AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಹೇಳಿದರೂ ಬದಲಾಗದ ಮನೆ ಮಂದಿ; ಮತ್ತದೇ ಹಾಡು

ಬಿಗ್ ಬಾಸ್ ಕನ್ನಡದಲ್ಲಿ ಸ್ಪರ್ಧಿಗಳು ಹಿಂದಿನ ತಪ್ಪುಗಳ ಆಧಾರದ ಮೇಲೆ ನಾಮಿನೇಷನ್ ಮಾಡುತ್ತಿದ್ದರು. ಇದನ್ನು ಕಿಚ್ಚ ಸುದೀಪ್ ತೀವ್ರವಾಗಿ ಖಂಡಿಸಿದ್ದರು. ಆದರೆ, ಸ್ಪರ್ಧಿಗಳು ಮತ್ತದೇ ತಪ್ಪನ್ನು ಮಾಡಿದ್ದಾರೆ.

ಸುದೀಪ್ ಹೇಳಿದರೂ ಬದಲಾಗದ ಮನೆ ಮಂದಿ; ಮತ್ತದೇ ಹಾಡು
ಕಿಚ್ಚ ಸುದೀಪ್
ರಾಜೇಶ್ ದುಗ್ಗುಮನೆ
|

Updated on: Nov 27, 2024 | 7:27 AM

Share

ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಸ್ಪರ್ಧಿಗಳು ಎಡವಿದಾಗ, ತಪ್ಪು ಮಾಡಿದಾಗ ಅದನ್ನು ತಿದ್ದುವ ಪ್ರಯತ್ನ ಮಾಡುತ್ತಾರೆ. ಕಳೆದ ವಾರ ಸುದೀಪ್ ಅವರು ಬಿಗ್ ಬಾಸ್ ಮನೆ ಮಂದಿಗೆ ಒಂದು ವಿಚಾರವನ್ನು ಖಡಕ್ ಆಗಿ ಹೇಳಿದ್ದರು. ಬೇರೆಯವರ ಮಧ್ಯೆ ಏನೋ ಆಗಿದೆ ಎಂದಾಗ ಆ ವಿಚಾರ ಇಟ್ಟುಕೊಂಡು ನಾಮಿನೇಟ್ ಮಾಡಬೇಡಿ ಎಂದು ಸುದೀಪ್ ಹೇಳಿದ್ದರು. ಈ ವಾರ ಮತ್ತದೇ ಕಾರಣ ನೀಡಿ ಎಲ್ಲರೂ ನಾಮಿನೇಷನ್ ಪ್ರಕ್ರಿಯೆ ನಡೆಸಿದ್ದಾರೆ.

ಕಳೆದ ವಾರ ರಜತ್ ಅವರು ಸುರೇಶ್​ಗೆ ಕೆಟ್ಟ ಪದ ಬಳಕೆ ಮಾಡಿದರು. ಈ ವಿಚಾರವನ್ನೇ ಇಟ್ಟುಕೊಂಡು ಎಲ್ಲರೂ ಕಳಪೆ ನೀಡುವ ಕೆಲಸ ಮಾಡಿದ್ದಾರೆ. ‘ಸುರೇಶ್​ಗೆ ರಜತ್ ಆ ರೀತಿ ಹೇಳಿದ್ದು ಬೇಸರ ಮೂಡಿಸಿದೆ’ ಎಂದು ಹೇಳುವ ಮೂಲಕ ಕಳಪೆ ನೀಡಿದ್ದರು. ಈ ವಿಚಾರವನ್ನು ಸುದೀಪ್ ಅವರು ವೀಕೆಂಡ್​ನಲ್ಲಿ ಪ್ರಸ್ತಾಪ ಮಾಡಿದ್ದರು.

ಇದನ್ನೂ ಓದಿ: ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

‘ನಿಮಗೆ ಏನಾದರೂ ತೊಂದರೆ ಆಗಿದ್ದರೆ ಹೇಳಿ. ಆ ವ್ಯಕ್ತಿಯಿಂದ ನಿಮಗೆ ಬೇಸರ ಆಗಿದ್ದರೆ ಹೇಳಿ. ಇಬ್ಬರ ಮಧ್ಯೆ ಜಗಳ ನಡೆದು, ಅದು ಗಾರ್ಡನ್ ಏರಿಯಾದಲ್ಲಿ ಪರಸ್ಪರ ಮಾತನಾಡಿಕೊಂಡು ಬಗೆಹರಿದಿರಬಹುದು. ಅದು ನಿಮಗೆ ಗೊತ್ತಿಲ್ಲದೆ ಇರಬಹುದು. ಹೀಗಿರುವಾಗ ಅದನ್ನೇ ಕಾರಣ ನೀಡೋದು ಸರಿ ಅಲ್ಲ. ಹೀಗಾಗಿ, ಈ ರೀತಿಯ ಕಾರಣ ನೀಡಿ ನಾಮಿನೇಟ್ ಮಾಡೋದು ತಪ್ಪು. ನೀವು ಜೋಕರ್​ಗಳ ರೀತಿ ಕಾಣುತ್ತೀರಿ’ ಎಂದು ಸುದೀಪ್ ಹೇಳಿದ್ದರು. ಈ ವಾರ ಮತ್ತದೇ ರಿಪೀಟ್ ಆಗಿದೆ.

ಹನುಮಂತ ಅವರು ಸುರೇಶ್ ಅವರನ್ನು ನಾಮಿನೇಟ್ ಮಾಡಿದರು. ‘ಕಳೆದ ವಾರ ಸುರೇಶ್ ಅವರು ಆಟದಿಂದ ಅರ್ಧಕ್ಕೆ ನಡೆದಿದ್ದು ನನಗೆ ಇಷ್ಟ ಆಗಿಲ್ಲ’ ಎಂದಿದ್ದಾರೆ. ಸುರೇಶ್ ಅವರು ಹನುಮಂತ ಟೀಂನಲ್ಲೇ ಇರಲಿಲ್ಲ ಅನ್ನೋದು ಮೊದಲ ವಿಚಾರ ಆದರೆ, ಆ ಬಳಿಕ ಸುರೇಶ್ ತಪ್ಪನ್ನು ತಿದ್ದುಕೊಂಡು ಕ್ಷಮೆ ಕೇಳಿದ್ದರು ಎಂಬುದು ಎರಡನೇ ವಿಚಾರ. ಆದಾಗ್ಯೂ ಹನುಮಂತ ಅವರು ಸುರೇಶ್ ಹೆಸರನ್ನು ತೆಗೆದುಕೊಂಡರು. ಮೋಕ್ಷಿತಾ, ಚೈತ್ರಾ ಕುಂದಾಪುರ ಕೂಡ ತ್ರಿವಿಕ್ರಂ ಅವರನ್ನು ನಾಮಿನೇಟ್ ಮಾಡುವಾಗ ಇದೇ ರೀತಿಯ ಕಾರಣ ತೆಗೆದುಕೊಂಡರು. ಒಟ್ಟಾರೆ, ಬಹುತೇಕರು ಇದೇ ರೀತಿಯ ಕಾರಣ ನೀಡಿ ನಾಮಿನೇಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ