AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​

ಇಂಡಿಯನ್​ ಆರ್ಮಿ ಸಮವಸ್ತ್ರ ಧರಿಸಿರುವ ಕರ್ನಾಟಕ ಮೂಲದ ಯೋಧರೊಬ್ಬರು ಮಂಜು ಪರವಾಗಿ ವಿಡಿಯೋ ಮಾಡಿದ್ದಾರೆ. ಮಂಜು ಪಾವಗಡ ಅವರ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​
ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​
TV9 Web
| Edited By: |

Updated on: Jul 29, 2021 | 1:00 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ (Bigg Boss Kannada) ಆರಂಭದಿಂದಲೇ ಮಂಜು ಪಾವಗಡ (Manju Pavagada) ಮಿಂಚಲು ಆರಂಭಿಸಿದರು. ಫಿನಾಲೆಗೆ (Bigg Boss Finale) ಸ್ಪರ್ಧಿಸಲು ಅವರು ಸಮರ್ಥ ಕ್ಯಾಂಡಿಡೇಟ್​ ಎಂದು ಎಲ್ಲರೂ ಹೇಳುತ್ತ ಬಂದಿದ್ದಾರೆ. ಟಾಸ್ಕ್​ನಲ್ಲಿ ಅವರು ಹಿಂದೇಟು ಹಾಕಿದವರೇ ಅಲ್ಲ. ವೀಕ್ಷಕರನ್ನು ನಗಿಸುವಲ್ಲಿಯೂ ಅವರು ಹಿಂದೆ ಬಿದ್ದಿಲ್ಲ. ದಿವ್ಯಾ ಸುರೇಶ್​ ಜೊತೆ ಕಾಲ ಕಳೆಯುತ್ತ ಕೆಲವು ದಿನ ಅವರು ಡಲ್​ ಆಗಿದ್ದರು ಎಂಬುದು ಬಿಟ್ಟರೆ ಮಂಜು ಬಗ್ಗೆ ಬೇರೆ ಯಾವುದೇ ತಕರಾರು ಇಲ್ಲ. ಹಾಗಾಗಿ ಅವರಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಅಚ್ಚರಿ ಎಂದರೆ ಇಂಡಿಯನ್​ ಆರ್ಮಿ (Indian Army) ಕಡೆಯಿಂದಲೂ ಮಂಜುಗೆ ಶುಭ ಹಾರೈಕೆಗಳು ಬಂದಿವೆ.

ಕನ್ನಡ ಬಿಗ್​ ಬಾಸ್​ ಫಿನಾಲೆ ಸಮೀಪಿಸುತ್ತಿದೆ. ಹಾಗಾಗಿ ಎಲ್ಲ ಸ್ಪರ್ಧಿಗಳ ನಡುವೆ ಪೈಪೋಟಿ ಜೋರಾಗಿದೆ. ಯಾರು ಹೆಚ್ಚು ವೋಟ್​ ಪಡೆಯುತ್ತಾರೆ ಎಂಬುದರ ಆಧಾರದ ಮೇಲೆ ಫಿನಾಲೆಗೆ ಎಂಟ್ರಿ ಪಡೆಯುವವರ ಹಣೆಬರಹ ನಿರ್ಧಾರ ಆಗಲಿದೆ. ಆದ್ದರಿಂದ ಎಲ್ಲ ಸ್ಪರ್ಧಿಗಳ ಪರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ. ವಿಶೇಷ ಏನೆಂದರೆ, ಮಂಜುಗೆ ಭಾರತೀಯ ಸೇನೆಯ ಯೋಧರೊಬ್ಬರು ಬೆಂಬಲ ಸೂಚಿಸಿದ್ದಾರೆ.

ಇಂಡಿಯನ್​ ಆರ್ಮಿ ಸಮವಸ್ತ್ರ ಧರಿಸಿರುವ ಕರ್ನಾಟಕ ಮೂಲದ ಸೈನಿಕರೊಬ್ಬರು ಮಂಜು ಪರವಾಗಿ ವಿಡಿಯೋ ಮಾಡಿದ್ದಾರೆ. ‘ಸಮಸ್ತ ಕರ್ನಾಟಕ ಜನತೆಗೆ ನಮಸ್ತೆ. ಮಂಜು ಪಾವಗಡ ಅವರು ಬಿಗ್​ ಬಾಸ್​ ಮನೆಯಲ್ಲಿ ತುಂಬ ಚೆನ್ನಾಗಿ ಆಟ ಆಡುತ್ತಿದ್ದಾರೆ. ಅವರು ಫೈನಲ್​ನಲ್ಲಿ ಗೆದ್ದು ಬರಬೇಕು ಎಂದು ಇಂಡಿಯನ್​ ಆರ್ಮಿ ಕಡೆಯಿಂದ ಶುಭಕೋರುತ್ತಿದ್ದೇವೆ’ ಎಂದು ಆ ವಿಡಿಯೋದಲ್ಲಿ ಹೇಳಲಾಗಿದೆ. ಮಂಜು ಪಾವಗಡ ಅವರ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಪ್ರಸ್ತುತ ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಶುಭಾ ಪೂಂಜಾ, ದಿವ್ಯಾ ಸುರೇಶ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ಪ್ರಶಾಂತ್​ ಸಂಬರಗಿ, ಶಮಂತ್​ ಬ್ರೋ ಗೌಡ, ವೈಷ್ಣವಿ ಗೌಡ ನಡುವೆ ಪೈಪೋಟಿ ಮುಂದುವರಿದಿದೆ. ಆ.7 ಮತ್ತು 8ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಕಿಚ್ಚ ಸುದೀಪ್​ ಯಾರನ್ನು ವಿನ್ನರ್​ ಅಂತ ಘೋಷಿಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

ಅರವಿಂದ್​ಗೆ ಗೆಲುವಿನ ಮಾಲೆ, ಮಂಜು ರನ್ನರ್​ ಅಪ್​; ಇದು ಬಿಗ್​ ಬಾಸ್​ ಮನೆ ಭವಿಷ್ಯ

ದಿವ್ಯಾ ಉರುಡುಗ-ಅರವಿಂದ್ ಒಡನಾಟದಿಂದ ಮನೆಯವರಿಗೆ ಕಿರಿಕಿರಿ; ಎಲ್ಲರೆದುರು ಅಸಮಾಧಾನ ಹೊರಹಾಕಿದ ಶುಭಾ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ