AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​

ಇಂಡಿಯನ್​ ಆರ್ಮಿ ಸಮವಸ್ತ್ರ ಧರಿಸಿರುವ ಕರ್ನಾಟಕ ಮೂಲದ ಯೋಧರೊಬ್ಬರು ಮಂಜು ಪರವಾಗಿ ವಿಡಿಯೋ ಮಾಡಿದ್ದಾರೆ. ಮಂಜು ಪಾವಗಡ ಅವರ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​
ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​
TV9 Web
| Edited By: |

Updated on: Jul 29, 2021 | 1:00 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ (Bigg Boss Kannada) ಆರಂಭದಿಂದಲೇ ಮಂಜು ಪಾವಗಡ (Manju Pavagada) ಮಿಂಚಲು ಆರಂಭಿಸಿದರು. ಫಿನಾಲೆಗೆ (Bigg Boss Finale) ಸ್ಪರ್ಧಿಸಲು ಅವರು ಸಮರ್ಥ ಕ್ಯಾಂಡಿಡೇಟ್​ ಎಂದು ಎಲ್ಲರೂ ಹೇಳುತ್ತ ಬಂದಿದ್ದಾರೆ. ಟಾಸ್ಕ್​ನಲ್ಲಿ ಅವರು ಹಿಂದೇಟು ಹಾಕಿದವರೇ ಅಲ್ಲ. ವೀಕ್ಷಕರನ್ನು ನಗಿಸುವಲ್ಲಿಯೂ ಅವರು ಹಿಂದೆ ಬಿದ್ದಿಲ್ಲ. ದಿವ್ಯಾ ಸುರೇಶ್​ ಜೊತೆ ಕಾಲ ಕಳೆಯುತ್ತ ಕೆಲವು ದಿನ ಅವರು ಡಲ್​ ಆಗಿದ್ದರು ಎಂಬುದು ಬಿಟ್ಟರೆ ಮಂಜು ಬಗ್ಗೆ ಬೇರೆ ಯಾವುದೇ ತಕರಾರು ಇಲ್ಲ. ಹಾಗಾಗಿ ಅವರಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಅಚ್ಚರಿ ಎಂದರೆ ಇಂಡಿಯನ್​ ಆರ್ಮಿ (Indian Army) ಕಡೆಯಿಂದಲೂ ಮಂಜುಗೆ ಶುಭ ಹಾರೈಕೆಗಳು ಬಂದಿವೆ.

ಕನ್ನಡ ಬಿಗ್​ ಬಾಸ್​ ಫಿನಾಲೆ ಸಮೀಪಿಸುತ್ತಿದೆ. ಹಾಗಾಗಿ ಎಲ್ಲ ಸ್ಪರ್ಧಿಗಳ ನಡುವೆ ಪೈಪೋಟಿ ಜೋರಾಗಿದೆ. ಯಾರು ಹೆಚ್ಚು ವೋಟ್​ ಪಡೆಯುತ್ತಾರೆ ಎಂಬುದರ ಆಧಾರದ ಮೇಲೆ ಫಿನಾಲೆಗೆ ಎಂಟ್ರಿ ಪಡೆಯುವವರ ಹಣೆಬರಹ ನಿರ್ಧಾರ ಆಗಲಿದೆ. ಆದ್ದರಿಂದ ಎಲ್ಲ ಸ್ಪರ್ಧಿಗಳ ಪರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ. ವಿಶೇಷ ಏನೆಂದರೆ, ಮಂಜುಗೆ ಭಾರತೀಯ ಸೇನೆಯ ಯೋಧರೊಬ್ಬರು ಬೆಂಬಲ ಸೂಚಿಸಿದ್ದಾರೆ.

ಇಂಡಿಯನ್​ ಆರ್ಮಿ ಸಮವಸ್ತ್ರ ಧರಿಸಿರುವ ಕರ್ನಾಟಕ ಮೂಲದ ಸೈನಿಕರೊಬ್ಬರು ಮಂಜು ಪರವಾಗಿ ವಿಡಿಯೋ ಮಾಡಿದ್ದಾರೆ. ‘ಸಮಸ್ತ ಕರ್ನಾಟಕ ಜನತೆಗೆ ನಮಸ್ತೆ. ಮಂಜು ಪಾವಗಡ ಅವರು ಬಿಗ್​ ಬಾಸ್​ ಮನೆಯಲ್ಲಿ ತುಂಬ ಚೆನ್ನಾಗಿ ಆಟ ಆಡುತ್ತಿದ್ದಾರೆ. ಅವರು ಫೈನಲ್​ನಲ್ಲಿ ಗೆದ್ದು ಬರಬೇಕು ಎಂದು ಇಂಡಿಯನ್​ ಆರ್ಮಿ ಕಡೆಯಿಂದ ಶುಭಕೋರುತ್ತಿದ್ದೇವೆ’ ಎಂದು ಆ ವಿಡಿಯೋದಲ್ಲಿ ಹೇಳಲಾಗಿದೆ. ಮಂಜು ಪಾವಗಡ ಅವರ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಪ್ರಸ್ತುತ ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಶುಭಾ ಪೂಂಜಾ, ದಿವ್ಯಾ ಸುರೇಶ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ಪ್ರಶಾಂತ್​ ಸಂಬರಗಿ, ಶಮಂತ್​ ಬ್ರೋ ಗೌಡ, ವೈಷ್ಣವಿ ಗೌಡ ನಡುವೆ ಪೈಪೋಟಿ ಮುಂದುವರಿದಿದೆ. ಆ.7 ಮತ್ತು 8ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಕಿಚ್ಚ ಸುದೀಪ್​ ಯಾರನ್ನು ವಿನ್ನರ್​ ಅಂತ ಘೋಷಿಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

ಅರವಿಂದ್​ಗೆ ಗೆಲುವಿನ ಮಾಲೆ, ಮಂಜು ರನ್ನರ್​ ಅಪ್​; ಇದು ಬಿಗ್​ ಬಾಸ್​ ಮನೆ ಭವಿಷ್ಯ

ದಿವ್ಯಾ ಉರುಡುಗ-ಅರವಿಂದ್ ಒಡನಾಟದಿಂದ ಮನೆಯವರಿಗೆ ಕಿರಿಕಿರಿ; ಎಲ್ಲರೆದುರು ಅಸಮಾಧಾನ ಹೊರಹಾಕಿದ ಶುಭಾ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್