಈ ಬಾರಿಯ ಶೋಗೆ ಅಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿತ್ತು. ಆ ಬಗ್ಗೆ ಇಲ್ಲಿದೆ ವಿವರ.

ಜನವರಿ 27ರ ಎಪಿಸೋಡ್​ನಲ್ಲಿ ಆರು ಮಂದಿಯಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಯಿತು. ಈ ಎಪಿಸೋಡ್​ನಲ್ಲಿ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಇದ್ದವು. ಶನಿವಾರದ ಎಪಿಸೋಡ್​ಗೆ 10.3 ಟಿವಿಆರ್ ಸಿಕ್ಕಿದೆ. ಭಾನುವಾರ 12.6 ಟಿವಿಆರ್ ಸಿಕ್ಕಿದೆ. ಎರಡೂ ದಿನಗಳ ಟಿಆರ್​ಪಿ ಸರಾಸರಿ ತೆಗೆದಾಗ 11.4 ಟಿವಿಆರ್ ಆಗಲಿದೆ. ಈ ಮೂಲಕ ಒಳ್ಳೆಯ ಟಿಆರ್​ಪಿಯೊಂದಿಗೆ ಬಿಗ್ ಬಾಸ್ ಕೊನೆಗೊಂಡಂತೆ ಆಗಿದೆ.

ನಗರ ಭಾಗದ ಟಿಆರ್​ಪಿ ಪರಿಗಣಿಸಿದರೆ ಮೊದಲ ಸ್ಥಾನದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಇದೆ. ಇದು ಧಾರಾವಾಹಿ ತಂಡದ ಖುಷಿ ಹೆಚ್ಚಿಸಿದೆ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಸಂಪೂರ್ಣ ಕರ್ನಾಟಕ ಪರಿಗಣಿಸಿದರೆ ಈ ಧಾರಾವಾಹಿಗೆ ಮೊದಲ ಸ್ಥಾನ ಹಾಗೂ ‘ಲಕ್ಷ್ಮಿ ನಿವಾಸ’ ಎರಡನೇ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ಸಿನಿಮಾ ಮಾಡ್ತಾರೆ ವರ್ತೂರು ಸಂತೋಷ್; ಸೂಚನೆ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಕೂಡ ಸಮಾನ ಟಿಆರ್​ಪಿ ಪಡೆದು ಎರಡನೇ ಸ್ಥಾನದಲ್ಲಿ ಇದೆ. ಸುಧಾರಾಣಿ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಸಂದರ್ಭದಲ್ಲೇ ‘ಬಿಗ್ ಬಾಸ್’ ಪ್ರಸಾರ ಕಾಣುತ್ತಿತ್ತು. ಈ ಕಾರಣಕ್ಕೆ ‘ಸಿತಾ ರಾಮ’ ಧಾರಾವಾಹಿಗೆ ಟಿಆರ್​ಪಿ ಕಡಿಮೆ ಆಗಿತ್ತು. ಈಗ ವೀಕ್ಷಕರು ಮರಳಿದ್ದಾರೆ. ಈ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ‘ಸತ್ಯ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಹಾಗೂ ‘ಭಾಗ್ಯಲಕ್ಷ್ಮಿ’ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು