AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 10: ‘ಬಿಗ್ ಬಾಸ್ ಕನ್ನಡ’ ಫಿನಾಲೆಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ಸಂಪೂರ್ಣ

Kannada Serials TRP: ಫಿನಾಲೆ ವೀಕ್​​ನ ಶನಿವಾರದ ಎಪಿಸೋಡ್​ನಲ್ಲಿ ಆರು ಮಂದಿಯಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಯಿತು. ಈ ಎಪಿಸೋಡ್​ನಲ್ಲಿ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಕೂಡ ಇದ್ದವು. ಈ ಎಪಿಸೋಡ್​ಗೆ 10.3 ಟಿವಿಆರ್ ಸಿಕ್ಕಿದೆ. ಭಾನುವಾರ 12.6 ಟಿಆರ್​ಪಿ ಸಿಕ್ಕಿದೆ. ಎರಡೂ ದಿನಗಳ ಟಿಆರ್​ಪಿ ಸರಾಸರಿ ತೆಗೆದಾಗ 11.4 ಟಿವಿಆರ್ ಆಗಲಿದೆ.

BBK 10: ‘ಬಿಗ್ ಬಾಸ್ ಕನ್ನಡ’ ಫಿನಾಲೆಗೆ ಸಿಕ್ಕ ಟಿಆರ್​ಪಿ ಎಷ್ಟು? ಇಲ್ಲಿದೆ ಸಂಪೂರ್ಣ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Feb 09, 2024 | 11:26 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಪೂರ್ಣಗೊಂಡು ಕೆಲವು ವಾರ ಕಳೆದರೂ ಇನ್ನೂ ಆ ಬಗ್ಗೆ ಶುರುವಾಗಿರೋ ಚರ್ಚೆ ನಿಂತಿಲ್ಲ. ಈ ರಿಯಾಲಿಟಿ ಶೋ ಫಿನಾಲೆ ಸಂದರ್ಭದಲ್ಲಿ ಭರ್ಜರಿ ಟಿಆರ್​ಪಿ ಪಡೆದುಕೊಂಡಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಇದು ಅತಿ ಹೆಚ್ಚು ಟಿಆರ್​ಪಿ ಸಿಕ್ಕ ಫಿನಾಲೆ ಎನ್ನಲಾಗಿದೆ. ಶನಿವಾರ (ಜನವರಿ 27) ಹಾಗೂ ಭಾನುವಾರ (ಜನವರಿ 28) ಎರಡೂ ದಿನ ಉತ್ತಮ ಟಿಆರ್​ಪಿ ಸಿಕ್ಕಿದೆ. ಈ ಬಾರಿಯ ಶೋಗೆ ಅಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿತ್ತು. ಆ ಬಗ್ಗೆ ಇಲ್ಲಿದೆ ವಿವರ.

ಜನವರಿ 27ರ ಎಪಿಸೋಡ್​ನಲ್ಲಿ ಆರು ಮಂದಿಯಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಯಿತು. ಈ ಎಪಿಸೋಡ್​ನಲ್ಲಿ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಇದ್ದವು. ಶನಿವಾರದ ಎಪಿಸೋಡ್​ಗೆ 10.3 ಟಿವಿಆರ್ ಸಿಕ್ಕಿದೆ. ಭಾನುವಾರ 12.6 ಟಿವಿಆರ್ ಸಿಕ್ಕಿದೆ. ಎರಡೂ ದಿನಗಳ ಟಿಆರ್​ಪಿ ಸರಾಸರಿ ತೆಗೆದಾಗ 11.4 ಟಿವಿಆರ್ ಆಗಲಿದೆ. ಈ ಮೂಲಕ ಒಳ್ಳೆಯ ಟಿಆರ್​ಪಿಯೊಂದಿಗೆ ಬಿಗ್ ಬಾಸ್ ಕೊನೆಗೊಂಡಂತೆ ಆಗಿದೆ.

ನಗರ ಭಾಗದ ಟಿಆರ್​ಪಿ ಪರಿಗಣಿಸಿದರೆ ಮೊದಲ ಸ್ಥಾನದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಇದೆ. ಇದು ಧಾರಾವಾಹಿ ತಂಡದ ಖುಷಿ ಹೆಚ್ಚಿಸಿದೆ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಸಂಪೂರ್ಣ ಕರ್ನಾಟಕ ಪರಿಗಣಿಸಿದರೆ ಈ ಧಾರಾವಾಹಿಗೆ ಮೊದಲ ಸ್ಥಾನ ಹಾಗೂ ‘ಲಕ್ಷ್ಮಿ ನಿವಾಸ’ ಎರಡನೇ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ಸಿನಿಮಾ ಮಾಡ್ತಾರೆ ವರ್ತೂರು ಸಂತೋಷ್; ಸೂಚನೆ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಕೂಡ ಸಮಾನ ಟಿಆರ್​ಪಿ ಪಡೆದು ಎರಡನೇ ಸ್ಥಾನದಲ್ಲಿ ಇದೆ. ಸುಧಾರಾಣಿ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಸಂದರ್ಭದಲ್ಲೇ ‘ಬಿಗ್ ಬಾಸ್’ ಪ್ರಸಾರ ಕಾಣುತ್ತಿತ್ತು. ಈ ಕಾರಣಕ್ಕೆ ‘ಸಿತಾ ರಾಮ’ ಧಾರಾವಾಹಿಗೆ ಟಿಆರ್​ಪಿ ಕಡಿಮೆ ಆಗಿತ್ತು. ಈಗ ವೀಕ್ಷಕರು ಮರಳಿದ್ದಾರೆ. ಈ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ‘ಸತ್ಯ’ ಧಾರಾವಾಹಿಗೆ ನಾಲ್ಕನೇ ಸ್ಥಾನ ಹಾಗೂ ‘ಭಾಗ್ಯಲಕ್ಷ್ಮಿ’ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?