AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ಹೊಡೆಯಲು ಹುರುಪು ತುಂಬಿದ ಸುದೀಪ್: ಬದಲಾಗ್ತಾರಾ ಬಿಗ್​ಬಾಸ್ ಮನೆ ಮಂದಿ

Bigg Boss Kannada: ಬಿಗ್​ಬಾಸ್ ಮನೆಯಲ್ಲಿ ವಿನಯ್​ ಇತರೆ ಕೆಲವು ಸ್ಪರ್ಧಿಗಳ ಮೇಲೆ ತಮ್ಮ ದಾರ್ಷ್ಟ್ಯ ಪ್ರದರ್ಶಿಸುತ್ತಿದ್ದಾರೆ. ಸುದೀಪ್ ವಾರಾಂತ್ಯದ ಪಂಚಾಯಿತಿಯಲ್ಲಿ ವಿನಯ್​ರನ್ನು ಹೊಗಳುತ್ತಲೇ ಅವರನ್ನು ಎದುರಿಸುವ ಧೈರ್ಯವನ್ನು ಮನೆ ಮಂದಿಯಲ್ಲಿ ತುಂಬುವ ಕಾರ್ಯ ಮಾಡಿದರು.

ಆನೆ ಹೊಡೆಯಲು ಹುರುಪು ತುಂಬಿದ ಸುದೀಪ್: ಬದಲಾಗ್ತಾರಾ ಬಿಗ್​ಬಾಸ್ ಮನೆ ಮಂದಿ
ಬಿಗ್​ಬಾಸ್ ಸುದೀಪ್
ಮಂಜುನಾಥ ಸಿ.
|

Updated on: Oct 28, 2023 | 11:42 PM

Share

ಬಿಗ್​ಬಾಸ್ (Bigg Boss Kannada) ಮನೆಯಲ್ಲಿ ಈ ವಾರ ಹೆಚ್ಚು ಅಬ್ಬರ ಕೇಳಿದ್ದೆಂದರೆ ಅದು ವಿನಯ್​ ಅವರದ್ದು. ಬಂದ ಮೊದಲ ವಾರ ಜಂಟಲ್​ಮ್ಯಾನ್ ರೀತಿ ವರ್ತಿಸಿದ್ದ, ಬಿಗ್​ಬಾಸ್ ನಿಯಮಗಳ ಬಗ್ಗೆ, ಮೌಲ್ಯಗಳ ಬಗ್ಗೆ ಮಾತನಾಡುತ್ತಾ ಎಲ್ಲರ ಗಮನ ಸೆಳೆದಿದ್ದ ವಿನಯ್ ಬರ ಬರುತ್ತಾ ತಮ್ಮ ದಾರ್ಷ್ಟ್ಯ ಗುಣ ಪ್ರದರ್ಶಿಸುತ್ತಿದ್ದಾರೆ. ತಮ್ಮ ತಪ್ಪು ತೋರಿಸಿದವರ ಬಾಯನ್ನು ರೌಡಿತನ ಬಳಸಿ ಮುಚ್ಚಿಸುತ್ತಿದ್ದಾರೆ. ಗೆದ್ದಾಗ ಎದುರಾಳಿಗಳನ್ನು ಹೀಗಳೆಯುವುದು. ಡ್ರೋನ್ ಪ್ರತಾಪ್, ತನಿಷಾ ಇನ್ನಿತರರ ಮೇಲೆ ದರ್ಪ್ ಪ್ರದರ್ಶನಗಳೆಲ್ಲವನ್ನೂ ಮಾಡಿದ್ದಾರೆ.

ಇಂದು ವಾರಾಂತ್ಯದ ಪಂಚಾಯಿತಿಯಲ್ಲಿ ಸುದೀಪ್, ವಿನಯ್​ರನ್ನು ಹೊಗಳುತ್ತಲೇ, ಮನೆಯ ಇತರೆ ಸದಸ್ಯರಿಗೆ ಅವರ ವಿರುದ್ಧ ನಿಲ್ಲುವ ಧೈರ್ಯ ತುಂಬುವ ಪ್ರಯತ್ನ ಮಾಡಿದರು. ವಿನಯ್​ರನ್ನು ಆನೆಗೆ ಹೋಲಿಸಿದ ಸುದೀಪ್, ಮನೆಯಲ್ಲಿ ಸಿಂಹ, ಹುಲಿಗಳು ಸಹ ಇದ್ದಾರೆ ಎಂದರು. ಆದರೆ ಆ ಹುಲಿ, ಸಿಂಹಗಳು ತಮ್ಮ ತನ ಮರೆತಿವೆ ಎಂದರು.

ಇದನ್ನೂ ಓದಿ:ಬಿಗ್​ಬಾಸ್ ಮನೆ ಸದಸ್ಯರಿಗೆ ಉಡುಗೊರೆ ಕೊಟ್ಟು ಉಪದೇಶ ಮಾಡಿದ ಸುದೀಪ್

ಕಾರ್ತಿಕ್, ತನಿಷಾ, ಸಂಗೀತಾ ಅವರುಗಳು ಹೇಗೆ ವಿನಯ್ ಎದುರು ಮಂಕಾಗಿದ್ದಾರೆ ಎಂದು ಸನ್ನಿವೇಶಗಳನ್ನು ಉದಾಹರಣೆಗಳನ್ನಾಗಿ ನೀಡಿ ಹೇಳಿದ ಸುದೀಪ್, ಬಿಗ್​ಬಾಸ್ ಮನೆಯ ಸದಸ್ಯರೇ ಒಬ್ಬ ಫೈನಲಿಸ್ಟ್​ ಅನ್ನು ನೀವೇ ಆಯ್ದು ಕೊಡುತ್ತಿದ್ದೀರಾ ಇದು ಸರಿಯಾದ ಕ್ರಮವಲ್ಲ ಎಂದರು. ವಿನಯ್​ರದ್ದು ತಪ್ಪಿದ್ದಾಗಲೂ ಅದನ್ನು ಗಟ್ಟಿಯಾಗಿ ಹೇಳುವ ಧೈರ್ಯ ನೀವು ತೋರುತ್ತಿಲ್ಲ. ಬಾಯಿ ಬಿಟ್ಟು ಹೇಳಲು ನೀವೆಲ್ಲ ಹಿಂಜರಿಯುತ್ತಿದ್ದೀರಿ ಆದರೆ ನಿಮಗೆಲ್ಲರಿಗೂ ವಿನಯ್ ಎಂದರೆ ಭಯ ಎಂದರು ಸುದೀಪ್. ಅದಕ್ಕೆ ತಕ್ಕಂತೆ ವಿನಯ್​ ಸಹ ನನಗೆ ಈ ಮನೆಯಲ್ಲಿ ಯಾರೂ ಸಹ ಸ್ಪರ್ಧಿಗಳೇ ಅಲ್ಲ ಎಂದು ಸಹ ಹೇಳಿದರು. ಇದು ಸ್ಪರ್ಧಿಗಳಿಗೆ ಇನ್ನಷ್ಟು ಅವಮಾನ ಉಂಟು ಮಾಡಿತು.

ಸುದೀಪ್​ರ ಮಾತುಗಳು ಹಲವರಿಗೆ ನಾಟಿದಂತಿದೆ. ಮುಂದಿನ ವಾರದಿಂದ ಆದರೂ ತನಿಷಾ, ಡ್ರೋನ್ ಪ್ರತಾಪ್, ಕಾರ್ತಿಕ್, ಸಂಗೀತಾ ಇನ್ನಿತರರು ವಿನಯ್​ ಮಾತುಗಳಿಗೆ ಹೆದರದೆ ಅವರನ್ನು ಧೈರ್ಯವಾಗಿ ಎದುರಿಸುತ್ತಾರಾ ಕಾದು ನೋಡಬೇಕಿದೆ. ಬಿಗ್​ಬಾಸ್ ಕನ್ನಡ ಸೀಸನ್ 10 ಕಲರ್ಸ್ ವಾಹಿನಿಯಲ್ಲಿ ಪ್ರತಿದಿನ ರಾತ್ರಿ 9:30ಕ್ಕೆ ಹಾಗೂ ಜಿಯೋ ಸಿನಿಮಾಸ್​ನಲ್ಲಿ ಪ್ರತಿ ದಿನ 24 ಗಂಟೆ ಲೈವ್ ಪ್ರಸಾರವಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ