AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ಬಿಗ್ ಬಾಸ್’ ಕೊಡ್ತಿರೋ ಕಾಟಕ್ಕೆ ಸ್ಪರ್ಧಿಗಳು ಸುಸ್ತೋ ಸುಸ್ತು

ಬಿಗ್ ಬಾಸ್​ನಲ್ಲಿ ಈ ವಾರ ಪೌಸ್ ಆ್ಯಂಡ್ ಪ್ಲೇ ಚಟುವಟಿಕೆ ನೀಡಲಾಗಿದೆ. ಪೌಸ್ ಎಂದಾಗ ಎಲ್ಲಾ ಸ್ಪರ್ಧಿಗಳು ಸೈಲೆಂಟ್ ಆಗಿ ನಿಲ್ಲಬೇಕು. ತುಕಾಲಿ ಸಂತೋಷ್​ ಅವರಿಗೆ ಬಿಗ್ ಬಾಸ್ ಸಾಕಷ್ಟು ಕಾಟ ನೀಡಿದ್ದಾರೆ.

Bigg Boss Kannada: ‘ಬಿಗ್ ಬಾಸ್’ ಕೊಡ್ತಿರೋ ಕಾಟಕ್ಕೆ ಸ್ಪರ್ಧಿಗಳು ಸುಸ್ತೋ ಸುಸ್ತು
ತುಕಾಲಿ ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Dec 28, 2023 | 7:37 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ನಲ್ಲಿ ಇಷ್ಟು ದಿನ ಸ್ಪರ್ಧಿಗಳು ಬಿಗ್ ಬಾಸ್​ಗೆ ಟಾರ್ಚರ್ ನೀಡುತ್ತಿದ್ದರು. ಏನೇ ಆದರೂ ಬಿಗ್ ಬಾಸ್​ನ (Bigg Boss) ಕರೆದು ದೂರು ನೀಡುತ್ತಿದ್ದರು. ಆದರೆ, ಈಗ ಸ್ಪರ್ಧಿಗಳಿಗೇ ಬಿಗ್ ಬಾಸ್ ಕಾಟ ಕೊಡುತ್ತಿದ್ದಾರೆ. ಈ ಕಾಟವನ್ನು ತಡೆದುಕೊಳ್ಳಲಾಗದೇ ಸ್ಪರ್ಧಿಗಳು ಸುಸ್ತಾಗಿದ್ದಾರೆ. ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಸ್ಪರ್ಧಿಗಳಿದ್ದಾರೆ. ಅಷ್ಟಕ್ಕೂ ದೊಡ್ಮನೆಯಲ್ಲಿ ಆಗುತ್ತಿರುವುದು ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್​ನಲ್ಲಿ ಈ ವಾರ ಪೌಸ್ ಆ್ಯಂಡ್ ಪ್ಲೇ ಚಟುವಟಿಕೆ ನೀಡಲಾಗಿದೆ. ಪೌಸ್ ಎಂದಾಗ ಎಲ್ಲಾ ಸ್ಪರ್ಧಿಗಳು ಸೈಲೆಂಟ್ ಆಗಿ ನಿಲ್ಲಬೇಕು. ಪ್ಲೇ ಎಂದಾಗ ಮುಂದುವರಿಯಬೇಕು. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಡಿಸೆಂಬರ್ 27ರಂದು ಪ್ರಸಾರವಾದ ಎಪಿಸೋಡ್​ನಲ್ಲಿ ಸ್ಪರ್ಧಿಗಳು ಸುಸ್ತಾಗಿದ್ದಾರೆ.  ತುಕಾಲಿ ಸಂತೋಷ್​ ಅವರಿಗೆ ಬಿಗ್ ಬಾಸ್ ಸಾಕಷ್ಟು ಕಾಟ ನೀಡಿದ್ದಾರೆ.

ವರ್ಕೌಟ್ ಏರಿಯಾಗೆ ತುಕಾಲಿ ಸಂತೋಷ್ ಎಂದಿಗೂ ತೆರಳಿದವರಲ್ಲ. ಆದಾಗ್ಯೂ ಅವರು ಅಲ್ಲಿಗೆ ಹೋದರು. ವಿನಯ್ ಹಾಗೂ ಕಾರ್ತಿಕ್ ಬಳಿ ವರ್ಕೌಟ್ ಹೇಳಿಸಿಕೊಳ್ಳುತ್ತಿದ್ದರು. ಆಗಲೇ ಬಿಗ್ ಬಾಸ್ ತುಕಾಲಿ ಸಂತೋಷ್​ಗೆ ಪೌಸ್ ಎಂದರು. ಬಿಸಿಲು ಇದ್ದಿದ್ದರಿಂದ ಸಂತೋಷ್ ಕಾಲು ಸುಡುತ್ತಿತ್ತು. ಹೀಗಾಗಿ, ನೀರು ತಂದು ಹಾಕುವಂತೆ ಅವರು ಕೋರಿದರು. ಕಾರ್ತಿಕ್ ಆರಂಭದಲ್ಲಿ ಕಾಲಿಗೆ ನೀರು ತಂದು ಹಾಕಿದರು.

ಆ ಬಳಿಕ ಹಿಂಭಾಗಕ್ಕೆ ನೀರು ಹಾಕುವ ಪ್ರಯತ್ನಕ್ಕೆ ಮುಂದಾದರು. ಇನ್ನೇನು ನೀರು ಹಾಕಬೇಕು ಎನ್ನುವಾಗ ಬಿಗ್ ಬಾಸ್ ಪೌಸ್ ಎಂದರು. ಆ ಬಳಿಕ ಅಲ್ಲಿಯೇ ಇದ್ದ ವಿನಯ್ ಹಾಗೂ ಮೈಕಲ್ ಅವರು ನೀರು ಹಾಕಲು ಮುಂದಾದರು ಅವರಿಗೂ ಪೌಸ್ ಎಂದರು ಬಿಗ್ ಬಾಸ್.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪತ್ನಿ ಕೊಟ್ಟ ಮಾತಿನ ಪೆಟ್ಟಿಗೆ ಕಂಗಾಲಾದ ತುಕಾಲಿ ಸಂತೋಷ್

ಈ ಘಟನೆ ನೋಡಲು ಒಳಗಿನಿಂದ ಮಹಿಳಾ ಸ್ಪರ್ಧಿಗಳು ಬಂದರು. ಅವರು ಕೂಡ ನೀರು ಹಾಕುವ ಪ್ರಯತ್ನಕ್ಕೆ ಮುಂದಾದರು. ಅವರಿಗೂ ಪೌಸ್ ಬಿತ್ತು. ಸದ್ಯ ಬಿಗ್ ಬಾಸ್ ಮನೆಯಲ್ಲಿ ಪೌಸ್, ಪ್ಲೇ ಆಟ ಸಾಕಷ್ಟು ಫನ್ ನೀಡುತ್ತಿದೆ. ಸ್ಪರ್ಧಿಗಳು ಇದರಿಂದ ಸುಸ್ತಾಗಿದ್ದಾರೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಶೋ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು