AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ

ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಹಾಗೂ ಗಿಲ್ಲಿ ನಟ ನಡುವೆ ಡಿಸೆಂಬರ್ 19ರ ಸಂಚಿಕೆಯಲ್ಲಿ ದೊಡ್ಡ ಕಿರಿಕ್ ನಡೆದಿತ್ತು. ಕಾವ್ಯಾ ಅವರು ಗಿಲ್ಲಿಗೆ ಗಂಭೀರವಾಗಿ ವಾರ್ನ್ ಮಾಡಿದ್ದು, "ನಿನಗೆ ಮಾನ, ಮರ್ಯಾದೆ, ಸ್ವಾಭಿಮಾನ ಏನು ಇಲ್ಲ" ಎಂದು ನೇರವಾಗಿ ಹೇಳಿದ್ದಾರೆ. ಗಿಲ್ಲಿ ಇದನ್ನು ಹಗುರವಾಗಿ ಪರಿಗಣಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ
ಕಾವ್ಯಾ-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on:Dec 20, 2025 | 12:59 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಯಾವಾಗಲೂ ಗಂಭೀರವಾಗಿಯೇ ಕಿರಿಕ್​​ಗಳು ಆಗುತ್ತಾ ಇರುತ್ತವೆ. ಕಾವ್ಯಾ ಆಗಾಗ ಗಿಲ್ಲಿ ಮೇಲೆ ರೇಗಾಡುತ್ತಾರೆ. ಆದರೆ, ಗಿಲ್ಲಿ ಮಾತ್ರ ಯಾವಾಗಲೂ ಕಾವ್ಯಾ ಮೇಲೆ ಕೋಪ ತೋರಿಸಿಲ್ಲ. ಈಗ ಡಿಸೆಂಬರ್ 19ರ ಎಪಿಸೋಡ್​ನಲ್ಲಿ ಗಿಲ್ಲಿಗೆ ಕಾವ್ಯಾ ಅವರು ಗಂಭೀರವಾಗಿಯೇ ವಾರ್ನ್ ಮಾಡಿದ್ದಾರೆ. ಆದರೆ, ಗಿಲ್ಲಿ ಇದನ್ನು ಹಗುರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಗಿಲ್ಲಿ ನಟ ಅವರು ಬಿಗ್ ಬಾಸ್​ಗೆ ಬಂದಾಗ ಕಾವ್ಯಾ ಜೊತೆ ಜಂಟಿ ಆದರು. ಕೆಲ ವಾರ ಇಬ್ಬರೂ ಒಟ್ಟಿಗೆ ಇರಬೇಕಾಯಿತು. ಬಿಗ್ ಬಾಸ್​ ಹೊರಗೂ ಇವರ ಪರಿಚಯ ಇದ್ದಿದ್ದರಿಂದ ಕೆಮಿಸ್ಟ್ರಿ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿತು. ಒಬ್ಬರಿಗೊಬ್ಬರು ಬೆಂಬಲ ನೀಡುತ್ತಾ ಸಾಗುತ್ತಿದ್ದಾರೆ. ಆದರೆ, ನಂತರದ ದಿನಗಳಲ್ಲಿ ಚಿತ್ರಣ ಬದಲಾಗಿದೆ.

ಕಾವ್ಯಾ ಅವರು ಅನೇಕ ಬಾರಿ ಗಿಲ್ಲಿ ಮೇಲೆ ರೇಗಾಡಿದ್ದಾರೆ. ಗಿಲ್ಲಿ ಅವರು ನಡೆದುಕೊಳ್ಳುವ ರೀತಿ ಕಾವ್ಯಾಗೆ ಇಷ್ಟ ಆಗೋದಿಲ್ಲ. ಇದನ್ನು ನೇರವಾಗಿ ಹೇಳಿದಾಗ ಅವರು ತಿದ್ದಿಕೊಳ್ಳೋದಿಲ್ಲ. ಡಿಸೆಂಬರ್ 19ರ ಎಪಿಸೋಡ್​ನಲ್ಲಿ ಏರು ಧ್ವನಿಯಲ್ಲಿ ಮಾತನಾಡಿದ್ದು ಸರಿ ಅಲ್ಲ ಎಂಬುದನ್ನು ಚಾಕೋಲೇಟ್ ನೀಡಿ ಇತರ ಸ್ಪರ್ಧಿಗಳಿಗೆ ಹೇಳಬೇಕಿತ್ತು. ಗಿಲ್ಲಿ ಅವರು ಕಾವ್ಯಾಗೆ ಈ ಮಾತನ್ನು ಹೇಳಿದರು. ಹೋಗುವಾಗ ಗಿಲ್ಲಿ ಅವರು ಕಾವ್ಯಾಗೆ ಕೈ ಕೊಡೋ ಪ್ರಯತ್ನ ಮಾಡಿದರು. ಆದರೆ, ಅವರು ಕೇರೇ ಮಾಡದೇ ಹೋದರು. ಇದು ಕೂಡ ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ: ಒಂದಲ್ಲಾ ಒಂದು ದಿನ ನಾನು ದೊಡ್ಡ ಸೆಲೆಬ್ರಿಟಿ ಆಗ್ತೀನಿ ಎಂದಿದ್ದ ಗಿಲ್ಲಿ ನಟ

ನಂತರ ಕಾವ್ಯಾ ಮೊಟ್ಟೆಯನ್ನು ತೆಗೆದುಕೊಳ್ಳಲು ಗಿಲ್ಲಿ ಹೋದರು. ಇದು ಕಾವ್ಯಾಗೆ ಕೋಪ ತರಿಸಿದೆ. ‘ನಿನಗೆ ಮಾನ, ಮರ್ಯಾದೆ, ಸ್ವಾಭಿಮಾನ ಏನು ಇಲ್ಲ’ ಎಂದು ನೇರವಾಗಿಯೇ ಹೇಳಿದ್ದಾರೆ. ಇದಕ್ಕೆ ಗಿಲ್ಲಿ ವಿರೋಧ ಹೊರಹಾಕಿಲ್ಲ. ‘ನಾನು ಇದಕ್ಕೆ ವಿರೋಧ ಹೊರಹಾಕಲ್ಲ. ನನಗೆ ಮಾನ-ಮರ್ಯಾದೆ ಇದೆ ಎಂದು ಒಪ್ಪಿಕೊಂಡಿದ್ದೀನಿ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Sat, 20 December 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ