AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಬೆಳಿಗ್ಗೆ ಯಶ್ ಸಿನಿಮಾ ಹಾಡು; ಇದಕ್ಕಿದೆ ವಿಶೇಷ ಕಾರಣ

ಬಿಗ್ ಬಾಸ್ ಕನ್ನಡದಲ್ಲಿ ಬೆಳಗ್ಗೆ ಯಾವ ಹಾಡುಗಳು ಹಾಕುತ್ತಾರೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸುತ್ತದೆ. ಯಶ್ ಅವರ ‘ಕೆಜಿಎಫ್’ ಚಿತ್ರದ ‘ಧೀರ ಧೀರ..’ ಹಾಡು ಪ್ಲೇ ಆಗಿ ಅಭಿಮಾನಿಗಳನ್ನು ಖುಷಿಪಡಿಸಿದೆ. ದರ್ಶನ್ ಅವರ ಹಾಡು ಕೂಡ ಕೇಳಿಸಿದೆ. ರಾಜಾಡಳಿತದ ಟಾಸ್ಕ್‌ಗೆ ಸಂಬಂಧಿಸಿದಂತೆ ‘ಧೀರ ಧೀರ’ ಹಾಡು ಆಯ್ಕೆಯಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಬೆಳಿಗ್ಗೆ ಯಶ್ ಸಿನಿಮಾ ಹಾಡು; ಇದಕ್ಕಿದೆ ವಿಶೇಷ ಕಾರಣ
ಯಶ್
ರಾಜೇಶ್ ದುಗ್ಗುಮನೆ
|

Updated on:Nov 26, 2024 | 8:35 AM

Share

‘ಬಿಗ್ ಬಾಸ್’ನಲ್ಲಿ ಮುಂಜಾನೆ ಯಾವ ಸಾಂಗ್ ಹಾಕುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಸದಾ ಇರುತ್ತದೆ. ಈ ವಿಚಾರವಾಗಿ ಸದಾ ಚರ್ಚೆಗಳು ನಡೆಯುತ್ತವೆ. ದರ್ಶನ್ ಫ್ಯಾನ್ಸ್ ನಮ್ಮ ನೆಚ್ಚಿನ ನಟನ ಸಾಂಗ್ ಹಾಕೋದಿಲ್ಲ ಎಂದು ತಕರಾರು ತೆಗೆದಿದ್ದು ಇದೆ. ಅದೇ ರೀತಿ ಯಶ್ ಸಿನಿಮಾ ಹಾಡುಗಳು ಪ್ಲೇ ಆಗಿದ್ದು ಕಡಿಮೆ. ಈಗ ನವೆಂಬರ್ 25ರ ಎಪಿಸೋಡ್​ನಲ್ಲಿ ಒಂದು ಅಚ್ಚರಿ ಕಾದಿತ್ತು. ಬಿಗ್ ಬಾಸ್​ನಲ್ಲಿ ಮುಂಜಾನೆ ಯಶ್ ಸಿನಿಮಾ ಹಾಡು ಪ್ಲೇ ಆಗಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಯಶ್ ಹಾಗೂ ಸುದೀಪ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಆದರೆ, ಅವರು ಒಟ್ಟಿಗೆ ಕಾಣಿಸಿಕೊಂಡಿದ್ದು ಕಡಿಮೆ. ಇವರ ಮಧ್ಯೆ ಏನೋ ವೈಮನಸ್ಸು ಇದೆ ಎಂಬ ವಿಚಾರ ಆಗಾಗ ಚರ್ಚೆ ಆಗುತ್ತಾ ಇರುತ್ತದೆ. ಈ ಕಾರಣಕ್ಕೆ ಯಶ್ ಸಿನಿಮಾ ಹಾಡನ್ನು ಸುದೀಪ್ ನೇತೃತ್ವದ ಬಿಗ್ ಬಾಸ್ ಮನೆಯಲ್ಲಿ ಹಾಕೋದಿಲ್ಲ ಎಂದು ಅನೇಕರು ಅಂದುಕೊಂಡಿದ್ದರು. ಆದರೆ, ಅದು ಸುಳ್ಳಾಗಿದೆ.

‘ಕೆಜಿಎಫ್’ ಚಿತ್ರದ ‘ಧೀರ ಧೀರ..’ ಹಾಡನ್ನು ಪ್ಲೇ ಮಾಡಲಾಗಿದೆ. ಈ ಹಾಡನ್ನು ಕೇಳುತ್ತಿದ್ದಂತೆ ಮನೆ ಮಂದಿ ಜೋಶ್​ನಲ್ಲಿ ಕುಣಿದಾಡಿದ್ದಾರೆ. ರವಿ ಬಸ್ರೂರು ಅವರ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿ ಬಂದಿದೆ. ಇದಕ್ಕೆ ರವಿ ಬಸ್ರೂರು ಅವರೇ ಸಾಹಿತ್ಯ ಬರೆದಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ಹಾಡನ್ನು ಪ್ಲೇ ಮಾಡಲು ಒಂದು ಕಾರಣ ಇದೆ. ಅದುವೇ ರಾಜಾಡಳಿತದ ಟಾಸ್ಕ್. ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆಗಿರೋ ಮಂಜು ಅವರು ಮನೆಯ ರಾಜನಾಗಿದ್ದಾರೆ. ಅವರ ಆಡಳಿತದಲ್ಲಿ ಇಡೀ ಮನೆ ಸಾಗುತ್ತಿದೆ. ‘ಧೀರ..’ ಹಾಡಿನಲ್ಲಿ ‘ಧೀರ ಧೀರ ಧೀರ ಈ ಸುಲ್ತಾನ’ ಎನ್ನುವ ಸಾಲುಗಳು ಬರತ್ತವೆ. ಹೀಗಾಗಿ, ಟಾಸ್ಕ್​​ನ ಮುನ್ಸೂಚನೆಯಾಗಿ ಈ ಹಾಡನ್ನು ಹಾಕಲಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ಬಂತು ದರ್ಶನ್ ಹಾಡು; ಕುಣಿದಾಡಿದ ರಜತ್

ಇನ್ನು, ಬಿಗ್ ಬಾಸ್ ಮನೆಯಲ್ಲಿ ದರ್ಶನ್ ಹಾಡು ಕೂಡ ಕೇಳಿಸಿದೆ. ರಜತ್ ಅವರು ‘ಕರಿಯ’ ಚಿತ್ರದ ‘ಕೆಂಚಾಲೋ ಮಂಚಾಲೋ ಹೆಂಗವ್ಳಾ ನಿನ್​ ಡವ್​ಗಳು..’ ಹಾಡನ್ನು ಹೇಳಿದ್ದಾರೆ. ಈ ಹಾಡಿಗೆ ಅವರು ಡ್ಯಾನ್ಸ್ ಕೂಡ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:24 am, Tue, 26 November 24

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!