AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೆಸಾರ್ಟ್​ನ ಲೋಕಲ್ ಬಾರ್ ಮಾಡಿದ್ರು’; ರಜತ್​ಗೆ ಸುದೀಪ್ ಕ್ಲಾಸ್​ ತೆಗೆದುಕೊಂಡ ವಿಡಿಯೋ ವೈರಲ್

ಪ್ರತಿ ಬಾರಿ ಬಿಗ್ ಬಾಸ್‌ನಲ್ಲಿ ನೀಡುವ ರೆಸಾರ್ಟ್ ಟಾಸ್ಕ್ ಈ ಬಾರಿಯೂ ಮುಂದುವರಿದಿದೆ. ಅತಿಥಿಗಳಾಗಿ ಬಂದಿರುವ ರಜತ್, ಮಂಜು ಮನೆಯ ವಾತಾವರಣ ಹಾಳು ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಸೀಸನ್‌ನಲ್ಲಿ ಇದೇ ಟಾಸ್ಕ್ ವೇಳೆ ರಜತ್ ವರ್ತನೆಗೆ ಸುದೀಪ್ ಕ್ಲಾಸ್ ತೆಗೆದುಕೊಂಡ ಹಳೆಯ ವಿಡಿಯೋ ಈಗ ವೈರಲ್ ಆಗಿದೆ. ರಜತ್, ಮಂಜು ಅತಿಯಾಗಿ ವರ್ತಿಸುತ್ತಿದ್ದಾರೆಯೇ ಅಥವಾ ಗಿಲ್ಲಿ ಕೆರಳಿಸಿದ್ದೇ ಇದಕ್ಕೆ ಕಾರಣವೇ ಎಂಬ ಚರ್ಚೆ ಶುರುವಾಗಿದೆ.

‘ರೆಸಾರ್ಟ್​ನ ಲೋಕಲ್ ಬಾರ್ ಮಾಡಿದ್ರು’; ರಜತ್​ಗೆ ಸುದೀಪ್ ಕ್ಲಾಸ್​ ತೆಗೆದುಕೊಂಡ ವಿಡಿಯೋ ವೈರಲ್
ರಜತ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Nov 27, 2025 | 1:04 PM

Share

ಪ್ರತಿ ಬಾರಿಯೂ ಬಿಗ್ ಬಾಸ್​ನಲ್ಲಿ ಸ್ಕೂಲ್ ಟಾಸ್ಕ್, ರೆಸಾರ್ಟ್ ಟಾಸ್ಕ್​ಗಳನ್ನು ನೀಡಲಾಗುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ. ರಜತ್ (Rajat), ಮಂಜು, ಚೈತ್ರಾ, ಮೋಕ್ಷಿತಾ ಹಾಗೂ ತ್ರಿವಿಕ್ರಂ ಅವರು ಶೋಗೆ ಅತಿಥಿಗಳಾಗಿ ಬಂದಿದ್ದಾರೆ. ಇದರಿಂದ ಇಡೀ ಮನೆಯ ವಾತಾವರಣ ಹಾಳಾಗಿದೆ. ಅತಿಥಿಗಳಾಗಿ ಬಂದವರು ಡಾಮಿನೇಟ್ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಕಳೆದ ಸೀಸನ್ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಸುದೀಪ್ ಅವರು ರಜತ್​ಗೆ ಕ್ಲಾಸ್ ತೆಗೆದುಕೊಂಡಿದ್ದರು.

ಕಳೆದ ಬಾರಿಯೂ ಬಿಗ್ ಬಾಸ್ ಮನೆಯಲ್ಲಿ ರೆಸಾರ್ಟ್ ಟಾಸ್ಕ್ ನೀಡಲಾಗಿತ್ತು. ಸ್ಪರ್ಧಿಗಳಲ್ಲೇ ಎರಡು ಗುಂಪನ್ನು ಮಾಡಲಾಗಿತ್ತು. ಒಂದು ಗುಂಪು ಆತಿಥ್ಯ ನೋಡಿಕೊಳ್ಳಬೇಕು, ಮತ್ತೊಂದು ಗುಂಪು ಅತಿಥಿಗಳಾಗಬೇಕು. ನಂತರ ಇದು ಉಲ್ಟಾ ಆಗುತ್ತದೆ. ಅಂದರೆ ಆತಿಥ್ಯ ಪಡೆದವರು ಅತಿಥಿಗಳಾಗಬೇಕು, ಅತಿಥಿಗಳಾಗಿ ಇದ್ದವರು ಆತಿಥ್ಯ ನೀಡಬೇಕು. ರಜತ್ ಅತಿಥಿಯಾದಾಗ ಯಾವ ರೀತಿ ನಡೆದುಕೊಂಡಿದ್ದರು ಎಂಬ ಬಗ್ಗೆ ಸುದೀಪ್ ಅಭಿಪ್ರಾಯ ಹೊರಹಾಕಿದ್ದರು.

‘ಎಲ್ಲರೂ ಲೋಕಲ್ ಬಾರ್ ಅಲ್ಲಿ ಇರೋ ತರ ಇದ್ರಿ. ರಜತ್ ಎಂಟ್ರಿ ಕೊಟ್ಮೇಲೆ ಅದು ರೆಸಾರ್ಟ್​ ಅಲ್ಲವೇ ಅಲ್ಲ. ರೆಸಾರ್ಟ್​ನ ಪಕ್ಕಾ ಲೋಕಲ್ ಬಾರ್ ಆಗಿ ಬದಲಾಯಿಸಿದ್ರು’ ಎಂದು ಸುದೀಪ್ ಅವರು ವೀಕೆಂಡ್​ನಲ್ಲಿ ಹೇಳದ್ದರು. ಈ ವಿಡಿಯೋನ ಗಿಲ್ಲಿ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ.

ರಜತ್ ಹಾಗೂ ಮಂಜು ಬಿಗ್ ಬಾಸ್ ಮನೆಯಲ್ಲಿ ಅತಿಯಾಗಿ ನಡೆದುಕೊಳ್ಳುತ್ತಿದ್ದಾರೆ ಅಭಿಪ್ರಾಯ ವ್ಯಕ್ತವಾಗಿದೆ.ಇನ್ನೂ ಕೆಲವರು ಗಿಲ್ಲಿಯದ್ದು ತಪ್ಪು ಎಂದಿದ್ದಾರೆ. ರಜತ್ ಹಾಗೂ ಮಂಜು ಕೆರಳಿಸಿದ್ದರಿಂದಲೇ ಗಿಲ್ಲಿ ಈ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂಬ ಅಭಿಪ್ರಾಯ ಅನೇಕರದ್ದು.

ಇದನ್ನೂ ಓದಿ: ಗಿಲ್ಲಿ ಅಭಿಮಾನಿಗಳ ಕಾಟಕ್ಕೆ ಹೆದರಿ ಕಮೆಂಟ್ಸ್ ಆಫ್ ಮಾಡಿದ ರಜತ್ ಇಂದು ಅಥವಾ ನಾಳೆ ಈ ಅತಿಥಿಗಳು ಬಿಗ್ ಬಾಸ್ ಮನೆಯಿಂದ ಹೊರ ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವೀಕೆಂಡ್​ವರೆಗೆ ಈ ಅತಿಥಿಗಳು ಇರೋದು ಅನುಮಾನ ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ