AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ

ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಹಾಗೂ ಗಿಲ್ಲಿ ನಟ ನಡುವೆ ಡಿಸೆಂಬರ್ 19ರ ಸಂಚಿಕೆಯಲ್ಲಿ ದೊಡ್ಡ ಕಿರಿಕ್ ನಡೆದಿತ್ತು. ಕಾವ್ಯಾ ಅವರು ಗಿಲ್ಲಿಗೆ ಗಂಭೀರವಾಗಿ ವಾರ್ನ್ ಮಾಡಿದ್ದು, "ನಿನಗೆ ಮಾನ, ಮರ್ಯಾದೆ, ಸ್ವಾಭಿಮಾನ ಏನು ಇಲ್ಲ" ಎಂದು ನೇರವಾಗಿ ಹೇಳಿದ್ದಾರೆ. ಗಿಲ್ಲಿ ಇದನ್ನು ಹಗುರವಾಗಿ ಪರಿಗಣಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ
ಕಾವ್ಯಾ-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Dec 20, 2025 | 7:30 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಯಾವಾಗಲೂ ಗಂಭೀರವಾಗಿಯೇ ಕಿರಿಕ್​​ಗಳು ಆಗುತ್ತಾ ಇರುತ್ತವೆ. ಕಾವ್ಯಾ ಆಗಾಗ ಗಿಲ್ಲಿ ಮೇಲೆ ರೇಗಾಡುತ್ತಾರೆ. ಆದರೆ, ಗಿಲ್ಲಿ ಮಾತ್ರ ಯಾವಾಗಲೂ ಕಾವ್ಯಾ ಮೇಲೆ ಕೋಪ ತೋರಿಸಿಲ್ಲ. ಈಗ ಡಿಸೆಂಬರ್ 19ರ ಎಪಿಸೋಡ್​ನಲ್ಲಿ ಗಿಲ್ಲಿಗೆ ಕಾವ್ಯಾ ಅವರು ಗಂಭೀರವಾಗಿಯೇ ವಾರ್ನ್ ಮಾಡಿದ್ದಾರೆ. ಆದರೆ, ಗಿಲ್ಲಿ ಇದನ್ನು ಹಗುರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಗಿಲ್ಲಿ ನಟ ಅವರು ಬಿಗ್ ಬಾಸ್​ಗೆ ಬಂದಾಗ ಕಾವ್ಯಾ ಜೊತೆ ಜಂಟಿ ಆದರು. ಕೆಲ ವಾರ ಇಬ್ಬರೂ ಒಟ್ಟಿಗೆ ಇರಬೇಕಾಯಿತು. ಬಿಗ್ ಬಾಸ್​ ಹೊರಗೂ ಇವರ ಪರಿಚಯ ಇದ್ದಿದ್ದರಿಂದ ಕೆಮಿಸ್ಟ್ರಿ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿತು. ಒಬ್ಬರಿಗೊಬ್ಬರು ಬೆಂಬಲ ನೀಡುತ್ತಾ ಸಾಗುತ್ತಿದ್ದಾರೆ. ಆದರೆ, ನಂತರದ ದಿನಗಳಲ್ಲಿ ಚಿತ್ರಣ ಬದಲಾಗಿದೆ.

ಕಾವ್ಯಾ ಅವರು ಅನೇಕ ಬಾರಿ ಗಿಲ್ಲಿ ಮೇಲೆ ರೇಗಾಡಿದ್ದಾರೆ. ಗಿಲ್ಲಿ ಅವರು ನಡೆದುಕೊಳ್ಳುವ ರೀತಿ ಕಾವ್ಯಾಗೆ ಇಷ್ಟ ಆಗೋದಿಲ್ಲ. ಇದನ್ನು ನೇರವಾಗಿ ಹೇಳಿದಾಗ ಅವರು ತಿದ್ದಿಕೊಳ್ಳೋದಿಲ್ಲ. ಡಿಸೆಂಬರ್ 19ರ ಎಪಿಸೋಡ್​ನಲ್ಲಿ ಏರು ಧ್ವನಿಯಲ್ಲಿ ಮಾತನಾಡಿದ್ದು ಸರಿ ಅಲ್ಲ ಎಂಬುದನ್ನು ಚಾಕೋಲೇಟ್ ನೀಡಿ ಇತರ ಸ್ಪರ್ಧಿಗಳಿಗೆ ಹೇಳಬೇಕಿತ್ತು. ಗಿಲ್ಲಿ ಅವರು ಕಾವ್ಯಾಗೆ ಈ ಮಾತನ್ನು ಹೇಳಿದರು. ಹೋಗುವಾಗ ಗಿಲ್ಲಿ ಅವರು ಕಾವ್ಯಾಗೆ ಕೈ ಕೊಡೋ ಪ್ರಯತ್ನ ಮಾಡಿದರು. ಆದರೆ, ಅವರು ಕೇರೇ ಮಾಡದೇ ಹೋದರು. ಇದು ಕೂಡ ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ: ಒಂದಲ್ಲಾ ಒಂದು ದಿನ ನಾನು ದೊಡ್ಡ ಸೆಲೆಬ್ರಿಟಿ ಆಗ್ತೀನಿ ಎಂದಿದ್ದ ಗಿಲ್ಲಿ ನಟ

ನಂತರ ಕಾವ್ಯಾ ಮೊಟ್ಟೆಯನ್ನು ತೆಗೆದುಕೊಳ್ಳಲು ಗಿಲ್ಲಿ ಹೋದರು. ಇದು ಕಾವ್ಯಾಗೆ ಕೋಪ ತರಿಸಿದೆ. ‘ನಿನಗೆ ಮಾನ, ಮರ್ಯಾದೆ, ಸ್ವಾಭಿಮಾನ ಏನು ಇಲ್ಲ’ ಎಂದು ನೇರವಾಗಿಯೇ ಹೇಳಿದ್ದಾರೆ. ಇದಕ್ಕೆ ಗಿಲ್ಲಿ ವಿರೋಧ ಹೊರಹಾಕಿಲ್ಲ. ‘ನಾನು ಇದಕ್ಕೆ ವಿರೋಧ ಹೊರಹಾಕಲ್ಲ. ನನಗೆ ಮಾನ-ಮರ್ಯಾದೆ ಇದೆ ಎಂದು ಒಪ್ಪಿಕೊಂಡಿದ್ದೀನಿ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ