AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೆಸಾರ್ಟ್​ನ ಲೋಕಲ್ ಬಾರ್ ಮಾಡಿದ್ರು’; ರಜತ್​ಗೆ ಸುದೀಪ್ ಕ್ಲಾಸ್​ ತೆಗೆದುಕೊಂಡ ವಿಡಿಯೋ ವೈರಲ್

ಪ್ರತಿ ಬಾರಿ ಬಿಗ್ ಬಾಸ್‌ನಲ್ಲಿ ನೀಡುವ ರೆಸಾರ್ಟ್ ಟಾಸ್ಕ್ ಈ ಬಾರಿಯೂ ಮುಂದುವರಿದಿದೆ. ಅತಿಥಿಗಳಾಗಿ ಬಂದಿರುವ ರಜತ್, ಮಂಜು ಮನೆಯ ವಾತಾವರಣ ಹಾಳು ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಸೀಸನ್‌ನಲ್ಲಿ ಇದೇ ಟಾಸ್ಕ್ ವೇಳೆ ರಜತ್ ವರ್ತನೆಗೆ ಸುದೀಪ್ ಕ್ಲಾಸ್ ತೆಗೆದುಕೊಂಡ ಹಳೆಯ ವಿಡಿಯೋ ಈಗ ವೈರಲ್ ಆಗಿದೆ. ರಜತ್, ಮಂಜು ಅತಿಯಾಗಿ ವರ್ತಿಸುತ್ತಿದ್ದಾರೆಯೇ ಅಥವಾ ಗಿಲ್ಲಿ ಕೆರಳಿಸಿದ್ದೇ ಇದಕ್ಕೆ ಕಾರಣವೇ ಎಂಬ ಚರ್ಚೆ ಶುರುವಾಗಿದೆ.

‘ರೆಸಾರ್ಟ್​ನ ಲೋಕಲ್ ಬಾರ್ ಮಾಡಿದ್ರು’; ರಜತ್​ಗೆ ಸುದೀಪ್ ಕ್ಲಾಸ್​ ತೆಗೆದುಕೊಂಡ ವಿಡಿಯೋ ವೈರಲ್
ರಜತ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Nov 27, 2025 | 1:04 PM

Share

ಪ್ರತಿ ಬಾರಿಯೂ ಬಿಗ್ ಬಾಸ್​ನಲ್ಲಿ ಸ್ಕೂಲ್ ಟಾಸ್ಕ್, ರೆಸಾರ್ಟ್ ಟಾಸ್ಕ್​ಗಳನ್ನು ನೀಡಲಾಗುತ್ತದೆ. ಈ ಬಾರಿಯೂ ಅದು ಮುಂದುವರಿದಿದೆ. ರಜತ್ (Rajat), ಮಂಜು, ಚೈತ್ರಾ, ಮೋಕ್ಷಿತಾ ಹಾಗೂ ತ್ರಿವಿಕ್ರಂ ಅವರು ಶೋಗೆ ಅತಿಥಿಗಳಾಗಿ ಬಂದಿದ್ದಾರೆ. ಇದರಿಂದ ಇಡೀ ಮನೆಯ ವಾತಾವರಣ ಹಾಳಾಗಿದೆ. ಅತಿಥಿಗಳಾಗಿ ಬಂದವರು ಡಾಮಿನೇಟ್ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಕಳೆದ ಸೀಸನ್ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಸುದೀಪ್ ಅವರು ರಜತ್​ಗೆ ಕ್ಲಾಸ್ ತೆಗೆದುಕೊಂಡಿದ್ದರು.

ಕಳೆದ ಬಾರಿಯೂ ಬಿಗ್ ಬಾಸ್ ಮನೆಯಲ್ಲಿ ರೆಸಾರ್ಟ್ ಟಾಸ್ಕ್ ನೀಡಲಾಗಿತ್ತು. ಸ್ಪರ್ಧಿಗಳಲ್ಲೇ ಎರಡು ಗುಂಪನ್ನು ಮಾಡಲಾಗಿತ್ತು. ಒಂದು ಗುಂಪು ಆತಿಥ್ಯ ನೋಡಿಕೊಳ್ಳಬೇಕು, ಮತ್ತೊಂದು ಗುಂಪು ಅತಿಥಿಗಳಾಗಬೇಕು. ನಂತರ ಇದು ಉಲ್ಟಾ ಆಗುತ್ತದೆ. ಅಂದರೆ ಆತಿಥ್ಯ ಪಡೆದವರು ಅತಿಥಿಗಳಾಗಬೇಕು, ಅತಿಥಿಗಳಾಗಿ ಇದ್ದವರು ಆತಿಥ್ಯ ನೀಡಬೇಕು. ರಜತ್ ಅತಿಥಿಯಾದಾಗ ಯಾವ ರೀತಿ ನಡೆದುಕೊಂಡಿದ್ದರು ಎಂಬ ಬಗ್ಗೆ ಸುದೀಪ್ ಅಭಿಪ್ರಾಯ ಹೊರಹಾಕಿದ್ದರು.

‘ಎಲ್ಲರೂ ಲೋಕಲ್ ಬಾರ್ ಅಲ್ಲಿ ಇರೋ ತರ ಇದ್ರಿ. ರಜತ್ ಎಂಟ್ರಿ ಕೊಟ್ಮೇಲೆ ಅದು ರೆಸಾರ್ಟ್​ ಅಲ್ಲವೇ ಅಲ್ಲ. ರೆಸಾರ್ಟ್​ನ ಪಕ್ಕಾ ಲೋಕಲ್ ಬಾರ್ ಆಗಿ ಬದಲಾಯಿಸಿದ್ರು’ ಎಂದು ಸುದೀಪ್ ಅವರು ವೀಕೆಂಡ್​ನಲ್ಲಿ ಹೇಳದ್ದರು. ಈ ವಿಡಿಯೋನ ಗಿಲ್ಲಿ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ.

ರಜತ್ ಹಾಗೂ ಮಂಜು ಬಿಗ್ ಬಾಸ್ ಮನೆಯಲ್ಲಿ ಅತಿಯಾಗಿ ನಡೆದುಕೊಳ್ಳುತ್ತಿದ್ದಾರೆ ಅಭಿಪ್ರಾಯ ವ್ಯಕ್ತವಾಗಿದೆ.ಇನ್ನೂ ಕೆಲವರು ಗಿಲ್ಲಿಯದ್ದು ತಪ್ಪು ಎಂದಿದ್ದಾರೆ. ರಜತ್ ಹಾಗೂ ಮಂಜು ಕೆರಳಿಸಿದ್ದರಿಂದಲೇ ಗಿಲ್ಲಿ ಈ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂಬ ಅಭಿಪ್ರಾಯ ಅನೇಕರದ್ದು.

ಇದನ್ನೂ ಓದಿ: ಗಿಲ್ಲಿ ಅಭಿಮಾನಿಗಳ ಕಾಟಕ್ಕೆ ಹೆದರಿ ಕಮೆಂಟ್ಸ್ ಆಫ್ ಮಾಡಿದ ರಜತ್ ಇಂದು ಅಥವಾ ನಾಳೆ ಈ ಅತಿಥಿಗಳು ಬಿಗ್ ಬಾಸ್ ಮನೆಯಿಂದ ಹೊರ ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವೀಕೆಂಡ್​ವರೆಗೆ ಈ ಅತಿಥಿಗಳು ಇರೋದು ಅನುಮಾನ ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು