AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​

ಇಂಡಿಯನ್​ ಆರ್ಮಿ ಸಮವಸ್ತ್ರ ಧರಿಸಿರುವ ಕರ್ನಾಟಕ ಮೂಲದ ಯೋಧರೊಬ್ಬರು ಮಂಜು ಪರವಾಗಿ ವಿಡಿಯೋ ಮಾಡಿದ್ದಾರೆ. ಮಂಜು ಪಾವಗಡ ಅವರ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​
ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​
TV9 Web
| Edited By: |

Updated on: Jul 29, 2021 | 1:00 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ (Bigg Boss Kannada) ಆರಂಭದಿಂದಲೇ ಮಂಜು ಪಾವಗಡ (Manju Pavagada) ಮಿಂಚಲು ಆರಂಭಿಸಿದರು. ಫಿನಾಲೆಗೆ (Bigg Boss Finale) ಸ್ಪರ್ಧಿಸಲು ಅವರು ಸಮರ್ಥ ಕ್ಯಾಂಡಿಡೇಟ್​ ಎಂದು ಎಲ್ಲರೂ ಹೇಳುತ್ತ ಬಂದಿದ್ದಾರೆ. ಟಾಸ್ಕ್​ನಲ್ಲಿ ಅವರು ಹಿಂದೇಟು ಹಾಕಿದವರೇ ಅಲ್ಲ. ವೀಕ್ಷಕರನ್ನು ನಗಿಸುವಲ್ಲಿಯೂ ಅವರು ಹಿಂದೆ ಬಿದ್ದಿಲ್ಲ. ದಿವ್ಯಾ ಸುರೇಶ್​ ಜೊತೆ ಕಾಲ ಕಳೆಯುತ್ತ ಕೆಲವು ದಿನ ಅವರು ಡಲ್​ ಆಗಿದ್ದರು ಎಂಬುದು ಬಿಟ್ಟರೆ ಮಂಜು ಬಗ್ಗೆ ಬೇರೆ ಯಾವುದೇ ತಕರಾರು ಇಲ್ಲ. ಹಾಗಾಗಿ ಅವರಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಅಚ್ಚರಿ ಎಂದರೆ ಇಂಡಿಯನ್​ ಆರ್ಮಿ (Indian Army) ಕಡೆಯಿಂದಲೂ ಮಂಜುಗೆ ಶುಭ ಹಾರೈಕೆಗಳು ಬಂದಿವೆ.

ಕನ್ನಡ ಬಿಗ್​ ಬಾಸ್​ ಫಿನಾಲೆ ಸಮೀಪಿಸುತ್ತಿದೆ. ಹಾಗಾಗಿ ಎಲ್ಲ ಸ್ಪರ್ಧಿಗಳ ನಡುವೆ ಪೈಪೋಟಿ ಜೋರಾಗಿದೆ. ಯಾರು ಹೆಚ್ಚು ವೋಟ್​ ಪಡೆಯುತ್ತಾರೆ ಎಂಬುದರ ಆಧಾರದ ಮೇಲೆ ಫಿನಾಲೆಗೆ ಎಂಟ್ರಿ ಪಡೆಯುವವರ ಹಣೆಬರಹ ನಿರ್ಧಾರ ಆಗಲಿದೆ. ಆದ್ದರಿಂದ ಎಲ್ಲ ಸ್ಪರ್ಧಿಗಳ ಪರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ. ವಿಶೇಷ ಏನೆಂದರೆ, ಮಂಜುಗೆ ಭಾರತೀಯ ಸೇನೆಯ ಯೋಧರೊಬ್ಬರು ಬೆಂಬಲ ಸೂಚಿಸಿದ್ದಾರೆ.

ಇಂಡಿಯನ್​ ಆರ್ಮಿ ಸಮವಸ್ತ್ರ ಧರಿಸಿರುವ ಕರ್ನಾಟಕ ಮೂಲದ ಸೈನಿಕರೊಬ್ಬರು ಮಂಜು ಪರವಾಗಿ ವಿಡಿಯೋ ಮಾಡಿದ್ದಾರೆ. ‘ಸಮಸ್ತ ಕರ್ನಾಟಕ ಜನತೆಗೆ ನಮಸ್ತೆ. ಮಂಜು ಪಾವಗಡ ಅವರು ಬಿಗ್​ ಬಾಸ್​ ಮನೆಯಲ್ಲಿ ತುಂಬ ಚೆನ್ನಾಗಿ ಆಟ ಆಡುತ್ತಿದ್ದಾರೆ. ಅವರು ಫೈನಲ್​ನಲ್ಲಿ ಗೆದ್ದು ಬರಬೇಕು ಎಂದು ಇಂಡಿಯನ್​ ಆರ್ಮಿ ಕಡೆಯಿಂದ ಶುಭಕೋರುತ್ತಿದ್ದೇವೆ’ ಎಂದು ಆ ವಿಡಿಯೋದಲ್ಲಿ ಹೇಳಲಾಗಿದೆ. ಮಂಜು ಪಾವಗಡ ಅವರ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಪ್ರಸ್ತುತ ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಶುಭಾ ಪೂಂಜಾ, ದಿವ್ಯಾ ಸುರೇಶ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ಪ್ರಶಾಂತ್​ ಸಂಬರಗಿ, ಶಮಂತ್​ ಬ್ರೋ ಗೌಡ, ವೈಷ್ಣವಿ ಗೌಡ ನಡುವೆ ಪೈಪೋಟಿ ಮುಂದುವರಿದಿದೆ. ಆ.7 ಮತ್ತು 8ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಕಿಚ್ಚ ಸುದೀಪ್​ ಯಾರನ್ನು ವಿನ್ನರ್​ ಅಂತ ಘೋಷಿಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

ಅರವಿಂದ್​ಗೆ ಗೆಲುವಿನ ಮಾಲೆ, ಮಂಜು ರನ್ನರ್​ ಅಪ್​; ಇದು ಬಿಗ್​ ಬಾಸ್​ ಮನೆ ಭವಿಷ್ಯ

ದಿವ್ಯಾ ಉರುಡುಗ-ಅರವಿಂದ್ ಒಡನಾಟದಿಂದ ಮನೆಯವರಿಗೆ ಕಿರಿಕಿರಿ; ಎಲ್ಲರೆದುರು ಅಸಮಾಧಾನ ಹೊರಹಾಕಿದ ಶುಭಾ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್