AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಎಲಿಮಿನೇಷನ್​: ತೆರೆಯಿತು ಬಾಗಿಲು; ಬಿಕ್ಕಿ ಬಿಕ್ಕಿ ಅತ್ತ ಪ್ರಶಾಂತ್​ ಸಂಬರಗಿ

Bigg Boss Kannada: ‘ಇನ್ನು ಎರಡು ನಿಮಿಷಗಳಲ್ಲಿ ಮುಖ್ಯದ್ವಾರ ತೆರೆದರೆ ನಿಮ್ಮ ಪ್ರಯಾಣ ಮುಕ್ತಾಯವಾಗಿದೆ ಎಂದು ಅರ್ಥ’ ಎಂದು ಬಿಗ್​ ಬಾಸ್​ ಧ್ವನಿ ಕೇಳಿಸಿದೆ. ಫೋನ್​ ಬೂತ್​ನಲ್ಲಿ ಮಾತನಾಡಿ ಬಂದ ಪ್ರಶಾಂತ್​ ಸಂಬರಗಿ ಚಿಕ್ಕ ಮಕ್ಕಳಂತೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಬಿಗ್​ ಬಾಸ್​ ಎಲಿಮಿನೇಷನ್​: ತೆರೆಯಿತು ಬಾಗಿಲು; ಬಿಕ್ಕಿ ಬಿಕ್ಕಿ ಅತ್ತ ಪ್ರಶಾಂತ್​ ಸಂಬರಗಿ
ಪ್ರಶಾಂತ್​ ಸಂಬರಗಿ
TV9 Web
| Edited By: |

Updated on:Jul 27, 2021 | 11:50 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ಕ್ಕೆ (Bigg Boss Kannada) ಫಿನಾಲೆ ಸಮೀಪಿಸುತ್ತಿದೆ. ಕೊನೇ ದಿನಗಳು ಹತ್ತಿರ ಆಗುತ್ತಿದ್ದಂತೆಯೇ ದೊಡ್ಮನೆಯಲ್ಲಿ ರೋಚಕತೆ ಹೆಚ್ಚಿದೆ. ಬಿಗ್ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ ಸ್ಪರ್ಧಿಗಳಿಗೆ ಹೊಸ ಹೊಸ ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಕಳೆದ ಭಾನುವಾರ (ಜು.25) ಇಬ್ಬರು ಎಲಿಮಿನೇಟ್​ ಆಗುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ ವಾರಾಂತ್ಯದ ಬದಲು ಮಿಡ್​ವೀಕ್​ನಲ್ಲಿ ಎಲಿಮಿನೇಷನ್​ (Elimination) ಇರಲಿದೆ ಎಂಬುದು ನಂತರ ತಿಳಿಯಿತು. ಈಗ ಆ ಕ್ಷಣ ಬಂದೇ ಬಿಟ್ಟಿದೆ. ಹಾಗಾಗಿ  ಪ್ರಶಾಂತ್​ ಸಂಬರಗಿ (Prashanth Sambargi) ಮತ್ತು ಕೆಲವು ಸ್ಪರ್ಧಿಗಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಒಂದು ಫೋನ್​ ಬೂತ್​ ಇಡಲಾಗಿದೆ. ಅದಕ್ಕೆ ಕರೆ ಮಾಡಿ ಒಂದು ಮೆಸೇಜ್​ ನೀಡಲಾಗಿದೆ. ಶುಭಾ ಪೂಂಜಾ, ದಿವ್ಯಾ ಉರುಡುಗ, ಪ್ರಶಾಂತ್​ ಸಂಬರಗಿ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​ ಅವರು ಫೋನ್​ನಲ್ಲಿ ಮಾತನಾಡಿದ್ದಾರೆ. ಇಷ್ಟು ಜನರಲ್ಲಿ ಒಬ್ಬರಿಗೆ ಈಗ ಬಿಗ್​ ಬಾಸ್​ ಪಯಣ ಕೊನೆ ಆಗಲಿದೆ ಎಂದು ಸೂಚನೆ ನೀಡಲಾಗಿದೆ.

ಸಾಮಾನ್ಯವಾಗಿ ವೀಕೆಂಡ್​ನಲ್ಲಿ ಎಲಿಮಿನೇಟ್​ ಆದವರನ್ನು ಸುದೀಪ್​ ಅವರು ವೇದಿಕೆಗೆ ಕರೆಸಿ ಮಾತನಾಡಿಸುತ್ತಾರೆ. ಬಿಗ್​ ಬಾಸ್​ ಮನೆಯ ಅನುಭವವನ್ನು ಹಂಚಿಕೊಳ್ಳಲು ಅವಕಾಶ ನೀಡುತ್ತಾರೆ. ಆದರೆ ಇದು ವಿಡ್​ವೀಕ್​ ಎಲಿಮಿನೇಷನ್​ ಆದಕಾರಣ ಸುದೀಪ್​ ಅನುಪಸ್ಥಿತಿಯಲ್ಲೇ ಸ್ಪರ್ಧಿಗಳು ಔಟ್​ ಆಗಬೇಕಾಗುತ್ತದೆ. ಹಾಗಾಗಿ, ಇರಿಸಲಾಗಿರುವ ಟೆಲಿಫೋನ್​ ಬೂತ್​ ಮೂಲಕವೇ ಸ್ಪರ್ಧಿಗಳ ತಮ್ಮ ಅನುಭವ​ ಹಂಚಿಕೊಳ್ಳಲು ಬಿಗ್​ ಬಾಸ್​ ಅವಕಾಶ ನೀಡಿದ್ದಾರೆ.

‘ಇನ್ನು ಎರಡು ನಿಮಿಷಗಳಲ್ಲಿ ಮುಖ್ಯದ್ವಾರ ತೆರೆದರೆ ನಿಮ್ಮ ಪ್ರಯಾಣ ಮುಕ್ತಾಯವಾಗಿದೆ ಎಂದು ಅರ್ಥ’ ಎಂದು ಬಿಗ್​ ಬಾಸ್​ ಧ್ವನಿ ಕೇಳಿಸಿದೆ. ಫೋನ್​ ಬೂತ್​ನಲ್ಲಿ ಮಾತನಾಡಿ ಬಂದ ಪ್ರಶಾಂತ್​ ಸಂಬರಗಿ ಅವರು ಸಿಕ್ಕಾಪಟ್ಟೆ ಎಮೋಷನಲ್​ ಆಗಿದ್ದಾರೆ. ಚಿಕ್ಕ ಮಕ್ಕಳಂತೆ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋನಲ್ಲಿ ಈ ಅಂಶಗಳು ಗೊತ್ತಾಗಿವೆ. ನಿಜಕ್ಕೂ ಯಾರು ಎಲಿಮಿನೇಟ್​ ಆದರು ಎಂಬುದು ಇಂದಿನ (ಜು.27) ಸಂಚಿಕೆಯಲ್ಲಿ ಬಹಿರಂಗ ಆಗಬೇಕಿದೆ.

ಎರಡನೇ ಇನ್ನಿಂಗ್ಸ್​ ಆರಂಭದಲ್ಲೇ ಪ್ರಶಾಂತ್​ ಸಂಬರಗಿ ಎಲಿಮಿನೇಟ್​ ಆಗಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ ಅದು ಕೇವಲ ಪ್ರ್ಯಾಂಕ್​ ಎಂಬುದು ಕೆಲವೇ ನಿಮಿಷಗಳಲ್ಲಿ ಗೊತ್ತಾಗಿತ್ತು. ಈಗ ನಿಜವಾಗಿಯೂ ಎಲಿಮಿನೇಟ್​ ಆಗುವ ಸಂದರ್ಭ ಎದುರಾಗಿದ್ದು, ಯಾರ ಪಯಣ ಅಂತ್ಯವಾಗಲಿದೆ ಎಂಬುದನ್ನು ನೋಡಲು ವೀಕ್ಷಕರು ಕಾಯುತ್ತಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ನಿಯಮ ಉಲ್ಲಂಘನೆ? ಇದೇ ಮೊದಲ ಬಾರಿಗೆ ಫೋನ್​ ಬಳಕೆ ಮಾಡಿದ ಶಮಂತ್​

ಅರವಿಂದ್​ಗೆ ಗೆಲುವಿನ ಮಾಲೆ, ಮಂಜು ರನ್ನರ್​ ಅಪ್​; ಇದು ಬಿಗ್​ ಬಾಸ್​ ಮನೆ ಭವಿಷ್ಯ

Published On - 11:10 am, Tue, 27 July 21

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ