AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಲ್ಲೇ ಪ್ಯಾಂಟ್​ ಬಿಚ್ಚಲಾ, ಚೆಡ್ಡಿ ಬಿಚ್ಚಲಾ ಎಂದು ಕೇಳ್ತಾರೆ’; ಜಗದೀಶ್ ಬಗ್ಗೆ ಹಂಸಾ ಅಸಮಾಧಾನ

ಬ್ಲೈಂಡ್ಸ್ ಡೌನ್ ಆದಾಗ ಅದರಲ್ಲಿ ಇಣುಕಿ ಯಾರೂ ನೋಡಬಾರದು ಎಂಬುದು ಬಿಗ್ ಬಾಸ್​ನ ಮೂಲ ನಿಯಮ. ಈ ನಿಯಮಗಳನ್ನು ಮುರಿದರೆ ಬಿಗ್ ಬಾಸ್ ಎಂದಿಗೂ ಸಹಿಸೋದಿಲ್ಲ. ಈಗ ದೊಡ್ಮನೆಯಲ್ಲಿ ಈ ಘಟನೆ ನಡೆದು ಹೋಗಿದೆ. ಮಾನಸಾ, ಶಿಶಿರ್ ಹಾಗೂ ಮೋಕ್ಷಿತಾ ಅವರು ಬ್ಲೈಂಡ್ಸ್ ಡೌನ್ ಆದಾಗ ಇಣುಕಿ ನೋಡಿದ್ದರು. ಇದಕ್ಕೆ ಶಿಕ್ಷೆ ಸಿಕ್ಕಿದೆ.

‘ಇಲ್ಲೇ ಪ್ಯಾಂಟ್​ ಬಿಚ್ಚಲಾ, ಚೆಡ್ಡಿ ಬಿಚ್ಚಲಾ ಎಂದು ಕೇಳ್ತಾರೆ’; ಜಗದೀಶ್ ಬಗ್ಗೆ ಹಂಸಾ ಅಸಮಾಧಾನ
ಹಂಸ-ಜಗದೀಶ್
ರಾಜೇಶ್ ದುಗ್ಗುಮನೆ
|

Updated on:Oct 09, 2024 | 8:41 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹಂಸ ಅವರ ಅತಿರೇಕದ ವರ್ತನೆ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರು ಎಲ್ಲರ ವಿರುದ್ಧ ಸಿಡಿದೆದ್ದಿದ್ದಾರೆ. ಸುಖಾಸುಮ್ಮನೆ ಕಿರಿಕ್ ಮಾಡಿಕೊಳ್ಳುತ್ತಾರೆ. ಹಂಸ ಬಗ್ಗೆ ಅವರಿಗೆ ಸಾಕಷ್ಟು ಅಸಮಾಧಾನ ಇದೆ. ಹೀಗಿರುವಾಗಲೇ ಹಂಸ ಅವರು ನೀಡಿರೋ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಬ್ಲೈಂಡ್ಸ್ ಡೌನ್ ಆದಾಗ ಅದರಲ್ಲಿ ಇಣುಕಿ ಯಾರೂ ನೋಡಬಾರದು ಎಂಬುದು ಬಿಗ್ ಬಾಸ್​ನ ಮೂಲ ನಿಯಮ. ಈ ನಿಯಮಗಳನ್ನು ಮುರಿದರೆ ಬಿಗ್ ಬಾಸ್ ಎಂದಿಗೂ ಸಹಿಸೋದಿಲ್ಲ. ಈಗ ದೊಡ್ಮನೆಯಲ್ಲಿ ಈ ಘಟನೆ ನಡೆದು ಹೋಗಿದೆ. ಮಾನಸಾ, ಶಿಶಿರ್ ಹಾಗೂ ಮೋಕ್ಷಿತಾ ಅವರು ಬ್ಲೈಂಡ್ಸ್ ಡೌನ್ ಆದಾಗ ಇಣುಕಿ ನೋಡಿದ್ದರು. ಅದೇ ರೀತಿ ಜಗದೀಶ್ ಅವರು ಬ್ಲೈಂಡ್ಸ್ ಒಳಗೆ ಹೋಗಿ ಡ್ರೆಸ್ ಚೇಂಜ್ ಮಾಡಿಕೊಂಡಿದ್ದಾರೆ.

‘ಬಟ್ಟೆ ಚೇಂಜ್ ಮಾಡುವ ಕಾರಣಕ್ಕೆ ನಾನು ಬ್ಲೈಂಡ್ಸ್ ಒಳಗೆ ಹೋಗಿದ್ದೆ. ನಾನು ಅಲ್ಲಿ ಏನನ್ನೂ ನೋಡಿಲ್ಲ’ ಎಂದು ಜಗದೀಶ್ ಅವರು ಹೇಳಿದರು. ‘ಬೇರೆಯವರಿಗೆ ತೊಂದರೆ ಕೊಡೋದು ಬೇಡ. ನಿಮಗೆ ನೀವು ಏನು ಬೇಕಾದರೂ ಮಾಡಿಕೊಳ್ಳಿ. ಬೇಕಿದ್ರೆ ಬಿಗ್ ಬಾಸ್​ಗೆ ಹೇಳಿ ಚಾಕು ಬೇಕಿದ್ದರೂ ಹಾಕಿಕೊಳ್ಳಿ’ ಎಂದು ಉಗ್ರಂ ಮಂಜು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ

ಆ ಬಳಿಕ ಮಾತನಾಡಿದ ಹಂಸ, ‘ನಾನು ಎಷ್ಟು ಅಂತ ಹೇಳೋದು? ಕೇಳಿದ್ರೆ ಇಲ್ಲೇ ಪ್ಯಾಂಟ್​ ಬಿಚ್ಚಲಾ, ಚೆಡ್ಡಿ ಬಿಚ್ಚಲಾ’ ಎಂದು ಕೇಳ್ತಾರೆ ಎದು ಅಸಮಾಧಾನ ಹೊರಹಾಕಿದ್ದಾರೆ. ಇದು ಜಗದೀಶ್ ಅವರಿಗೆ ಹೇಳಿದ ಮಾತು. ಜಗದೀಶ್ ಅವರು ಹಂಸಗೆ ಟಾರ್ಚರ್ ನೀಡಲೇಬೇಕು ಎನ್ನವು ನಿರ್ಧಾರಕ್ಕೆ ಬಂದಿದ್ದಾರೆ. ಈ ಕಾರಣದಿಂದ ಅವರು ಈ ರೀತಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:40 am, Wed, 9 October 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ