AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಅಧಿಕಾರ ಬಳಸಿದ ಕಿಚ್ಚ ಸುದೀಪ್: ಮತ್ತೊಂದು ಮೊದಲಿಗೆ ಸಾಕ್ಷಿಯಾಯ್ತು ಮನೆ

Bigg Boss: ಬಿಗ್​ಬಾಸ್ ಕನ್ನಡ ಸೀಸನ್ 10 ಹಲವು ಮೊದಲುಗಳಿಗೆ ಸಾಕ್ಷಿಯಾಗಿದೆ. ಸ್ವತಃ ಸುದೀಪ್ ಸಹ ಇಷ್ಟು ವರ್ಷಗಳಲ್ಲಿ ಈವರೆಗೆ ಒಮ್ಮೆಯೂ ಬಳಸದ ಅಧಿಕಾರ ಬಳಸಿದ್ದಾರೆ. ಇದೀಗ ಮತ್ತೊಮ್ಮೆ ಇಂಥಹುದೇ ಅಧಿಕಾರ ಬಳಸಿದ್ದಾರೆ.

ವಿಶೇಷ ಅಧಿಕಾರ ಬಳಸಿದ ಕಿಚ್ಚ ಸುದೀಪ್: ಮತ್ತೊಂದು ಮೊದಲಿಗೆ ಸಾಕ್ಷಿಯಾಯ್ತು ಮನೆ
ಸ್ನೇಹಿತ್-ಮೈಖಲ್
ಮಂಜುನಾಥ ಸಿ.
|

Updated on: Dec 03, 2023 | 11:18 PM

Share

ಈ ಬಾರಿಯ ಬಿಗ್​ಬಾಸ್ (BiggBoss) ಮನೆ ಹಲವು ಮೊದಲುಗಳನ್ನು ಕಂಡಿದೆ. ಅತಿ ಹೆಚ್ಚು ವಿವಾದಕ್ಕೂ ಕಾರಣವಾಗಿದೆ. ಬಿಗ್​ಬಾಸ್ ಮನೆಯಿಂದ ಸ್ಪರ್ಧಿ ನೇರವಾಗಿ ಜೈಲಿಗೆ ಹೋಗಿದ್ದಾರೆ, ಜೈಲಿನಿಂದ ಬಿಗ್​ಬಾಸ್ ಮನೆಗೆ ಬಂದಿದ್ದಾರೆ. ಬಿಗ್​ಬಾಸ್ ಮನೆಯ ಬಳಿ ಪೊಲೀಸರು ಬಂದು ಹೋಗಿದ್ದಾರೆ. ಎಲಿಮಿನೇಟ್ ಆದವರು ಮನೆಯಿಂದ ಹೊರಗೆ ಹೋಗದೆ ಉಳಿದಿದ್ದಾರೆ, ಕಳಪೆ ಪಟ್ಟ ಪಡೆದು ಜೈಲಿಗೆ ಹೋದವರು ತಪ್ಪಿಸಿಕೊಂಡು ಹೊರಗೆ ಹೋಗಿದ್ದಾರೆ. ಸುದೀಪ್ ತಮ್ಮ ಕೆಲವು ಅಧಿಕಾರಗಳನ್ನು ಇದೇ ಸೀಸನ್​ನಲ್ಲಿ ಮೊದಲ ಬಾರಿಗೆ ಬಳಸಿದ್ದಾರೆ. ಎಂಟನೇ ವಾರವೂ ಒಬ್ಬರು ಸ್ಪರ್ಧಿ ಹೊರಗೆ ಹೋಗಬೇಕಿತ್ತು ಆದರೆ ಸುದೀಪ್ ತಮ್ಮ ವಿಶೇಷ ಅಧಿಕಾರ ಬಳಸಿ, ಬಿಗ್​ಬಾಸ್ ಕನ್ನಡ ಇತಿಹಾಸದಲ್ಲಿ ಮೊದಲ ಬಾರಿಗೆ ನಿರ್ಣಯವೊಂದನ್ನು ತೆಗೆದುಕೊಂಡಿದ್ದಾರೆ.

ಈ ವಾರ ಮನೆಯಿಂದ ಹೊರಗೆ ಹೋಗಲು ನಾಮಿನೇಟ್ ಆಗಿದ್ದವರ ಪೈಕಿ ಶನಿವಾರದ ಎಪಿಸೋಡ್​ನಲ್ಲಿ ವರ್ತೂರು ಸಂತೋಷ್, ನಮ್ರತಾ, ಡ್ರೋನ್ ಪ್ರತಾಪ್ ಅವರುಗಳು ಸೇಫ್ ಆಗಿದ್ದರು. ಭಾನುವಾರಕ್ಕೆ ವಿನಯ್, ಸಂಗೀತಾ, ತನಿಷಾ, ಮೈಖಲ್ ಹಾಗೂ ಸ್ನೇಹಿತ್ ಉಳಿದುಕೊಂಡಿದ್ದರು. ಭಾನುವಾರ ಎಪಿಸೋಡ್ ಆರಂಭವಾದಾಗ ವಿನಯ್ ಮೊದಲಿಗೆ ಸೇಫ್ ಆದರು ಅವರ ಬಳಿಕ ಸಂಗೀತಾ ಸೇಫ್ ಆದರು. ತನಿಷಾ ಸಹ ಸೇಫ್ ಆಗಿ ಅಂತಿಮವಾಗಿ ಮೈಖಲ್ ಹಾಗೂ ಸ್ನೇಹಿತ್ ಅವರುಗಳು ಕೊನೆಯದಾಗಿ ಉಳಿದರು.

ಇಬ್ಬರೂ ಒಳ್ಳೆಯ ಆಟಗಾರರು. ಈ ವಾರ ಇಬ್ಬರೂ ಬಹಳ ಚೆನ್ನಾಗಿ ಆಡಿದ್ದರು. ಸ್ನೇಹಿತ್ ಅಂತೂ ಚೆನ್ನಾಗಿ ಆಡಿ ಕ್ಯಾಪ್ಟನ್ ಸಹ ಆಗಿದ್ದರು. ಮೈಖಲ್ ಆರಂಭದಿಂದಲೂ ಒಳ್ಳೆಯ ಸ್ಪರ್ಧಿಯೇ. ಇಬ್ಬರಲ್ಲಿ ಯಾರೇ ಹೋದರು ಅದು ಅನ್ಯಾಯವೇ ಆಗಿರುತ್ತಿತ್ತು. ಇದನ್ನೆಲ್ಲ ಗಮನಿಸಿದ ನಿರೂಪಕ ಸುದೀಪ್, ಮೊದಲ ಬಾರಿಗೆ ತಮ್ಮ ವಿಶೇಷ ಅಧಿಕಾರ ಬಳಸಿ ಇಬ್ಬರಲ್ಲಿ ಯಾರನ್ನೂ ಮನೆಯಿಂದ ಹೊರಗೆ ಕಳಿಸಲಿಲ್ಲ. ಆದರೆ ತಾವೇಕೆ ಯಾರನ್ನೂ ಮನೆಯಿಂದ ಹೊರಗೆ ಕಳಿಸಲಿಲ್ಲ ಎಂಬುದಕ್ಕೆ ಕಾರಣವನ್ನೂ ಸಹ ಸುದೀಪ್ ನೀಡಿದರು.

ಇದನ್ನೂ ಓದಿ:‘ಬಿಗ್ ಬಾಸ್ ವಿನ್ ಆಗೋದು ನಾನೇ’ ಎಂದ ವಿನಯ್; ಬೆಂಬಲ ಸೂಚಿಸಿದ ಸ್ನೇಹಿತ್​ಗೆ ವೀಕ್ಷಕರ ಪ್ರಶ್ನೆ

ಈಗ ತಾನೇ ಮನೆಗೆ ಇಬ್ಬರು ಹೊಸಬರು ಬಂದಿದ್ದಾರೆ. ಅವರು ಮನೆಯಲ್ಲಿ ಇರಬೇಕಾದರೆ 50 ದಿನಗಳಿಗಲೂ ಹೆಚ್ಚು ಸಮಯದಿಂದ ಆಡುತ್ತಾ ಬಂದಿರುವ ಗಟ್ಟಿ ಸ್ಪರ್ಧಿಗಳನ್ನು ಹೊರಹಾಕುವುದು ಸರಿಯಲ್ಲ, ಅವರಿಬ್ಬರ ಹೆಸರು ನಾಮಿನೇಷನ್​ನಲ್ಲಿ ಇದ್ದಿದ್ದರೆ ಯಾರು ಹೊರಗೆ ಹೋಗುತ್ತಿದ್ದರು? ಹಾಗೆಂದು ಹೊಸಬರನ್ನು ನಾಮಿನೇಷನ್ ಪಟ್ಟಿಗೆ ಸೇರಿಸುವಂತೆಯೂ ಇಲ್ಲ, ಅವರಿಗೂ ಅವಕಾಶ ಬೇಕು. ಅದನ್ನೆಲ್ಲ ಯೋಚಿಸಿ ಈ ನಿರ್ಣಯ ತೆಗೆದುಕೊಂಡಿದ್ದೇನೆ ಎಂದರು ಸುದೀಪ್.

ಆದರೆ ತಾವು ಸೇಫ್ ಮಾಡಿದ ಸ್ನೇಹಿತ್ ಹಾಗೂ ಮೈಖಲ್ ಅವರನ್ನು ಸುದೀಪ್ ಅವರೇ ಮುಂದಿನ ವಾರಕ್ಕೆ ನಾಮಿನೇಷನ್ ಪಟ್ಟಿಗೆ ಸೇರಿಸಿದರು. ಅಲ್ಲದೆ ಮುಂದಿನ ವಾರಕ್ಕೆ ಕ್ಯಾಪ್ಟನ್ ಆಗಿರುವ ಸ್ನೇಹಿತ್​ಗೆ ಸಹ ಸಂಪೂರ್ಣ ಅಧಿಕಾರ ಸಿಗಬಹುದೇ ಎಂಬ ಬಗ್ಗೆಯೂ ಅನುಮಾನವಿದೆ ಎಂದೂ ಸಹ ಸುದೀಪ್ ಹೇಳಿದರು. ಇಬ್ಬರೂ ಚೆನ್ನಾಗಿ ಆಡಿ ಮುಂದಿನ ವಾರ ಏನಾಗುತ್ತೋ ನೋಡೋಣ ಎಂದರು ಸುದೀಪ್. ಕಿಚ್ಚನ ಕಾರಣದಿಂದ ಸೇಫ್ ಆದ ಸ್ನೇಹಿತ್ ಕಣ್ಣೀರು ಹಾಕಿ ಧನ್ಯವಾದ ಹೇಳಿದರೆ, ಮೈಖಲ್, ಮುಂದಿನ ವಾರ ಇನ್ನೂ ಚೆನ್ನಾಗಿ ಆಡುವ ಭರವಸೆ ನೀಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ