AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾರ್ಗೆಟ್ ಮಾಡಿ, ಹೊರಗೆ ಹಾಕಿ ಎಂದ ಐಶ್ವರ್ಯಾಗೆ ಕಿಚ್ಚನ ಕ್ಲಾಸ್

Bigg Boss Kannada: ಬಿಗ್​ಬಾಸ್ ಕನ್ನಡ ಶನಿವಾರದ ಎಪಿಸೋಡ್ ಆರಂಭವಾಗುತ್ತಿದ್ದಂತೆ ನೇರವಾಗಿ ಐಶ್ವರ್ಯಾ ವಿಷಯ ಎತ್ತಿದ ಸುದೀಪ್, ವಿಡಿಯೋ ಒಂದನ್ನು ಪ್ಲೇ ಮಾಡುತ್ತೀನಿ ಎಂದು ಹೇಳಿ, ಐಶ್ವರ್ಯಾ, ಮೋಕ್ಷಿತಾ ಹಾಗೂ ಶಿಶಿರ್ ಮಾತನಾಡುತ್ತಿರುವ ವಿಡಿಯೋ ಹಾಕಿದರು. ವಿಡಿಯೋನಲ್ಲಿ ಐಶ್ವರ್ಯಾ, ಮೋಕ್ಷಿತಾ ಹಾಗೂ ಶಿಶಿರ್ ಅನ್ನು ಉದ್ದೇಶಿಸಿ ‘ಟಾರ್ಗೆಟ್ ಮಾಡಿ, ಟಾರ್ಗೆಟ್ ಮಾಡಿ ನಾಮಿನೇಷನ್ ಮಾಡಿ, ಜನಕ್ಕೂ ಅರ್ಥ ವಾಗುತ್ತಿದೆ. ಬಾಗಿಲಿನ ವರೆಗೆ ಕರೆದುಕೊಂಡು ಹೋಗುವ ಕೆಲಸ ನಾವು ಮಾಡೋಣ, ಆಚೆ ಕಳಿಸೋದನ್ನು ಜನ ಮಾಡುತ್ತಾರೆ’ ಎಂದಿದ್ದರು.

ಟಾರ್ಗೆಟ್ ಮಾಡಿ, ಹೊರಗೆ ಹಾಕಿ ಎಂದ ಐಶ್ವರ್ಯಾಗೆ ಕಿಚ್ಚನ ಕ್ಲಾಸ್
ಬಿಗ್​ಬಾಸ್ ಕನ್ನಡ
ಮಂಜುನಾಥ ಸಿ.
|

Updated on:Dec 14, 2024 | 11:07 PM

Share

ಬಿಗ್​ಬಾಸ್ ಮನೆಯಲ್ಲಿ ಗುಂಪುಗಳು, ಗೆಳೆತನಗಳು ಸಾಮಾನ್ಯ. ನಾಮಿನೇಟ್ ಮಾಡುವಾಗ, ಕಳಪೆ ಕೊಡುವಾಗ ಮಾತನಾಡಿಕೊಂಡಿದ್ದು, ಸಂಜ್ಞೆ ಮಾಡಿಕೊಂಡು ಟಾರ್ಗೆಟ್ ಮಾಡಿಕೊಂಡು ಕಳಪೆ, ನಾಮಿನೇಷನ್ ಕೊಟ್ಟಿರುವ ಹಲವು ಉದಾಹರಣೆ ಇದೆ. ಆದರೆ ಹೀಗೆ ಪೂರ್ವ ನಿರ್ಧಾರ ಮಾಡಿ, ಗುಂಪು ಮಾಡಿಕೊಂಡು ಯಾರೋ ಒಬ್ಬರನ್ನು ಟಾರ್ಗೆಟ್ ಮಾಡುವುದು ಬೇಡ ಎಂದು ಸುದೀಪ್ ಹಲವು ಬಾರಿ ಹೇಳಿದ್ದಾರೆ. ಆದರೆ ಅದನ್ನು ಯಾರೂ ಪಾಲಿಸುತ್ತಿಲ್ಲ. ಇದೀಗ ಇದೇ ಕಾರಣಕ್ಕೆ ಐಶ್ವರ್ಯಾ, ಸುದೀಪ್ ಕೈಯಲ್ಲಿ ಬೈಸಿಕೊಂಡರು.

ಶನಿವಾರದ ಎಪಿಸೋಡ್ ಆರಂಭವಾಗುತ್ತಿದ್ದಂತೆ ನೇರವಾಗಿ ಐಶ್ವರ್ಯಾ ವಿಷಯ ಎತ್ತಿದ ಸುದೀಪ್, ವಿಡಿಯೋ ಒಂದನ್ನು ಪ್ಲೇ ಮಾಡುತ್ತೀನಿ ಎಂದು ಹೇಳಿ, ಐಶ್ವರ್ಯಾ, ಮೋಕ್ಷಿತಾ ಹಾಗೂ ಶಿಶಿರ್ ಮಾತನಾಡುತ್ತಿರುವ ವಿಡಿಯೋ ಹಾಕಿದರು. ವಿಡಿಯೋನಲ್ಲಿ ಐಶ್ವರ್ಯಾ, ಮೋಕ್ಷಿತಾ ಹಾಗೂ ಶಿಶಿರ್ ಅನ್ನು ಉದ್ದೇಶಿಸಿ ‘ಟಾರ್ಗೆಟ್ ಮಾಡಿ, ಟಾರ್ಗೆಟ್ ಮಾಡಿ ನಾಮಿನೇಷನ್ ಮಾಡಿ, ಜನಕ್ಕೂ ಅರ್ಥ ವಾಗುತ್ತಿದೆ. ಬಾಗಿಲಿನ ವರೆಗೆ ಕರೆದುಕೊಂಡು ಹೋಗುವ ಕೆಲಸ ನಾವು ಮಾಡೋಣ, ಆಚೆ ಕಳಿಸೋದನ್ನು ಜನ ಮಾಡುತ್ತಾರೆ’ ಎಂದಿದ್ದರು.

ಈ ವಿಷಯವನ್ನೇ ಇಟ್ಟುಕೊಂಡು ಐಶ್ವರ್ಯಾ ಅವರನ್ನು ಪ್ರಶ್ನೆ ಮಾಡಿದ ಸುದೀಪ್, ಇದು ಆಟ ಆಡುವ ರೀತಿ ಅಲ್ಲ. ನೀವು ಹೀಗೆ ರಾಜಕೀಯ ಮಾಡಿಯೇ ಗೆಲ್ಲಬೇಕು ಎಂದರೆ ನನಗೆ ಎರಡು ಪ್ರಮುಖ ರಾಜಕೀಯ ಪಕ್ಷಗಳಲ್ಲೂ ಪರಿಚಯ ಇದೆ. ಸದಸ್ಯತ್ವ ಕೊಡಿಸುತ್ತೇನೆ ಎಂದರು. ಮುಂದುವರೆದು, ಮೋಕ್ಷಿಯಾ ಬಗ್ಗೆಯೂ ಮಾತನಾಡಿ, ‘ಹಿಂದೆ ನೀವೇ ಗುಂಪಾಗಿ ಆಡಿದವರ ಮೇಲೆ ಕೂಗಾಡಿದ್ದಿರಿ, ಕಿರುಚಾಡಿದ್ದಿರಿ, ಆದರೆ ಈಗ ನೀವೇ ಹೀಗೆ ಮಾಡುತ್ತಿದ್ದೀರ’ ಎಂದರು.

ಇದನ್ನೂ ಓದಿ:ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್: ಯಾವ ಪ್ರಕರಣ?

ಐಶ್ವರ್ಯಾ, ತಮ್ಮ ಮಾತುಗಳ ಬಗ್ಗೆ ಸ್ಪಷ್ಟನೆ ನೀಡುವ ಯತ್ನ ಮಾಡಿದರು. ಆದರೆ ಅದನ್ನು ಸುದೀಪ್ ಒಪ್ಪಲಿಲ್ಲ. ಅಲ್ಲದೆ, ಐಶ್ವರ್ಯಾ ಅವರ ಮಾತಿನ ಬಗ್ಗೆ ರಜತ್, ತ್ರಿವಿಕ್ರಮ್, ಭವ್ಯಾ ಇನ್ನಿತರರು ಅಸಮಾಧಾನ ವ್ಯಕ್ತಪಡಿಸಿದರು. ವಿಡಿಯೋನಲ್ಲಿ ಐಶ್ವರ್ಯಾ ಜೊತೆಗೆ ಇದ್ದ ಮೋಕ್ಷಿತಾ ಸಹ ಐಶ್ವರ್ಯಾ ಆಡಿದ ಮಾತಿನ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:03 pm, Sat, 14 December 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?