AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್ ಹಾಗೂ ಚೈತ್ರಾನ ಎಲಿಮಿನೇಟ್ ಮಾಡಲು ಕಾರಣ ಕೊಟ್ಟ ಸುದೀಪ್

ಬಿಗ್ ಬಾಸ್ ಕನ್ನಡ ಮನೆಯಿಂದ ರಜತ್ ಮತ್ತು ಚೈತ್ರಾ ಕುಂದಾಪುರ ಅನಿರೀಕ್ಷಿತವಾಗಿ ಎಲಿಮಿನೇಟ್ ಆಗಿದ್ದಾರೆ. ವೋಟಿಂಗ್ ಇಲ್ಲದೆ ನಡೆದ ಈ ನಿರ್ಗಮನಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ‘ಅವರಿಬ್ಬರೂ ಮನೆಯ ಅತಿಥಿಗಳಾಗಿದ್ದು, ಸ್ಪರ್ಧಿಗಳಿಗೆ ಸ್ಫೂರ್ತಿ ನೀಡಲು ಬಂದಿದ್ದರು. ಅತಿಥಿಗಳಾಗಿದ್ದರೂ ಇಬ್ಬರೂ ಉತ್ತಮವಾಗಿ ಆಟವಾಡಿದ್ದಾರೆ ಎಂದಿದ್ದಾರೆ ಸುದೀಪ್.

ರಜತ್ ಹಾಗೂ ಚೈತ್ರಾನ ಎಲಿಮಿನೇಟ್ ಮಾಡಲು ಕಾರಣ ಕೊಟ್ಟ ಸುದೀಪ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Dec 22, 2025 | 10:25 AM

Share

ಬಿಗ್ ಬಾಸ್ ಮನೆಯಲ್ಲಿ ರಜತ್ ಹಾಗೂ ಚೈತ್ರಾ ಕುಂದಾಪುರ ಅವರು ಎಲಿಮಿನೇಟ್ ಆಗಿದ್ದಾರೆ. ಈ ವಾರ ಯಾವುದೇ ವೋಟಿಂಗ್ ಲೈನ್ ತೆಗೆದಿರಲಿಲ್ಲ. ಆದಾರೂ ಇಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ಬಾರಿಯ ಬಿಗ್ ಬಾಸ್ ‘ಎಕ್ಸ್​​ಪೆಕ್ಟ್​ ದಿ ಅನ್​ ಎಕ್ಸ್​​ಪೆಕ್ಟೆಡ್’ ಥೀಮ್​​ನಲ್ಲಿ ಮೂಡಿ ಬಂದಿದೆ. ಊಹಿಸದ ರೀತಿಯಲ್ಲಿ ಕಳೆದ ವಾರ ರಜತ್ ಹಾಗೂ ಚೈತ್ರಾ ಮನೆಯಿಂದ ಹೊರ ಹೋಗಿದ್ದಾರೆ. ಇವರ ಎಲಿಮಿನೇಷನ್​​ಗೆ ಕಾರಣ ಏನು ಎಂಬುದನ್ನು ಸುದೀಪ್ ತಿಳಿಸಿದ್ದಾರೆ.

ರಜತ್ ಹಾಗೂ ಚೈತ್ರಾ ಮೊದಲು ಅತಿಥಿಯಾಗಿ ಬಂದರು. ನಂತರ ಅವರನ್ನು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂದು ಪರಿಗಣಿಸಿ ಬಿಗ್ ಬಾಸ್ ಮನೆಯಲ್ಲೇ ಇಟ್ಟುಕೊಳ್ಳಾಯಿತು. ಅವರು ಸ್ಪರ್ಧಿಗಳಲ್ಲ, ಅತಿಥಿಗಳು ಎಂಬ ಮಾತು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇತ್ತು. ಆದರೆ, ಯಾರೊಬ್ಬರಿಂದಲೂ ಸ್ಪಷ್ಟನೆ ಸಿಕ್ಕಿರಲಿಲ್ಲ. ಸುದೀಪ್ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಜತ್ ಹಾಗೂ ಚೈತ್ರಾ ಆಟವನ್ನು ಸುದೀಪ್ ಹೊಗಳಿದ್ದಾರೆ.

‘ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಒಂದು ಸ್ಫೂರ್ತಿ ಬರಲಿ ಎಂಬ ಕಾರಣಕ್ಕೆ ನಾವು ಇಬ್ಬರನ್ನು ವೈಲ್ಡ್ ಕಾರ್ಡ್ ಆಗಿ ತಂದೆವು. ಆದರೆ, ಅವರು ಅತಿಥಿಗಳು ಅಷ್ಟೇ. ಮನೆಯಲ್ಲಿ ಇದ್ದಷ್ಟೂ ದಿನ ಈ ವಿಷಯವನ್ನು ಅವರು ಹೇಳಿಲ್ಲ. ಅತಿಥಿ ಎಂಬುದು ಅವರಿಗೆ ಗೊತ್ತಿದ್ದ ಕಾರಣ ಎಲ್ಲರ ಜೊತೆ ಒಳ್ಳೆಯ ರೀತಿಯಲ್ಲಿ ಇರಲು ಪ್ರಯತ್ನಿಸಬಹುದಿತ್ತು. ಆದರೆ, ಅವರು ಆ ರೀತಿ ಮಾಡಲೇ ಇಲ್ಲ. ಚೆನ್ನಾಗಿ ಆಡಿದರು’ ಎಂದು ಸುದೀಪ್ ಮೆಚ್ಚುಗೆ ಸೂಚಿಸಿದರು. ಅವರ ಬಂದ ಕೆಲಸ ಮುಗಿದಿದ್ದರಿಂದ ಹೊರಕ್ಕೆ ಕರೆಸಲಾಯಿತು.

ಇದನ್ನೂ ಓದಿ: ಬಿಗ್​​ಬಾಸ್ ಕನ್ನಡ 12: ವೋಟಿಂಗ್ ಇಲ್ಲದೆ ಇಬ್ಬರು ಹೊರಕ್ಕೆ: ಯಾರದು? ಈ ರೀತಿಯ ಅವಕಾಶ ಸಿಗೋದು ತುಂಬಾನೇ ಅಪರೂಪ. ಚೈತ್ರಾ ಹಾಗೂ ರಜತ್ ಇಂತಹ ಅವಕಾಶ ಪಡೆದು ಖುಷಿಯಾಗಿದ್ದಾರೆ. ಅವರು ತಮ್ಮ ನೂರರಷ್ಟು ಎಫರ್ಟ್​ನ ಹಾಕಿದ್ದಾರೆ. ರಜತ್ ಅವರು ಸಾಕಷ್ಟು ಜನರ ಬಳಿ ಕಿತ್ತಾಟ ಮಾಡಿಕೊಂಡಿದ್ದಾರೆ. ಚೈತ್ರಾ ಇರುವಷ್ಟೇ ದಿನದಲ್ಲಿ ಕಳಪೆ, ಉತ್ತಮ ಪಡೆದಿದ್ದೂ ಅಲ್ಲದೆ ಕ್ಯಾಪ್ಟನ್ ಕೂಡ ಆಗಿದ್ದಾರೆ. ಇದು ಅವರು ಮಾಡಿದ ಅಪರೂಪದ ಸಾಧನೆ ಎಂದರೂ ತಪ್ಪಾಗಲಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:14 am, Mon, 22 December 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?