AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಂದರ್ಯಾ ಕ್ಯಾರೆಕ್ಟರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜು; ಕಣ್ಣೀರ ಧಾರೆ

ಬಿಗ್ ಬಾಸ್ ಮನೆಯಲ್ಲಿ ಮಂಜು ಹಾಗೂ ಸೌಂದರ್ಯಾ ನಡುವೆ ತೀವ್ರ ವಾಕ್ಸಮರ ನಡೆದಿದೆ. ನಾಮಿನೇಷನ್ ವೇಳೆ ಸೌಂದರ್ಯಾ ಅವರ ವೈಯಕ್ತಿಕ ನಡೆ ಹಾಗೂ ಕ್ಯಾರೆಕ್ಟರ್ ಕುರಿತು ಮಂಜು ಆಡಿದ ಕೀಳು ಮಾತುಗಳು ಬಿಗ್ ಬಾಸ್ ಮನೆಯ ವಾತಾವರಣವನ್ನು ಕಾವೇರಿಸಿದ್ದು, ಸೌಂದರ್ಯಾ ಕಣ್ಣೀರಿಟ್ಟಿದ್ದಾರೆ. ವಾರಾಂತ್ಯದ ಪಂಚಾಯಿತಿಯಲ್ಲಿ ಸುದೀಪ್ ಈ ವಿಷಯವನ್ನು ಚರ್ಚಿಸುವ ಸಾಧ್ಯತೆಯಿದೆ.

ಸೌಂದರ್ಯಾ ಕ್ಯಾರೆಕ್ಟರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜು; ಕಣ್ಣೀರ ಧಾರೆ
ಸೌಂದರ್ಯಾ-ಮಂಜುImage Credit source: Colors Kannada
ರಾಜೇಶ್ ದುಗ್ಗುಮನೆ
|

Updated on: Sep 17, 2026 | 7:00 AM

Share

ಮುಖ್ಯಾಂಶಗಳು

  • ಹಳೆಯ ವಿಚಾರ ಎತ್ತಿ ಸೌಂದರ್ಯಾ ಕ್ಯಾರೆಕ್ಟರ್ ಅಸಾಸಿನೇಷನ್
  • ತೀವ್ರ ಚರ್ಚೆಗೆ ಕಾರಣವಾಯ್ತು ಮಂಜು ನೀಡಿದ ಹೇಳಿಕೆ
  • ವೀಕೆಂಡ್ ಎಪಿಸೋಡ್‌ನಲ್ಲಿ ಮಂಜುಗೆ ಕ್ಲಾಸ್

ಬಿಗ್ ಬಾಸ್ ಮನೆಯಲ್ಲಿ ಮಾಡರ್ನ್ ಮಹಾಕವಿ ಮಂಜು ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ತಮ್ಮ ಉದ್ದುದ್ದದ ಭಾಷಣ, ಮಾತು ಹಾಗೂ ಅರಚಾಟಗಳ ಮೂಲಕ ಅವರು ಎಲ್ಲರಿಗೂ ಪರಿಚಯ ಆಗಿದ್ದಾರೆ. ಅವರು ಈ ಬಾರಿ ಒಂದು ತಪ್ಪು ಮಾಡಿದ್ದಾರೆ. ಸೌಂದರ್ಯಾ ಅವರ ಕ್ಯಾರೆಕ್ಟರ್ ಬಗ್ಗೆ ಮಾತನಾಡುವ ಮೂಲಕ ತಪ್ಪು ಎಸಗಿದ್ದಾರೆ. ಆ ಬಳಿಕ ಸೌಂದರ್ಯಾ ಅವರು ಕಣ್ಣೀರು ಹಾಕಿದ್ದಾರೆ.

ನಾಮಿನೇಷನ್ ಪ್ರಕ್ರಿಯೆ ವೇಳೆ ಮಂಜು ಅವರು ಸೌಂದರ್ಯಾ ಹೆಸರನ್ನು ಮೊದಲು ತೆಗೆದುಕೊಂಡರು. ಸೌಂದರ್ಯಾ ಹೊಡೆದ ವಿಷಯ ಇಟ್ಟುಕೊಂಡು ಅವರನ್ನು ಮಂಜು ನಾಮಿನೇಟ್ ಮಾಡಿದರು. ಈ ವಿಷಯ ಸೌಂದರ್ಯಾಗೆ ಬೇಸರ ತರಿಸಿತು. ‘ಹೊಡೆದಿದ್ದು ಉದ್ದೇಶ ಪೂರ್ವಕವಲ್ಲ, ಆಟದ ಭರದಲ್ಲಿ ಆಗಿದ್ದು. ಕ್ಷಮೆ ಇರಲಿ’ ಎಂದು ಸೌಂದರ್ಯಾ ಕೇಳಿ ಕೊಂಡಾಗ ಮಂಜು ಓಕೆ ಎಂದಿದ್ದರು. ಈಗ ಮತ್ತೆ ಅದೇ ವಿಷಯ ಎತ್ತಿ ನಾಮಿನೇಟ್ ಮಾಡಿದ್ದು ಅವರಿಗೆ ಸರಿ ಎನಿಸಲಿಲ್ಲ.

ಈ ಬಗ್ಗೆ ಮಂಜುಗೆ ಸೌಂದರ್ಯಾ ಪ್ರಶ್ನೆ ಮಾಡಿದರು. ಆ ಬಳಿಕ ಮಂಜು ಅವರು ಸೌಂದರ್ಯಾ ಅವರ ಕ್ಯಾರೆಕ್ಟರ್ ಬಗ್ಗೆ ಮಾತನಾಡಿದರು. ‘ಸೌಂದರ್ಯಾ ಅವರ ರೀತಿ 18+ ಮಾತನಾಡೋಕೆ ಇಲ್ಲಿಗೆ ಬಂದಿಲ್ಲ.ನಿಮ್ಮಂತಹ ಕೀಳು ಮನಸ್ಥಿತಿ ಅವರನ್ನು ನನಗೆ ನೋಡೋಕೆ ಇಷ್ಟ ಇಲ್ಲ’ ಎಂಬಿತ್ಯಾದಿ ವಿಷಯ ಮಾತನಾಡಿ ಸೌಂದರ್ಯಾ ಕ್ಯಾರೆಕ್ಟರ್ ಸರಿ ಇಲ್ಲ ಎಂದು ಹೇಳಿದರು.

ಆ ಸಮಯದಲ್ಲಿ ಸೌಂದರ್ಯಾ ಏನೂ ಹೇಳಿಲ್ಲ. ಆ ಬಳಿಕ ಅವರಿಗೆ ಈ ವಿಷಯ ಅರ್ಥವಾಗಿದೆ. ಅವರು ಈ ಮಾತನ್ನು ನೆನೆದು ಪದೇ ಪದೇ ಕಣ್ಣೀರು ಹಾಕಿದ್ದಾರೆ. ಇನ್ನು, ಈ ವಿಷಯವಾಗಿ ಎಲ್ಲರೂ ಮಾತನಾಡಲು ಬಂದರೂ ಮಂಜು ಅವರು ಮಾತ್ರ ದೂರವೇ ಓಡಿದ್ದಾರೆ. ‘ನನಗೆ ಈ ವಿಷಯದ ಬಗ್ಗೆ ಚರ್ಚೆ ಮಾಡೋಕೆ ಇಷ್ಟ ಇಲ್ಲ’ ಎಂದು ನೇರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಸಹಸ್ಪರ್ಧಿಗೆ ಹೊಡೆದ ಪ್ರಕರಣ; ಬಿಗ್ ಬಾಸ್ ಬಿಟ್ಟರೂ ಸೌಂದರ್ಯಾಗೆ ತಪ್ಪಿಲ್ಲ ಸಂಕಷ್ಟ 

ಯಾವುದಾದರೂ ಮಹಿಳಾ ಸ್ಪರ್ಧಿ ಬಗ್ಗೆ ಯಾರಾದರೂ ಕೆಟ್ಟದಾಗಿ ಮಾತನಾಡಿದರು ಎಂದರೆ ಸುದೀಪ್ ಅದನ್ನು ಸಹಿಸೋದಿಲ್ಲ. ಹೀಗಾಗಿ, ವೀಕೆಂಡ್ ಎಪಿಸೋಡ್​ನಲ್ಲಿ ಈ ವಿಷಯ ಚರ್ಚೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​