AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​

ಇಂಡಿಯನ್​ ಆರ್ಮಿ ಸಮವಸ್ತ್ರ ಧರಿಸಿರುವ ಕರ್ನಾಟಕ ಮೂಲದ ಯೋಧರೊಬ್ಬರು ಮಂಜು ಪರವಾಗಿ ವಿಡಿಯೋ ಮಾಡಿದ್ದಾರೆ. ಮಂಜು ಪಾವಗಡ ಅವರ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​
ಬಿಗ್​ ಬಾಸ್​ ಮಂಜುಗೆ ಇಂಡಿಯನ್ ಆರ್ಮಿ ಕಡೆಯಿಂದ ಆಲ್​ ದಿ ಬೆಸ್ಟ್​; ವಿಡಿಯೋ ವೈರಲ್​
TV9 Web
| Edited By: |

Updated on: Jul 29, 2021 | 1:00 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ (Bigg Boss Kannada) ಆರಂಭದಿಂದಲೇ ಮಂಜು ಪಾವಗಡ (Manju Pavagada) ಮಿಂಚಲು ಆರಂಭಿಸಿದರು. ಫಿನಾಲೆಗೆ (Bigg Boss Finale) ಸ್ಪರ್ಧಿಸಲು ಅವರು ಸಮರ್ಥ ಕ್ಯಾಂಡಿಡೇಟ್​ ಎಂದು ಎಲ್ಲರೂ ಹೇಳುತ್ತ ಬಂದಿದ್ದಾರೆ. ಟಾಸ್ಕ್​ನಲ್ಲಿ ಅವರು ಹಿಂದೇಟು ಹಾಕಿದವರೇ ಅಲ್ಲ. ವೀಕ್ಷಕರನ್ನು ನಗಿಸುವಲ್ಲಿಯೂ ಅವರು ಹಿಂದೆ ಬಿದ್ದಿಲ್ಲ. ದಿವ್ಯಾ ಸುರೇಶ್​ ಜೊತೆ ಕಾಲ ಕಳೆಯುತ್ತ ಕೆಲವು ದಿನ ಅವರು ಡಲ್​ ಆಗಿದ್ದರು ಎಂಬುದು ಬಿಟ್ಟರೆ ಮಂಜು ಬಗ್ಗೆ ಬೇರೆ ಯಾವುದೇ ತಕರಾರು ಇಲ್ಲ. ಹಾಗಾಗಿ ಅವರಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಅಚ್ಚರಿ ಎಂದರೆ ಇಂಡಿಯನ್​ ಆರ್ಮಿ (Indian Army) ಕಡೆಯಿಂದಲೂ ಮಂಜುಗೆ ಶುಭ ಹಾರೈಕೆಗಳು ಬಂದಿವೆ.

ಕನ್ನಡ ಬಿಗ್​ ಬಾಸ್​ ಫಿನಾಲೆ ಸಮೀಪಿಸುತ್ತಿದೆ. ಹಾಗಾಗಿ ಎಲ್ಲ ಸ್ಪರ್ಧಿಗಳ ನಡುವೆ ಪೈಪೋಟಿ ಜೋರಾಗಿದೆ. ಯಾರು ಹೆಚ್ಚು ವೋಟ್​ ಪಡೆಯುತ್ತಾರೆ ಎಂಬುದರ ಆಧಾರದ ಮೇಲೆ ಫಿನಾಲೆಗೆ ಎಂಟ್ರಿ ಪಡೆಯುವವರ ಹಣೆಬರಹ ನಿರ್ಧಾರ ಆಗಲಿದೆ. ಆದ್ದರಿಂದ ಎಲ್ಲ ಸ್ಪರ್ಧಿಗಳ ಪರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ. ವಿಶೇಷ ಏನೆಂದರೆ, ಮಂಜುಗೆ ಭಾರತೀಯ ಸೇನೆಯ ಯೋಧರೊಬ್ಬರು ಬೆಂಬಲ ಸೂಚಿಸಿದ್ದಾರೆ.

ಇಂಡಿಯನ್​ ಆರ್ಮಿ ಸಮವಸ್ತ್ರ ಧರಿಸಿರುವ ಕರ್ನಾಟಕ ಮೂಲದ ಸೈನಿಕರೊಬ್ಬರು ಮಂಜು ಪರವಾಗಿ ವಿಡಿಯೋ ಮಾಡಿದ್ದಾರೆ. ‘ಸಮಸ್ತ ಕರ್ನಾಟಕ ಜನತೆಗೆ ನಮಸ್ತೆ. ಮಂಜು ಪಾವಗಡ ಅವರು ಬಿಗ್​ ಬಾಸ್​ ಮನೆಯಲ್ಲಿ ತುಂಬ ಚೆನ್ನಾಗಿ ಆಟ ಆಡುತ್ತಿದ್ದಾರೆ. ಅವರು ಫೈನಲ್​ನಲ್ಲಿ ಗೆದ್ದು ಬರಬೇಕು ಎಂದು ಇಂಡಿಯನ್​ ಆರ್ಮಿ ಕಡೆಯಿಂದ ಶುಭಕೋರುತ್ತಿದ್ದೇವೆ’ ಎಂದು ಆ ವಿಡಿಯೋದಲ್ಲಿ ಹೇಳಲಾಗಿದೆ. ಮಂಜು ಪಾವಗಡ ಅವರ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಪ್ರಸ್ತುತ ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಶುಭಾ ಪೂಂಜಾ, ದಿವ್ಯಾ ಸುರೇಶ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ಪ್ರಶಾಂತ್​ ಸಂಬರಗಿ, ಶಮಂತ್​ ಬ್ರೋ ಗೌಡ, ವೈಷ್ಣವಿ ಗೌಡ ನಡುವೆ ಪೈಪೋಟಿ ಮುಂದುವರಿದಿದೆ. ಆ.7 ಮತ್ತು 8ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಕಿಚ್ಚ ಸುದೀಪ್​ ಯಾರನ್ನು ವಿನ್ನರ್​ ಅಂತ ಘೋಷಿಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

ಅರವಿಂದ್​ಗೆ ಗೆಲುವಿನ ಮಾಲೆ, ಮಂಜು ರನ್ನರ್​ ಅಪ್​; ಇದು ಬಿಗ್​ ಬಾಸ್​ ಮನೆ ಭವಿಷ್ಯ

ದಿವ್ಯಾ ಉರುಡುಗ-ಅರವಿಂದ್ ಒಡನಾಟದಿಂದ ಮನೆಯವರಿಗೆ ಕಿರಿಕಿರಿ; ಎಲ್ಲರೆದುರು ಅಸಮಾಧಾನ ಹೊರಹಾಕಿದ ಶುಭಾ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್