AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕನೇ ವಾರ ಬಿಗ್​ಬಾಸ್ ಮನೆಯಿಂದ ಹೊರಗೆ ಹೋದವರ್ಯಾರು?

Bigg Boss: ಕಳೆದ ವಾರ ಬಿಗ್​ಬಾಸ್ ಮನೆ ಹಲವು ಜಗಳ, ಮೂದಲಿಕೆ, ಡ್ರಾಮಾಗಳಿಗೆ ಸಾಕ್ಷಿಯಾಯ್ತು. ಬಿಗ್​ಬಾಸ್ ಮನೆಯ ನಿಯಮದಂತೆ ಪ್ರತಿವಾರ ಒಬ್ಬರು ಮನೆಯಿಂದ ಹೊರಗೆ ಹೋಗಬೇಕು. ಈ ವಾರ ಮನೆಯಿಂದ ಹೊಗೆ ಹೋದವರು ಯಾರು?

ನಾಲ್ಕನೇ ವಾರ ಬಿಗ್​ಬಾಸ್ ಮನೆಯಿಂದ ಹೊರಗೆ ಹೋದವರ್ಯಾರು?
ಬಿಗ್​ಬಾಸ್
ಮಂಜುನಾಥ ಸಿ.
|

Updated on: Nov 05, 2023 | 11:34 PM

Share

ಬಿಗ್​ಬಾಸ್ (BiggBoss) ಮನೆ ಈ ವಾರ ಹಲವು ಚಟುವಟಿಕೆಗಳಿಗೆ ಸಾಕ್ಷಿಯಾಯಿತು. ಟಾಸ್ಕ್​ಗಳು ಒಂದೆಡೆಯಾದರೆ ವಿನಯ್ ಹಾಗೂ ಸಂಗೀತಾರ ಜಗಳ. ವಿನಯ್-ನಮ್ರತಾರ ಹರಿತ ನಾಲಗೆಯಿಂದ ಹೊರಡಿದ ಮಾತುಗಳು, ತಂತ್ರ-ಕುತಂತ್ರ. ಪರಸ್ಪರ ನಿಂದನೆ, ಹೀಗಳಿಕೆ ಹೀಗೆ ಹಲವು ಕಾರಣಗಳಿಗೆ ಈ ವಾರದ ಬಿಗ್​ಬಾಸ್ ಎಪಿಸೋಡ್​ಗಳು ಗಮನ ಸೆಳೆದಿದ್ದವು. ಇವುಗಳ ನಡುವೆ ವಿನಯ್ ಆಡಿದ ಬಳೆಯ ಮಾತು ಭಾರಿ ಚರ್ಚೆಗೆ ಕಾರಣವಾಗಿತ್ತು. ಅದಕ್ಕೆ ತಕ್ಕಂತೆ ಸುದೀಪ್ ಸಹ ವಿನಯ್ ಅವರಿಗೆ ಮಾತಿನ ಛಾಟಿ ಬೀಸಿದ್ದಾರೆ. ಇದೀಗ ವಾರಾಂತ್ಯದಲ್ಲಿ ಮನೆಯ ನಿಯಮದಂತೆ ಒಬ್ಬ ಸದಸ್ಯರು ಮನೆಯಿಂದ ಹೊರ ಹೋಗಿದ್ದಾರೆ.

ಈ ವಾರ, ವಿನಯ್, ಕಾರ್ತಿಕ್, ಮೈಖಲ್, ರಕ್ಷಕ್, ಸ್ನೇಹಿತ್, ತುಕಾಲಿ ಸಂತು, ಸಿರಿ, ವರ್ತೂರು ಸಂತೋಷ್, ತನಿಷಾ, ನೀತು ಅವರುಗಳು ನಾಮಿನೇಟ್ ಆಗಿದ್ದರು. ಶನಿವಾರವೇ ಕಾರ್ತಿಕ್, ಸಿರಿ, ವರ್ತೂರು ಸಂತೋಷ್ ಅವರುಗಳು ಸೇಫ್ ಆದರು. ಬಹುತೇಕರು, ಈ ವಾರ ಸಿರಿ ಅಥವಾ ವರ್ತೂರು ಸಂತೋಷ್ ಹೊರ ಹೋಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆ, ಶನಿವಾರವೇ ಹುಸಿಯಾಯಿತು.

ಭಾನುವಾರದ ಎಪಿಸೋಡ್​ನಲ್ಲಿ ಸ್ನೇಹಿತ್, ಮೈಖಲ್, ತನಿಷಾ, ತುಕಾಲಿ ಸಂತು ಅವರುಗಳು ಮೊದಲಿಗೆ ಸೇಫ್ ಆದರು. ಆ ಬಳಿಕ ಅಂತಿಮವಾಗಿ ವಿನಯ್ ಹಾಗೂ ರಕ್ಷಕ್ ಮಾತ್ರವೇ ಉಳಿದರು. ಸುದೀಪ್ ಸೂಚನೆಯಂತೆ ಅವರನ್ನು ಆಕ್ಟಿವಿಟಿ ರೂಂಗೆ ಕಳಿಸಲಾಯ್ತು. ಅಲ್ಲಿ ಇಬ್ಬರ ಮೇಲೂ ಬೆಳಕು ಬಿಡಲಾಯ್ತು. ಇಬ್ಬರ ಮೇಲಿಂದಲೂ ಬೆಳಕು ಆರುತ್ತದೆ. ಯಾರ ಮೇಲೆ ಬೆಳಕು ಮತ್ತೆ ಬರುತ್ತದೆಯೋ ಅವರು ಉಳಿದುಕೊಳ್ಳುತ್ತಾರೆ ಎಂದು ಸುದೀಪ್ ಹೇಳಿದ್ದರು. ಅಂತೆಯೇ ವಿನಯ್ ಮೇಲೆ ಬೆಳಕು ಮತ್ತೆ ಬಂತು, ರಕ್ಷಕ್ ಆಕ್ಟಿವಿಟಿ ರೂಂನಿಂದ ಏಕಾ-ಏಕಿ ಮರೆಯಾದರು. ಅವರಿಗೆ ಬಿಗ್​ಬಾಸ್ ಸದಸ್ಯರಿಗೆ ಬಾಯ್ ಹೇಳುವ ಅವಕಾಶವೂ ಲಭಿಸಲಿಲ್ಲ.

ಇದನ್ನೂ ಓದಿ:ಬಿಗ್​ಬಾಸ್ ಮನೆಯ ಡವ್ ರಾಣಿ ನಮ್ರತಾ ಏಟಿಗೆ ಮನೆಯವರೆಲ್ಲ ಸುಸ್ತೋ-ಸುಸ್ತು

ರಕ್ಷಕ್ ಟಾಸ್ಕ್​ಗಳಲ್ಲಿ ಚೆನ್ನಾಗಿ ಆಡಿದರಾದರೂ ಅತ್ಯುತ್ತಮ ಎನ್ನುವಂಥಹಾ ಪ್ರದರ್ಶನ ಅವರಿಂದ ಬರಲಿಲ್ಲ. ಅಲ್ಲದೆ, ಅಶಿಸ್ತು ಸಹ ಕೆಲವು ಬಾರಿ ಪ್ರದರ್ಶಿಸಿದರು. ಪ್ರತಾಪ್ ಅನ್ನು ಬೈದದ್ದಾಗಲಿ, ಯಾರನ್ನಾದರೂ ಹೊಡೆದು ಹೊರಗೆ ಹೋಗುತ್ತೀನಿ ಎಂದಿದ್ದಾಗಲಿ ಪ್ರೇಕ್ಷಕರಿಗೆ ಇಷ್ಟವಾದಂತಿಲ್ಲ. ಪ್ರತಾಪ್ ಅನ್ನು ಹೊರಗೆ ಕಳಿಸಿದರು. ವಿಶೇಷವೆಂದರೆ ರಕ್ಷಕ್ ಇದೇ ಮೊದಲ ಬಾರಿಗೆ ನಾಮಿನೇಟ್ ಆಗಿದ್ದರು. ಮೊದಲ ಬಾರಿ ನಾಮಿನೇಟ್ ಆದಾಗಲೇ ಮನೆಯಿಂದ ಹೊರಗೆ ಹೋಗಿದ್ದಾರೆ. ಇದು ಸ್ವತಃ ರಕ್ಷಕ್​ಗೂ ಆಘಾತಕಾರಿ ಆಗಿತ್ತು.

ರಕ್ಷಕ್​ಗೆ ಯಾರನ್ನೂ ನೇರವಾಗಿ ನಾಮಿನೇಟ್ ಮಾಡುವ ಅಥವಾ ಈ ವಾರ ಯಾರನ್ನಾದರೂ ಉಳಿಸುವ ಅವಕಾಶವೂ ಸಹ ಲಭಿಸಲಿಲ್ಲ. ಮುಂದಿನ ವಾರದ ನಾಮಿನೇಷನ್ ಸೋಮವಾರದ ಎಪಿಸೋಡ್​ನಲ್ಲಿ ನಡೆಯಲಿದೆ. ಮನೆ ವಾರದಿಂದ ವಾರಕ್ಕೆ ಚಿಕ್ಕದಾಗುತ್ತಾ ಬರುತ್ತಿದೆ. ಮುಂದಿನ ವಾರ ಯಾರು ಮನೆಯಿಂದ ಹೊರಗೆ ಹೋಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಬಿಗ್​ಬಾಸ್ ಕನ್ನಡ ಸೀಸನ್ 10 ಕಲರ್ಸ್ ವಾಹಿನಿಯಲ್ಲಿ ಪ್ರತಿರಾತ್ರಿ 9:30ಕ್ಕೆ ಪ್ರಸಾರವಾಗುತ್ತಿದೆ. ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ 24 ಗಂಟೆ ಲೈವ್ ಪ್ರಸಾರವಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ